ಶೀಘ್ರ ಡಾಮರು ಕಾಮಗಾರಿಗಾಗಿ ಗ್ರಾಮಸ್ಥರ‌ ಆಗ್ರಹ

ಹೊಂಡ ಗುಂಡಿಗಳಿಂದ ಕೂಡಿದ ಸೂಡ ಭಗತ್‌ ಸಿಂಗ್‌ ರಸ್ತೆ

Team Udayavani, Oct 1, 2020, 3:08 AM IST

ಹೊಂಡ ಗುಂಡಿಗಳಿಂದ ಕೂಡಿದ ಸೂಡ ಭಗತ್‌ ಸಿಂಗ್‌ ರಸ್ತೆ

ಹೊಂಡ ಗುಂಡಿಗಳಿಂದ ಕೂಡಿದ ಸೂಡ ಭಗತ್‌ ಸಿಂಗ್‌ ರಸ್ತೆ .

ಬೆಳ್ಮಣ್‌: ಸ್ವಾತಂತ್ರ್ಯ ಹೋರಾಟಗಾರರ ಹೆಸರಿನ ರಸ್ತೆಯೊಂದು ಸೂಡಾ ಗ್ರಾಮದಲ್ಲಿದ್ದು ಅರೆಬರೆ ಕಾಮಗಾರಿಯಿಂದ ನಿರ್ಮಾಣಗೊಂಡ ಪರಿಣಾಮವಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸುವ ಅನಿವಾರ್ಯ ಸೃಷ್ಟಿಯಾಗಿದೆ.

ಸೂಡ ಭಗತ್‌ ಸಿಂಗ್‌ ರಸ್ತೆಯ ಅವ್ಯವಸ್ಥೆ ಇಲ್ಲಿನ ಜನರ ನಿದ್ದೆಗೆಡಿಸಿದ್ದು ಈ ಭಾಗದ ಜನರು ಸಂಕಟ ಅನುಭವಿಸುವಂತಾಗಿದೆ. ಆರು ತಿಂಗಳ ಹಿಂದೆ ಡಾಮರು ಕಾಮಗಾರಿಯ ಭಾಗ್ಯ ಕಂಡ ಬೆಳ್ಮಣ್‌ ಗ್ರಾ.ಪಂ. ವ್ಯಾಪ್ತಿಯ ಈ ಸೂಡ ಭಗತ್‌ ಸಿಂಗ್‌ ರಸ್ತೆ ತೀರ ಹದಗೆಟ್ಟಿದ್ದು ರಸ್ತೆಗೆ ತೇಪೆ ಹಾಕುವ ಕಾಮಗಾರಿ ನಡೆದಿದೆ. ಇದೀಗ ತೇಪೆ ಹಾಕಲಾದ ರಸ್ತೆಯೂ ಹೊಂಡ ಗುಂಡಿಗಳಿಂದ ಕೂಡಿದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹೊಂಡದಿಂದ ಕೂಡಿದ ರಸ್ತೆಯಲ್ಲಿ ಸಂಚರಿಸುವುದು ಅಸಾಧ್ಯವಾಗಿದ್ದು ಇದರಿಂದ ವಾಹನ ಸವಾರರು ಮಾತ್ರವಲ್ಲದೆ ಪಾದಚಾರಿಗಳೂ ಸಂಕಟ ಅನುಭವಿಸುವಂತಾಗಿದೆ.

ಘನ ವಾಹನಗಳಿಂದಾಗಿ ವಾಹನ ಸವಾರಿಗೆ ಸಂಚಕಾರ
ಸೂಡ ಹಾಗೂ ನಂದಳಿಕೆ ಭಾಗದಲ್ಲಿ ಸಾಕಷ್ಟು ಕಲ್ಲು ಕೋರೆ ಹಾಗೂ ಕ್ರಷರ್‌ ಇರುವುದರಿಂದ ನಿತ್ಯ ಟನ್‌ಗಟ್ಟಲೇ ಲೋಡ್‌ ತುಂಬಿದ ಲಾರಿ, ಟಿಪ್ಪರ್‌ಗಳು ಮಣಿಪಾಲ, ಶಿರ್ವ, ಉಡುಪಿ ಭಾಗವನ್ನು ಸೇರಲು ಇದು ಹತ್ತಿರದ ರಸ್ತೆಯಾಗಿದ್ದರಿಂದ ನಿತ್ಯ ನೂರಾರು ವಾಹನಗಳ ಓಡಾಟಕ್ಕೆ ರಸ್ತೆ ಸಂಪೂರ್ಣ ಕೆಟ್ಟುಹೋಗಿದೆ. ಈ ಘನ ವಾಹನಗಳ ನಿರಂತರ ಸಂಚಾರ ಇತರ ವಾಹನ ಸವಾರರರಿಗೆ ಸಂಚಕಾರ ತಂದಿದೆ.

