Unlock5: ಥಿಯೇಟರ್, ಮಲ್ಟಿಪ್ಲೆಕ್ಸ್ ತೆರೆಯಲು ಅಸ್ತು; ಶಾಲೆ ತೆರೆಯುವ ನಿರ್ಧಾರ ರಾಜ್ಯಗಳದ್ದು


Team Udayavani, Sep 30, 2020, 8:42 PM IST

Unlock 5: ಥಿಯೇಟರ್, ಮಲ್ಟಿಪ್ಲೆಕ್ಸ್ ತೆರೆಯಲು ಅಸ್ತು ; ಶಾಲೆ ತೆರೆಯುವ ನಿರ್ಧಾರ ರಾಜ್ಯಗಳದ್ದು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ 19 ಸಂಬಂಧಿತ ಅನ್ ಲಾಕ್ ಪ್ರಕ್ರಿಯೆಯನ್ನು ಇನ್ನಷ್ಟು ಸಡಿಲಗೊಳಿಸಿರುವ ಕೇಂದ್ರ ಗೃಹ ಸಚಿವಾಲಯವು ಬಹು ನಿರೀಕ್ಷಿತ ಸಿನೆಮಾ ಥಿಯೇಟರ್ ಹಾಗೂ ಮಲ್ಟಿಪ್ಲೆಕ್ಸ್ ಗಳ ಭಾಗಶಃ ಕಾರ್ಯನಿರ್ವಹಣೆಗೆ ಅನುಮತಿ ನೀಡಿದೆ.

ಈ ಅನ್ ಲಾಕ್ 5 ಅಕ್ಟೋಬರ್ 15ರಿಂದ ಜಾರಿಗೊಳ್ಳಲಿದೆ.

ಶಾಲೆ ಮತ್ತು ಕೋಚಿಂಗ್ ಸೆಂಟರ್ ಗಳನ್ನೂ ಸಹ ಅಕ್ಟೋಬರ್ 15ರ ನಂತರ ತೆರೆಯಲು ಕೇಂದ್ರ ಅನುಮತಿ ನೀಡಿದೆ. ಆದರೆ ಈ ಕುರಿತಾದ ನಿರ್ಧಾರವನ್ನು ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಆಯಾ ರಾಜ್ಯಗಳಿಗೇ ನೀಡಲಾಗಿದೆ.

ಅನ್ ಲಾಕ್ 5ರ ನಿಯಮಾವಳಿಗಳು ಹೀಗಿವೆ:
– ಸಿನೆಮಾ ಮಂದಿರಗಳು, ಮಲ್ಟಿಪ್ಲೆಕ್ಸ್ ಗಳು ಮತ್ತು ರಂಗ ಮಂದಿರಗಳನ್ನು ಅವುಗಳ ಒಟ್ಟು ಆಸನ ಸಾಮರ್ಥ್ಯದ 50% ಪ್ರೇಕ್ಷಕ ಸಾಮರ್ಥ್ಯದೊಂದಿಗೆ ತೆರೆಯಲು ಅನುಮತಿ.

ಈ ಸಂಬಂಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸದ್ಯದಲ್ಲೇ SOP ಹೊರಡಿಸಲಿದೆ.

– ಬ್ಯುಸಿನೆಸ್ ಟು ಬ್ಯುಸಿನೆಸ್ (B2B) ಪ್ರದರ್ಶನಗಳನ್ನು ತೆರೆಯಲು ಅನುಮತಿ ಮತ್ತು ಇದಕ್ಕಾಗಿ ವಾಣಿಜ್ಯ ಸಚಿವಾಲಯವು ಸದ್ಯದಲ್ಲೇ SOP ಹೊರಡಿಸಲಿದೆ.

– ಕ್ರೀಡಾಪಟುಗಳ ತರಬೇತಿಗಾಗಿ ಸ್ವಿಮ್ಮಿಂಗ್ ಪೂಲ್ ಗಳನ್ನು ತೆರೆಯಲು ಅನುಮತಿ. ಇದಕ್ಕಾಗಿ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯವು SOP ಹೊರಡಿಸಲಿದೆ.

