ಕಾಯುವಿಕೆ ಇನ್ನಿಲ್ಲ ; ಫ‌ಲಾನುಭವಿ ಮಿತಿ ಏರಿಕೆ

ಕಲಾವಿದರ ಮಾಸಾಶ‌ನ ಪ್ರಕ್ರಿಯೆಗೆ ಮಹತ್ವದ ತಿದ್ದುಪಡಿ

Team Udayavani, Oct 4, 2020, 6:01 AM IST

ಕಾಯುವಿಕೆ ಇನ್ನಿಲ್ಲ ; ಫ‌ಲಾನುಭವಿ ಮಿತಿ ಏರಿಕೆ

ಸಾಂದರ್ಭಿಕ ಚಿತ್ರ

ಕೋಟ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 58 ವರ್ಷ ಮೇಲ್ಪಟ್ಟ, ಅರ್ಥಿಕವಾಗಿ ಹಿಂದುಳಿದ ಕಲಾವಿದರಿಗೆ ನೀಡುತ್ತಿರುವ ಮಾಸಾಶನದ ನಿಯಮದಲ್ಲಿ ಮಹತ್ವದ ತಿದ್ದುಪಡಿಗಳನ್ನು ಮಾಡಿದ್ದು, ಕಲಾವಿದರಿಗೆ ವರದಾನವಾಗಿದೆ.

ಪ್ರಸ್ತುತ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಹಾಗೂ ಕಲಾವಿದರ ಮರಣಾ ನಂತರ ಕುಟುಂಬಕ್ಕೆ ಶೇ. 50ರಷ್ಟು ಮೊತ್ತ ಪಾವತಿಸುವ ಸೌಲಭ್ಯ ರಾಜ್ಯದಲ್ಲಿದೆ. ಆದರೆ ಆಯ್ಕೆ ಪದ್ಧತಿಯ ದೋಷದಿಂದಾಗಿ ಕಲಾವಿದರು ಅರ್ಜಿ ಸಲ್ಲಿಸಿ ಮೂರ್‍ನಾಲ್ಕು ವರ್ಷ ಪರದಾಡುವ ಸ್ಥಿತಿ ಇದೆ. ಇಲಾಖೆ ಮಾಡಿರುವ ತಿದ್ದುಪಡಿ ಗಳಿಂದಾಗಿ ಇನ್ನಷ್ಟು ಕಲಾ ವಿದರು ಈ ಸೌಲಭ್ಯ ಪಡೆಯ ಬಹುದಾಗಿದೆ. ವೃದ್ಧಾಪ್ಯ ವೇತನ ಮುಂತಾದ ಪಿಂಚಣಿ ಪಡೆಯುವವರು ಸೌಲಭ್ಯಕ್ಕೆ ಅರ್ಹರಲ್ಲ ಎನ್ನುವ ನಿಯಮ ಮುಂದು ವರಿದಿದೆ.

ಬದಲಾವಣೆ ಏನು?
ಈ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕಿತ್ತು. ಅನಂತರ ಆಯಾಯ ಅಕಾಡೆಮಿಗಳ ಮೂಲಕ ದಾಖಲೆಗಳನ್ನು ಪರಿಶೀಲಿಸಿ ರಾಜ್ಯ ಇಲಾಖೆಗೆ ರವಾನಿಸಲಾಗುತ್ತಿತ್ತು ಮತ್ತು ಅವುಗಳನ್ನು ಪ್ರತ್ಯೇಕ ಆಯ್ಕೆ ಸಮಿತಿಯ ಮುಂದೆ ಹಾಜರುಪಡಿಸಿ ಸರಕಾರದ ಮೂಲಕ ಫಲಾನುಭವಿಗಳ ಪಟ್ಟಿ ಬಿಡುಗಡೆಯಾಗುತ್ತಿತ್ತು. ಇದೀಗ ವಿಳಂಬವನ್ನು ತಪ್ಪಿಸಲು ಜಿಲ್ಲಾ ಕೇಂದ್ರಗಳಿಂದ ಅರ್ಜಿ ಪಡೆದು, ಅಕಾಡೆಮಿಗಳಿಗೆ ರವಾನಿಸಿ ಅಲ್ಲಿ ಪರಿಶೀಲನೆಯ ಬಳಿಕ ರಾಜ್ಯ ಇಲಾಖೆ ಮೂಲಕ ಅಕಾಡೆಮಿಯ ಅಧ್ಯಕ್ಷರನ್ನೊಳಗೊಂಡ ಆಯ್ಕೆ ಸಮಿತಿ ಫಲಾನುಭವಿಗಳನ್ನು ಆಯ್ಕೆ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಆಯ್ಕೆ ಸಮಿತಿ ಸಭೆ ಸೇರಲೇಬೇಕು. ಅರ್ಜಿ ಸಲ್ಲಿಕೆಯಾದ ನಾಲ್ಕೈದು ತಿಂಗಳೊಳಗೆ ಫಲಾನುಭವಿಗಳ ಆಯ್ಕೆ ಮಾಡಬೇಕು ಎಂಬುದು ಈಗ ತಂದಿರುವ ತಿದ್ದುಪಡಿ. ಜತೆಗೆ ವಾರ್ಷಿಕ ಫ‌ಲಾನುಭವಿಗಳ ಆಯ್ಕೆಗೆ ಇದ್ದ ಮಿತಿಯನ್ನು 500ರಿಂದ 1,000ಕ್ಕೆ ಹೆಚ್ಚಿಸಲಾಗಿದೆ. ಆದಾಯ ಮಿತಿಯನ್ನು 50 ಸಾವಿರ ರೂ.ಗಳಿಂದ 1ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