ಕಾಂಕ್ರೀಟ್‌ ಕಾಮಗಾರಿಯಿಂದಲೂ ನೆಮ್ಮದಿ ಇಲ್ಲ
ಇತ್ತೀಚೆಗೆ ಸುಮಾರು 200 ಮೀ. ಉದ್ದದ ರಸ್ತೆಯೂ ಕಾಂಕ್ರೀಟ್‌ ಕಾಮಗಾರಿಯಾದರೂ ರಸ್ತೆಯ ಎರಡೂ ಬದಿಯಲ್ಲಿ ಮಣ್ಣು ಹಾಕದ ಪರಿಣಾಮ ವಾಹನಗಳು ಎದುರಾಗುವ ಸಂದರ್ಭ ಇಕ್ಕಟ್ಟಿನ ಸ್ಥಿತಿ ಉಂಟಾಗಿದೆ. ಕಾಂಕ್ರೀಟ್‌ ರಸ್ತೆ ಕೊನೆಯಾಗುವ ವರೆಗೆ ಟಿಪ್ಪರ್‌ಗಳು ವೇಗವಾಗಿ ಓಡಾಟವನ್ನು ನಡೆಸುತ್ತಿದ್ದು ಇದರಿಂದ ಅನಾಹುತ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಇತ್ತೀಚೆಗೆ ರಸ್ತೆಯ ಬದಿಯಲ್ಲಿದ್ದ ದನವೊಂದಕ್ಕೆ ಟಿಪ್ಪರ್‌ ಢಿಕ್ಕಿ ಹೊಡೆದ ಪರಿಣಾಮ ದನ ಸತ್ತುಹೋಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.

ರಿಕ್ಷಾ ಚಾಲಕರ ಹಿಂದೇಟು: ಕೃಷಿಕರು, ಹೈನುಗಾರರಿಗೆ ತೊಂದರೆ
ರಸ್ತೆಯ ಸಮಸ್ಯೆಯಿಂದ ಗ್ರಾಮೀಣ ಭಾಗದ ಈ ರಸ್ತೆಯಲ್ಲಿ ರಿಕ್ಷಾ ಚಾಲಕರು ಬಾಡಿಗೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ ರಸ್ತೆ ಪದೇ ಅರೆಬರೆ ಕಾಮಗಾರಿಯಿಂದ ಮುಚ್ಚಲಾಗುತ್ತಿದ್ದು ಈ ಭಾಗದ ಕೃಷಿಕರು ಹಾಗೂ ಹೈನುಗಾರರು 60 ರೂ. ಬಾಡಿಗೆಯ ಬದಲಿಗೆ ಸುಮಾರು 7 ಕಿ.ಮೀ. ಸುತ್ತಿ ಬಳಸಿ ರಿಕ್ಷಾದಲ್ಲಿ ಬಂದು 200 ರೂ.ಗೂ ಹೆಚ್ಚಿನ ಬಾಡಿಗೆ ಹಣವನ್ನು ನೀಡಬೇಕಾದ ಪರಿಸ್ಥಿತಿ ಬಂದೊದಗಿದೆ. ಹಲವು ವರ್ಷಗಳಿಂದ ಬಹುದೊಡ್ಡ ಸಮಸ್ಯೆಯಾಗಿ ಕಾಡುತ್ತಿರುವ ಸೂಡ ಭಗತ್‌ ಸಿಂಗ್‌ ರಸ್ತೆಯಿಂದಾಗಿ ಈ ಭಾಗದ ಜನರು ಜನಪ್ರತಿನಿಧಿ ಗಳಿಗೆ ಹಿಡಿ ಶಾಪ ಹಾಕುವಂತಾಗಿದೆ. ಆದಷ್ಟು ಬೇಗ ಸಂಪೂರ್ಣ ರಸ್ತೆಯಲ್ಲಿ ಡಾಮರು ಕಾಮಗಾರಿ ಕೈಗೊಂಡು ಈ ಭಾಗದ ಜನರ ಸಮಸ್ಯೆಗೆ ಮುಕ್ತಿ ಕರುಣಿಸುವಲ್ಲಿ ಶಾಸಕರ ಸಹಿತ ಜನಪ್ರತಿನಿ ಧಿಗಳು ಪ್ರಯತ್ನಿಸಬೇಕಾಗಿದೆ ಎನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.

ಶೀಘ್ರ ಸರಿಪಡಿಸಿ
ಸ್ವಾತಂತ್ರ್ಯ ಹೋರಾಟಗಾರರ ಹೆಸರಿನ ಈ ರಸ್ತೆಯ ದುರವಸ್ಥೆಯನ್ನು ಸಂಬಂಧಪಟ್ಟವರು ಕೂಡಲೇ ಸರಿಪಡಿಸಿ.- ಗಣೇಶ ಸೂಡಾ, ಗ್ರಾಮಸ್ಥ

ಶೀಘ್ರ ಕ್ರಮ
ಈ ರಸ್ತೆಯ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಜನರ ಸಮಸ್ಯೆಗೆ ಸ್ಪಂದಿಸಲಾಗುವುದು.
-ಪ್ರಕಾಶ್‌, ಪಿಡಿಒ, ಬೆಳ್ಮಣ್‌ ಗ್ರಾ. ಪಂ.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.