– ಮನರಂಜನಾ ಪಾರ್ಕ್ ಗಳು ಹಾಗೂ ಇದೇ ರೀತಿಯ ಮನರಂಜನಾ ಸ್ಥಳಗಳನ್ನು ತೆರೆಯಲು ಅನುಮತಿ. ಇದಕ್ಕೆ ಸಂಬಂಧಿಸಿದ SOPಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಹೊರಡಿಸಲಿದೆ.

– ಶಾಲೆಗಳು ಮತ್ತು ಕೋಚಿಂಗ್ ಇನ್ಸ್ಟಿಟ್ಯೂಟ್ ಗಳನ್ನು ಗ್ರೇಡ್ ಆಧಾರದಲ್ಲಿ ಅಕ್ಟೋಬರ್ 15ರ ಬಳಿಕ ತೆರೆಯುವ ಸಂಬಂಧ ಆಯಾಯ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ನೀಡಲಾಗಿದೆ.

– ಸಂಬಂಧಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳೊಂದಿಗೆ ಸೂಕ್ತವಾಗಿ ಚರ್ಚಿಸಿ ಮತ್ತು ಕೋವಿಡ್ 19 ಪರಿಸ್ಥಿತಿಯನ್ನು ನಿಭಾಯಿಸಲು ಅಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.

– ಈಗಾಗಲೇ ಜಾರಿಯಲ್ಲಿರುವ ಆನ್ ಲೈನ್ / ದೂರ ಶಿಕ್ಷಣ ವ್ಯವಸ್ಥೆಗೆ ಒತ್ತು ನೀಡುವಂತೆಯೂ ಸೂಚಿಸಲಾಗಿದೆ.

 – ಆನ್ ಲೈನ್ ಶಿಕ್ಷಣವನ್ನು ನೀಡುತ್ತಿರುವ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವ ಬದಲು ಆನ್ ಲೈನ್ ಶಿಕ್ಷಣವನ್ನೇ ಆಯ್ದುಕೊಳ್ಳಲು ಇಚ್ಛಿಸಿದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣದ ಆಯ್ಕೆಯನ್ನು ನೀಡುವಂತೆಯೂ ಈ ನಿಯಮಾವಳಿಯಲ್ಲಿ ಸೂಚಿಸಲಾಗಿದೆ.

– ಹೆತ್ತವರ ಲಿಖಿತ ಅನುಮತಿಯಿದ್ದಲ್ಲಿ ಮಾತ್ರವೇ ವಿದ್ಯಾರ್ಥಿಗಳು ಶಾಲೆ/ಶಿಕ್ಷಣ ಸಂಸ್ಥೆಗಳ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ.

– ಶಿಕ್ಷಣ ಸಂಸ್ಥೆಗಳು ಹಾಜರಾತಿ ವಿಧಾನವನ್ನು ಅನ್ವಯಿಸಬಾರದು ಮತ್ತು ಮಕ್ಕಳನ್ನು ಶಾಲೆಗೆ ಕಳುಹಿಸುವ ಅಥವಾ ಕಳುಹಿಸದೇ ಇರುವ ನಿರ್ಧಾರವನ್ನು ಪೋಷಕರಿಗೇ ನೀಡಬೇಕು.

– ಕೇಂದ್ರ ಗೃಹ ಸಚಿವಾಲಯದೊಂದಿಗೆ ಚರ್ಚಿಸಿದ ಬಳಿಕ ಶಿಕ್ಷಣ ಸಚಿವಾಲಯವು ಕಾಲೇಜುಗಳು/ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿ ಅವಧಿಗೆ ಸಂಬಂಧಿಸಿದ ನಿರ್ಧಾರವನ್ನು ತೆಗೆದುಕೊಳ್ಳಲಿದೆ.

– ಕೇಂದ್ರ ಗೃಹ ಸಚಿವಾಲಯದೊಂದಿಗೆ ಚರ್ಚಿಸಿದ ಬಳಿಕ ಶಿಕ್ಷಣ ಸಚಿವಾಲಯವು ಕಾಲೇಜುಗಳು/ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತರಗತಿ ಅವಧಿಗೆ ಸಂಬಂಧಿಸಿದ ನಿರ್ಧಾರವನ್ನು ತೆಗೆದುಕೊಳ್ಳಲಿದೆ.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.