ಶೀಘ್ರ ಪಾವತಿ
ಖಜಾನೆಯ ಮೂಲಕ ಹಣ ಪಾವತಿಯಾಗುವುದರಿಂದ ಪ್ರತೀ ತಿಂಗಳು ಹಣ ಫಲಾನುಭವಿಗಳ ಕೈಸೇರುವಾಗ ವಿಳಂಬವಾಗುತ್ತಿದೆ. ಇಲಾಖೆಯ ಜಿಲ್ಲಾ ಮಟ್ಟದ ಕಚೇರಿಗಳ ಮೂಲಕ ಫಲಾನುಭವಿಯ ಖಾತೆಗೆ ಪಾವತಿಸುವ ವ್ಯವಸ್ಥೆ ಜಾರಿಯಾಗಲಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನದ 14 ಅಕಾಡೆಮಿಗಳ ವ್ಯಾಪ್ತಿಯ ಕಲಾವಿದರಿಗೆ ಮಾಸಾಶನ ನೀಡಲಾಗುತ್ತದೆ. ಆದರೆ ಆಯ್ಕೆ ಸಂದರ್ಭ ಯಕ್ಷಗಾನ ಸೇರಿದಂತೆ ಕೆಲವು ಅಕಾಡೆಮಿ ವ್ಯಾಪ್ತಿಯ ಕಲಾವಿದರಿಗೆ ಅನ್ಯಾಯವಾಗುತ್ತಿದೆ. ಇದರಿಂದಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಈ ತಾರತಮ್ಯ ದೂರಮಾಡುವ ನಿಟ್ಟಿನಲ್ಲಿ ಪ್ರತಿಯೊಂದು ಅಕಾಡೆಮಿಗೆ ನಿರ್ದಿಷ್ಟ ಸಂಖ್ಯೆಯ ಮಾಸಾಶನ ಮೀಸಲಿಡಬೇಕು ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ಇಲಾಖೆಗೆ ಮನವಿ ಮಾಡಿದ್ದು ಇದು ಪರಿಶೀಲನೆಯಲ್ಲಿದೆ.

ನಿಯಮ ಪರಿಷ್ಕರಣೆಯಿಂದಾಗಿ ಅರ್ಜಿ ಸಲ್ಲಿಸಿ ನಾಲ್ಕೈದು ತಿಂಗಳೊಳಗೆ ಫಲಾನುಭವಿಗಳ ಆಯ್ಕೆ ಪೂರ್ಣಗೊಳ್ಳಲಿದೆ ಹಾಗೂ ಫಲಾನುಭವಿಗಳ ಮಿತಿ ಏರಿಕೆಯಿಂದಲೂ ಸಾಕಷ್ಟು ಲಾಭವಾಗಲಿದೆ.
– ಎಸ್‌. ರಂಗಪ್ಪ, ರಾಜ್ಯ ನಿರ್ದೇಶಕರು,  ಕ.ಸಂ. ಇಲಾಖೆ ಬೆಂಗಳೂರು

ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.