ಮಂಡ್ಯ: ಕೋವಿಡ್ ಸೋಂಕಿಗೆ ಇಬ್ಬರು ಬಲಿ; 246 ಹೊಸ ಪ್ರಕರಣ; 282 ಚೇತರಿಕೆ
Team Udayavani, Oct 2, 2020, 7:45 PM IST
ಸಾಂದರ್ಭಿಕ ಚಿತ್ರ
ಮಂಡ್ಯ: ಶುಕ್ರವಾರವೂ ಸೋಂಕಿಗೆ ಇಬ್ಬರು ಬಲಿಯಾಗಿದ್ದು, 246 ಮಂದಿಗೆ ಸೋಂಕು ದೃಢಪಟ್ಟಿದೆ. 282 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮಂಡ್ಯ ತಾಲೂಕಿನ 65 ವರ್ಷದ ವೃದ್ಧ ಹಾಗೂ ನಾಗಮಂಗಲ ತಾಲೂಕಿನ 24 ವರ್ಷದ ಯುವಕನಿಗೆ ಸೋಂಕಿನ ಜತೆಗೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ೧೦೯ಕ್ಕೆ ಏರಿಕೆಯಾಗಿದೆ.
246 ಹೊಸ ಪ್ರಕರಣ:
ಜಿಲ್ಲೆಯಲ್ಲಿ ಶುಕ್ರವಾರ 246 ಜನರು ಸೋಂಕಿಗೆ ಒಳಗಾಗಿದ್ದಾರೆ. ಮಂಡ್ಯ ತಾಲೂಕಿನಲ್ಲಿ 67, ಮದ್ದೂರಿನಲ್ಲಿ 21, ಮಳವಳ್ಳಿಯಲ್ಲಿ 15, ಪಾಂಡವಪುರದಲ್ಲಿ 36, ಶ್ರೀರಂಗಪಟ್ಟಣದಲ್ಲಿ 18, ಕೆ.ಆರ್.ಪೇಟೆಯಲ್ಲಿ 58 ಮತ್ತು ನಾಗಮಂಗಲ ತಾಲೂಕಿನಲ್ಲಿ 31 ಮಂದಿಗೆ ಕೊರೊನಾ ವಕ್ಕರಿಸಿದೆ. ಇದರಿಂದ ಜಿಲ್ಲೆಯಲ್ಲಿ 11556 ಸೋಂಕಿತ ಪ್ರಕರಣಗಳು ದಾಖಲಾಗಿವೆ.
282 ಚೇತರಿಕೆ:
ಜಿಲ್ಲೆಯಾದ್ಯಂತ 282 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಂಡ್ಯ 50, ಮದ್ದೂರು 22, ಮಳವಳ್ಳಿ 12, ಶ್ರೀರಂಗಪಟ್ಟಣ 93, ಕೆ.ಆರ್.ಪೇಟೆ ೫೧ ಹಾಗೂ ನಾಗಮಂಗಲದ 54 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ 9512 ಜನರು ಚೇತರಿಸಿಕೊಂಡಿದ್ದಾರೆ.
1930 ಸಕ್ರಿಯ:
ಪ್ರಸ್ತುತ 1930 ಸಕ್ರಿಯ ಪ್ರಕರಣಗಳಿವೆ. 566 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ, 128 ಖಾಸಗಿ ಆಸ್ಪತ್ರೆಯಲ್ಲಿ, 190 ಕೋವಿಡ್ ಕೇರ್ ಸೆಂಟರ್ನಲ್ಲಿ ಹಾಗೂ 1046 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ 1515 ಜನರ ಗಂಟಲಿನ ದ್ರವ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