ಕೋವಿಡ್‌ ರೋಗಿಯ ಮಾನಸಿಕ ಸ್ವಾಸ್ಥ್ಯ; ಶಿಫಾರಸುಗಳು ಜಾರಿಯಾಗಲಿ


Team Udayavani, Oct 2, 2020, 6:29 AM IST

ಕೋವಿಡ್‌ ರೋಗಿಯ ಮಾನಸಿಕ ಸ್ವಾಸ್ಥ್ಯ; ಶಿಫಾರಸುಗಳು ಜಾರಿಯಾಗಲಿ

ಸಾಂದರ್ಭಿಕ ಚಿತ್ರ

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಎದುರಾಗಿರುವ ಬಹುದೊಡ್ಡ ಸವಾಲೆಂದರೆ, ರೋಗ ಲಕ್ಷಣ ಇದ್ದರೂ ಜನರು ಪರೀಕ್ಷೆಗೆ ಮುಂದಾಗದೇ ಇರುವುದು. ಇದಕ್ಕೆ ಹಲವು ಕಾರಣಗಳಿವೆ. ರೋಗದ ಕುರಿತು ಅಸಡ್ಡೆಯ ಭಾವನೆ ಒಂದೆಡೆಯಾದರೆ, ಇನ್ನೊಂದೆಡೆ ಸಾಮಾಜಿಕ ತಿರಸ್ಕಾರಕ್ಕೆ ಗುರಿಯಾಗುವ, ಆಸ್ಪತ್ರೆ ಅಥವಾ ಕ್ವಾರಂಟೈನ್‌ ಕೇಂದ್ರಗಳಲ್ಲಿ ಒಂಟಿಯಾಗಿ ಇರಬೇಕಾಗುತ್ತದೇನೋ ಎಂಬ ಭಯವೂ ಇರುವುದು ಸ್ಪಷ್ಟ. ಎಲ್ಲಕ್ಕಿಂತ ಹೆಚ್ಚಾಗಿ, ಕೋವಿಡ್‌ ಸೋಂಕಿತರನ್ನು ಭೇಟಿಯಾಗಲು ಕುಟುಂಬಸ್ಥರಿಗೆ ಅನುಮತಿ ನೀಡದೇ ಇರುವುದು, ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ಮನೆಯವರ ಉಪಸ್ಥಿತಿಯಿಲ್ಲದೇ ನಡೆದುಹೋಗುತ್ತಿರುವಂಥ ದೃಶ್ಯಾವಳಿಗಳು ಜನರಲ್ಲಿ ಒಂದು ರೀತಿಯ ಹಿಂಜರಿಕೆ ಮೂಡಲು ಕಾರಣವಾಗಿದೆ.

ಕೋವಿಡ್‌ ಮರಣಾಂತಿಕವಲ್ಲ ಎನ್ನುವುದು ನಿಜವಾದರೂ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತ ವ್ಯಕ್ತಿಗಳಿಗೆ ದೈಹಿಕ ತೊಂದರೆಗಳಿಗಿಂತ ಹೆಚ್ಚಾಗಿ ಒಂಟಿತನ, ಆತಂಕ ಹಾಗೂ ಖನ್ನತೆಯಂಥ ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಬಾಧಿಸುತ್ತಿವೆ ಎನ್ನುತ್ತವೆ ಇತ್ತೀಚಿನ ಕೆಲವು ವರದಿಗಳು. ಇದನ್ನು ಮನಗಂಡ ತಜ್ಞರ ಸಮಿತಿ, ಆಸ್ಪತ್ರೆಯಲ್ಲಿರುವ ಸೋಂಕಿತರ ಭೇಟಿಗೆ ಕುಟುಂಬಸ್ಥರಿಗೆ ಅವಕಾಶ ನೀಡಬೇಕು (ಸುರûಾ ಸಾಧನಗಳನ್ನು ಧರಿಸಿ), ಆರೋಗ್ಯ ಸ್ಥಿರವಾಗಿರುವ ರೋಗಿಗಳಿಗೆ ಮನೆ ಊಟ ನೀಡಬೇಕು ಹಾಗೂ ಬಹುಮುಖ್ಯ ವಾಗಿ ಪಿಪಿಇ ಕಿಟ್‌ ಧರಿಸಿ ಸೋಂಕಿತರ ಸಂಬಂಧಿಗಳಿಗೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ ನೀಡಬೇಕು ಎಂದು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ. ಖನ್ನತೆ, ಆತಂಕ, ಒತ್ತಡದಂಥ ಸಮಸ್ಯೆಗಳು ರೋಗನಿರೋಧಕ ಶಕ್ತಿಯ ಮೇಲೆಯೂ ಋಣಾತ್ಮಕ ಪರಿಣಾಮ ಬೀರುವುದರಿಂದ ಈ ನಿಟ್ಟಿನಲ್ಲಿ ಇಂಥದ್ದೊಂದು ಶಿಫಾರಸು ಮಾಡಿರುವುದು ಸ್ವಾಗತಾರ್ಹ. ಕುಟುಂಬಸ್ಥರನ್ನು ಭೇಟಿಯಾಗುವುದರಿಂದ ರೋಗಿಗೆ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ, ಅವರು ಸುರಕ್ಷಿತವಾಗಿದ್ದಾರೆ ಎಂಬುದು ಖಾತ್ರಿಯಾದಂತೆ, ಬೇಗನೇ ಚೇತರಿಸಿ ಕೊಳ್ಳಬೇಕು ಎಂಬ ಲವಲವಿಕೆ ಆತನಲ್ಲಿ ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಮನೋವೈದ್ಯರು.

