ಯೋಜಿತ ರೀತಿಯಲ್ಲಿ ಸಾರಿಗೆ ಪುನರಾರಂಭಿಸಿ


Team Udayavani, Sep 30, 2020, 7:32 PM IST

ಯೋಜಿತ ರೀತಿಯಲ್ಲಿ ಸಾರಿಗೆ ಪುನರಾರಂಭಿಸಿ

ಮುಂಬಯಿ, ಸೆ. 29: ಕೋವಿಡ್‌ ಹಿನ್ನೆಲೆ ಆರ್ಥಿಕವಾಗಿ ತೀವ್ರವಾಗಿ ತತ್ತರಿಸಿರುವ ಎಲ್ಲ ವರ್ಗದ ಜನರು ತಮ್ಮ ಜೀವನೋಪಾಯ ವನ್ನು ಗಳಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಉಪನಗರ ಲೋಕಲ್‌ ರೈಲು ಸೇರಿದಂತೆ ಎಲ್ಲ ಸಾರ್ವಜನಿಕ ಸಾರಿಗೆ ಸೌಲಭ್ಯಗಳನ್ನು ಯೋಜಿತ ರೀತಿಯಲ್ಲಿ ಪುನರಾರಂಭಿಸಿ ಎಂದು ಬಾಂಬೆ ಹೈಕೋರ್ಟ್‌ ಮಂಗಳವಾರ ರಾಜ್ಯ ಸರಕಾರಕ್ಕೆ ತಿಳಿಸಿದೆ.

ಕೆಳ ಹಂತದ ನ್ಯಾಯಾಲಯಗಳಿಗೆ ಹಾಜರಾಗಲು ವಕೀಲರಿಗೆ ಅನುಮತಿಯನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ವೇಳೆ ನ್ಯಾಯಾಲಯವು ಈ ಸಲಹೆ ನೀಡಿದೆ. ರಾಜ್ಯ ಸರಕಾರ ವಕೀಲರನ್ನು ಅಗತ್ಯ ಸೇವಾ ಪೂರೈಕೆದಾರರೆಂದು ಪರಿಗಣಿಸಬೇಕು ಮತ್ತು ಕೆಳ ನ್ಯಾಯಾಲಯಗಳಿಗೆ ಹಾಜರಾಗಲು ಉಪನಗರ ರೈಲುಗಳಲ್ಲಿ ಪ್ರಯಾಣಿಸಲು ಅವರಿಗೆ ಅನುಮತಿಯನ್ನು ನೀಡಬೇಕು ಎಂದು ಹಿರಿಯ ವಕೀಲ ಡಾ| ಮಿಲಿಂದ್‌ ಸಾಠೆ ಅವರು ಮಹಾರಾಷ್ಟ್ರ ಮತ್ತು ಗೋವಾದ ಬಾರ್‌ ಕೌನ್ಸಿಲ್‌ ಸಲ್ಲಿಸಿದ ಪಿಐಎಲ್‌ ಕುರಿತ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ದೀಪಂಕರ್‌ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್‌.

ಕುಲಕರ್ಣಿ ನೇತೃತ್ವದ ನ್ಯಾಯಪೀಠಕ್ಕೆ ಮನವಿ ಮಾಡಿದರು. ಆದಾಗ್ಯೂ ಸರಕಾರ ಪರ ವಕೀಲೆ ಪೂರ್ಣಿಮಾ ಕಾಂತರಿಯಾ ಅವರು ಈ ಮನವಿಯನ್ನು ವಿರೋಧಿಸಿದ್ದು, ಪ್ರಯಾಣದ ನಿರ್ಬಂಧಗಳ ಹೊರತಾಗಿಯೂ ಪೀಕ್‌ ಅವಧಿಯಲ್ಲಿ ಉಪನಗರ ರೈಲುಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿರುವುದರಿಂದ ಕೋವಿಡ್‌ ಪರಿಸ್ಥತಿ ಇನ್ನಷ್ಟು ಕೆಟ್ಟದಾಗುತ್ತದೆ ಎಂದು ವಾದಿಸಿದ್ದಾರೆ.

ಪೀಕ್‌ ಅವಧಿಯಲ್ಲಿ ರೈಲುಗಳು ತುಂಬಿರುವುದರಿಂದ ಕೆಳ ನ್ಯಾಯಾಲಯಗಳು ಮಧ್ಯಾಹ್ನ 2 ಗಂಟೆಯಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಬಹುದಾಗಿದೆ ಎಂದು ನ್ಯಾಯಪೀಠವು ಸಲಹೆಯನ್ನು ನೀಡಿದೆ. ಈ ಕ್ರಮವು ವಕೀಲರಿಗೆ ಮಧ್ಯಾಹ್ನ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ನಾವು ಪರಿಸ್ಥಿತಿಯನ್ನು ನಿವಾರಿಸುವ ಮಾರ್ಗಗಳ ಬಗ್ಗೆ ಯೋಚಿಸಬೇಕು. ಓಣಂ ಆಚರಣೆಯ ಅನಂತರ ಕೋವಿಡ್‌ ಪ್ರಕರಣಗಳಲ್ಲಿ ಶೇ. 126ರಷ್ಟು ಏರಿಕೆಯನ್ನು ಕಂಡಿರುವ ಕೇರಳದಲ್ಲಿ ಏನಾಗಿದೆ ಎಂಬುದರ ಬಗ್ಗೆ ನಾವು ಎಚ್ಚರ ವಹಿಸಬೇಕಾಗಿದೆ ಎಂದೂ ಸಿಜೆ ದತ್ತಾ ತಿಳಿಸಿದ್ದಾರೆ.

ವಕೀಲರನ್ನು ಮಾತ್ರ ಅನುಮತಿಸುವುದು ನಮ್ಮ ಕಡೆಯಿಂದ ಪಕ್ಷಪಾತ ಮಾಡಿದಂತಾಗಲಿದೆ. ನಾವು ಕೇವಲ ವಕೀಲರ ಬಗ್ಗೆ ಯೋಚಿಸಲು ಸಾಧ್ಯವಿಲ್ಲ, ಇತರ ಕ್ಷೇತ್ರಗಳ ಜನರ ಬಗ್ಗೆಯೂ ಯೋಚಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ. ಅ. 5 ರೊಳಗೆ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುವ ಉದ್ದೇಶದಿಂದ ಈ ಸಲಹೆಗಳ ಒಂದು ಪ್ರತಿಯನ್ನು ಮಹಾರಾಷ್ಟ್ರ ಸರಕಾರದೊಂದಿಗೆ ಹಂಚಿಕೊಳ್ಳುವಂತೆ ನ್ಯಾಯಾಲಯವು ಅರ್ಜಿದಾರರ ಪರ ವಕೀಲರನ್ನು ಕೇಳಿದೆ. ಸಂಬಂ ತ ಅರ್ಜಿಗಳ ಬಗ್ಗೆ ಅ. 6ರಂದು ನಡೆಯಲಿರುವ ಮುಂದಿನ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ

ತಮ್ಮ ನಿರ್ಧಾರವನ್ನು ತಿಳಿಸುವಂತೆ ರಾಜ್ಯ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಟಾಪ್ ನ್ಯೂಸ್

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.