ಹೆದ್ದಾರಿ ಸಚಿವರಿಗೆ ಹದಗೆಟ್ಟ ರಸ್ತೆ ಬಗ್ಗೆ ರೋಡ್‌ ಚಾಲೆಂಜ್‌!


Team Udayavani, Sep 29, 2020, 10:43 PM IST

ಹೆದ್ದಾರಿ ಸಚಿವರಿಗೆ ಹದಗೆಟ್ಟ ರಸ್ತೆ ಬಗ್ಗೆ ರೋಡ್‌ ಚಾಲೆಂಜ್‌!

ಮಹಾನಗರ: ಫೇಸ್ಬುಕ್‌ನಲ್ಲಿ ಕೆಲ ದಿನಗಳಿಂದ ಕಪಲ್‌ ಚಾಲೆಂಜ್‌, ಸ್ಮೈಲ್‌ ಚಾಲೆಂಜ್‌ ಸಹಿತ ನಾನಾ ಚಾಲೆಂಜ್‌ಗಳು ಕಾಣಿಸಿಕೊಳ್ಳುತ್ತಿವೆ. ಆದರೆ, ಯುವ ಕಾಂಗ್ರೆಸ್‌ ದ.ಕ. ಜಿಲ್ಲಾಧ್ಯಕ್ಷ ಮಿಥುನ್‌ ರೈ ಅವರು ಹೆದ್ದಾರಿ ಸಚಿವರಿಗೆ ರೋಡ್‌ ಚಾಲೆಂಜ್‌ ಹಾಕುವುದರ ಮೂಲಕ ವಿಶಿಷ್ಟ ಚಾಲೆಂಜ್‌ ಶುರು ಮಾಡಿದ್ದು, ಸಾಮಾಜಿಕ ತಾಣದಲ್ಲಿ ಸದ್ದು ಮಾಡುತ್ತಿದೆ.

ಬೆಂಗಳೂರು- ಗೋವಾ-ಕೊಚ್ಚಿ- ಸೊಲ್ಲಾ ಪುರ ಸಹಿತ ವಿವಿಧ ಪ್ರಮುಖ ನಗರಗಳನ್ನು ಸಂಪರ್ಕಿಸುವ ದ.ಕ. ಜಿಲ್ಲೆಯ ಹೆದ್ದಾರಿಗಳು ಹೊಂಡ-ಗುಂಡಿಗಳಿಂದ ಕೂಡಿದ್ದು, ಸಂಚಾರ ದುಸ್ತರವಾಗಿದೆ. ಬೆಂಗಳೂರಿಗೆ ತೆರಳುವ ಹೆದ್ದಾರಿಯ ಬಿ.ಸಿ. ರೋಡ್‌ನಿಂದ ಗುಂಡ್ಯ ತನಕ ಹಾಗೂ ಸಕಲೇಶಪುರ-ಹಾಸನ ರಸ್ತೆಯಲ್ಲಿ ಸಂಚರಿಸುವುದೇ ಸಂಕಟವಾಗಿದೆ. 6-7 ಗಂಟೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಇದ್ದ ಪ್ರಯಾಣಕ್ಕೆ ಅಲ್ಲಲ್ಲಿ ರಾಡಿ ಎದ್ದ ರಸ್ತೆಯಿಂದಾಗಿ 9-10 ಗಂಟೆ ತಗಲುತ್ತಿದೆ. ಸೊಲ್ಲಾಪುರ ಹೆದ್ದಾರಿಯಲ್ಲಿ ಮನಪಾ ವ್ಯಾಪ್ತಿಯ ಕುಲಶೇಖರದಿಂದ ವಾಮಂಜೂರು ತನಕ ಹೊಂಡ-ಗುಂಡಿಗಳು ಬಿದ್ದು ಅವಘಡಕ್ಕೆ ಕಾರಣವಾಗುತ್ತಿವೆ.

ರಸ್ತೆ ದುರಸ್ತಿಗೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಮಾಡಿದ ಮನವಿಗಳಿಗೆ ಲೆಕ್ಕವಿಲ್ಲ. ಇದಕ್ಕಾಗಿಯೇ ಕಾಂಗ್ರೆಸ್‌ ಯುವ ಘಟಕದ ಅಧ್ಯಕ್ಷ ಮಿಥುನ್‌ ರೈ ರೋಡ್‌ ಚಾಲೆಂಜ್‌ ಆರಂಭಿಸಿದ್ದು, ಹಲವರು ಇದಕ್ಕೆ ಸಹಮತ ವ್ಯಕ್ತಪಡಿಸಿ ತಮ್ಮ ತಮ್ಮ ಪ್ರದೇಶಗಳ ರಸ್ತೆ ಫೋಟೋವನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ, ಸಂಸದ ನಳಿನ್‌ ಕುಮಾರ್‌ ಕಟೀಲು, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಫೇಸುºಕ್‌ ಮತ್ತು ಟ್ವೀಟರ್‌ ಮೂಲಕ “ರೋಡ್‌ ಚಾಲೆಂಜ್‌’ ಸವಾಲು ಹಾಕಿದ್ದಾರೆ.

ಗಮನಸೆಳೆಯಲು ಅಭಿಯಾನ
ಮಂಗಳೂರಿಗೆ ಸಂಪರ್ಕಿಸುವ ಹೆದ್ದಾರಿಗಳು ರಾಡಿ ಎದ್ದು ಹೋಗಿದ್ದು, ಸಂಚಾರಕ್ಕೆ ಸಂಕಷ್ಟವಾಗಿದೆ. ಅಲ್ಲಲ್ಲಿ ಗುಂಡಿ ಬಿದ್ದ ರಸ್ತೆಗಳಿಂದಾಗಿ ಮಂಗಳೂರು-ಬೆಂಗಳೂರು ಸಂಚಾರಕ್ಕೆ ಕನಿಷ್ಠ 3 ಗಂಟೆ ಹೆಚ್ಚುವರಿಯಾಗಿ ತಗಲುತ್ತಿದೆ. ಮಂಗಳೂರಿಗೆ ಹೊರಭಾಗದವರು ಬಂದಾಗ ನನ್ನ ಜಿಲ್ಲೆಯ ರಸ್ತೆಯ ದುಃಸ್ಥಿತಿಯ ಬಗ್ಗೆ ಮಾತನಾಡುವಂತಾಗಬಾರದು; ರಸ್ತೆ ಉತ್ತಮವಾಗಿದೆ ಎಂದೇ ಹೇಳಬೇಕು. ಇದಕ್ಕಾಗಿ ಹೆದ್ದಾರಿ ಸಚಿವರನ್ನು ಗಮನ ಸೆಳೆಯುವ ಪ್ರಯತ್ನವಾಗಿ ರೋಡ್‌ ಚಾಲೆಂಜ್‌ ಅಭಿಯಾನ ಆರಂಭಿಸಿದೆ. ಇದಕ್ಕೆ ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಹಲವರು ಸಾಮಾಜಿಕ ತಾಣಗಳಲ್ಲಿ ರಸ್ತೆ ದುರವಸ್ಥೆಯನ್ನು ಪ್ರಕಟಿಸಿ ಸಚಿವರು, ಸಂಸದರಿಗೆ ಟ್ಯಾಗ್‌ ಮಾಡುತ್ತಿದ್ದಾರೆ.
-ಮಿಥುನ್‌ ರೈ, ಅಧ್ಯಕ್ಷರು, ದ.ಕ. ಜಿಲ್ಲಾ ಯುವ ಕಾಂಗ್ರೆಸ್‌

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.