ಈಗ ಎಂದಲ್ಲ, ಆರಂಭದಿಂದಲೂ ದೇಶದಲ್ಲಿ ದೈಹಿಕ ಆರೋಗ್ಯಕ್ಕೆ ಸಿಕ್ಕ ಗಮನ, ಮಾನಸಿಕ ಆರೋಗ್ಯಕ್ಕೆ ದೊರೆತೇ ಇಲ್ಲ. ಕೋವಿಡ್‌ ಸಂಕಷ್ಟವಂತೂ ದೇಶವಾಸಿಗಳ ಮಾನಸಿಕ ಆರೋಗ್ಯದ ಮೇಲೆ ಭಾರೀ ಪ್ರಹಾರ ಮಾಡುತ್ತಿದೆ. ಈ ಕಾರಣಕ್ಕಾಗಿಯೇ ಮಾನಸಿಕ ಆರೋಗ್ಯ ರಕ್ಷಣೆಯತ್ತಲೂ ಗಮನಹರಿಸುವುದು ಅಗತ್ಯವಾಗಿದೆ. ಸೋಂಕು ತಗಲಿದಾಗಲಷ್ಟೇ ಅಲ್ಲ, ಚೇತರಿಸಿಕೊಂಡ ಅನಂತರವೂ ತಮ್ಮ ನೆರೆಹೊರೆಯವರು, ಸಹೋದ್ಯೋಗಿಗಳು ತಮ್ಮನ್ನು ತಪ್ಪಿತಸ್ಥರಂತೆ ನೋಡುತ್ತಿದ್ದಾರೆ ಎಂದು ಅನೇಕರು ಬೇಸರ ವ್ಯಕ್ತಪಡಿಸುತ್ತಾರೆ. ಆರಂಭದಿಂದಲೂ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇದು ರೋಗದ ವಿರುದ್ಧದ ಹೋರಾಟವೇ ಹೊರತು ರೋಗಿಯ ವಿರುದ್ಧದ ಹೊರಾಟವಲ್ಲ ಎಂದು ಜಾಗೃತಿ ಮೂಡಿಸುತ್ತಲೇ ಬಂದರೂ ಇಂಥ ಮನಃಸ್ಥಿತಿಗಳು ಕಾಣಿಸುತ್ತಿರುವುದು ದುರಂತ.

ನೆನಪಿರಲಿ, ಇದು ಜಗತ್ತಿಗೇ ಆವರಿಸಿರುವ ಕಂಟಕ. ಸೋಂಕಿತರಿಗೆ ನಾವೆಲ್ಲ ಮಾನಸಿಕವಾಗಿ ಬಲ ತುಂಬಿದರೆ, ರೋಗದ ಸುತ್ತಲೂ ಹಬ್ಬಿಕೊಂಡಿ ರುವ ಮಾನಸಿಕ ತುಮುಲಗಳು ಪರಿಹಾರವಾಗುತ್ತಾ ಹೋದರೆ, ನಿಸ್ಸಂಶಯ ವಾಗಿಯೂ ರೋಗದ ವಿರುದ್ಧದ ಹೋರಾಟದಲ್ಲಿ ನಾವು ದಾಪುಗಾಲಿಡಲಿದ್ದೇವೆ. ಒಟ್ಟಲ್ಲಿ, ಈಗ ರಾಜ್ಯ ಸರಕಾರದ ಎದುರಿರುವ ಶಿಫಾರಸುಗಳಿಗೆ ಅಂಕಿತ ಬೀಳಲೇಬೇಕಿದೆ. ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬ ಆಗುವುದು ಬೇಡ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.