ಕನಿಷ್ಟ ವೇತನಕ್ಕೆ ಗ್ರಾಪಂ ಗ್ರಂಥಪಾಲಕರ ಆಗ್ರಹ
Team Udayavani, Sep 30, 2020, 4:39 PM IST
ಸಾಂದರ್ಭಿಕ ಚಿತ್ರ
ಬೀದರ: ಗ್ರಾಪಂ ಗ್ರಂಥಾಲಯ ಗ್ರಂಥಪಾಲಕರಿಗೆ ಕಾರ್ಮಿಕರ ಕಾಯ್ದೆಯಂತೆ ವೇತನ ನೀಡುವುದು ಸೇರಿದಂತೆ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಸರ್ಕಾರಿ ಗ್ರಾಮೀಣ ಗ್ರಂಥಾಲಯಗಳ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿವರೆಗೆ ನೌಕರರು ರ್ಯಾಲಿ ನಡೆಸಿ ಸಿಎಂಗೆ ಬರೆದ ಮನವಿ ಪತ್ರ ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಪ್ರತಿಭಟನೆ ರ್ಯಾಲಿಗೆ ವಿಶ್ವ ಕನ್ನಡಿಗರ ಸಂಸ್ಥೆ, ಕರವೇ ಕನಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಬಲಿಸಿ ಭಾಗವಹಿಸಿದ್ದರು.
ಗ್ರಾಮೀಣ ಭಾಗದ ಗ್ರಾಪಂಗಳಲ್ಲಿ 33 ವರ್ಷಗಳಿಂದ ತಿಂಗಳಿಗೆ 300ರಿಂದ 7000ರೂ. ವರೆಗೆ ಗೌರವಧನ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಗ್ರಂಥಪಾಲಕರಿಗೆ ಕಾರ್ಮಿಕಕಾಯ್ದೆಯಂತೆ ತಿಂಗಳಿಗೆ ಕನಿಷ್ಟ 13,200 ರೂ. ವೇತನ ನೀಡಬೇಕು. ಗ್ರಂಥಪಾಲಕರಿಗೆ ತಿಂಗಳ ವೇತನ ನೀಡುವಲ್ಲಿ ವಿಳಂಬ ಹಾಗೂ ತಾರತಮ್ಯ ಮಾಡುತ್ತಿರುವ ಪಿಡಿಒಗಳ ಮೇಲೆ ಕ್ರಮ ಜರುಗಿಸಬೇಕು. ಗ್ರಾಪಂ ಗ್ರಂಥಲಯಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ತಿಳಿಸಿಕೊಡುವ ಮತ್ತು ದಿನ ಪತ್ರಿಕೆಗಳು ಒದಗಿಸುವುದು ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಅವರಿಗೆ ಅನುಕೂಲವಾಗುವ ಪುಸ್ತಕಗಳನ್ನು ಒದಗಿಸಬೇಕು. ಗ್ರಾಮೀಣ ಗ್ರಂಥಾಲಯಗಳ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ ಕಲಿಸುವ ನಿಯತಕಾಲಿಕೆಗಳು, ಕಂಪ್ಯೂಟರ್ ತರಬೇತಿ ಕೊಡಿಸುವ ಕೆಲಸ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
MUST WATCH
ಹೊಸ ಸೇರ್ಪಡೆ
SIT ಎದುರು ಎಚ್.ಡಿ.ರೇವಣ್ಣ ಮೊಂಡಾಟ; ಸ್ವಇಚ್ಛಾ ಹೇಳಿಕೆಗೆ ಸಹಿ ಹಾಕಲು ನಿರಾಕರಣೆ
HD ರೇವಣ್ಣನ ಬಸವನಗುಡಿ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು
KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್
IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ
ಮೊಬೈಲ್ಗಳಲ್ಲಿ ಅಶ್ಲೀಲ ವೀಡಿಯೋ ಇಟ್ಟುಕೊಳ್ಳದಿರಿ: ಎಸ್ಐಟಿ