ವಾಸ್ತು ಪ್ರಕಾರ ಬಿಡಿಎ ನಿವೇಶನ ನೀಡಿ!

22 ಸಾವಿರ ಸೈಟ್‌; 10 ಸಾವಿರ ಹಂಚಿಕೆ | ವಾಸ್ತು ದೋಷ ತಂದ ಅಡ್ಡಿ

Team Udayavani, Oct 4, 2020, 11:24 AM IST

bng-tdy-1

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಭೂಮಿ ಸಿಗುವುದೇ ಅಪರೂಪ. ಇದಕ್ಕಾಗಿ ವರ್ಷಗಟ್ಟಲೆ ಕಾಯುವ ಸ್ಥಿತಿ ಇದೆ. ಆದರೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಿಂದಹಂಚಿಕೆಯಾದ ನೂರಾರು ನಿವೇಶನಗಳನ್ನು ಜನ ತಮಗೆ ಬೇಡ ಎಂದು ವಾಪಸ್‌ ನೀಡುತ್ತಿದ್ದಾರೆ. ಈ ಪೈಕಿ ಬಹುತೇಕರು ನೀಡುತ್ತಿರುವ ಕಾರಣ- ವಾಸ್ತು ದೋಷ!

ಬಿಡಿಎ ಅಭಿವೃದ್ಧಿಪಡಿಸಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಸುಮಾರು 22 ಸಾವಿರ ನಿವೇಶನಗಳಿವೆ. ಇದರಲ್ಲಿ ತಲಾ ಐದು ಸಾವಿರದಂತೆ ಎರಡು ಹಂತಗಳಲ್ಲಿ ಲಾಟರಿ ಮೂಲಕ ಹಂಚಿಕೆ ಮಾಡಲಾಗಿದ್ದು, ಇದುವರೆಗೆ 9,970 ನಿವೇಶನಗಳ ಹಂಚಿಕೆ ಕಾರ್ಯಪೂರ್ಣಗೊಂಡಿದೆ. ಅದರಲ್ಲಿ ಶೇ. 10ರಷ್ಟು ಅಂದರೆ 930 ಮಧ್ಯಂತರ ನಿವೇಶನಗಳನ್ನು ಫ‌ಲಾನುಭವಿಗಳು “ತಮ್ಮ ಇಚ್ಛೆಗೆ ತಕ್ಕಂತೆ ಸೈಟ್‌ ಸಿಕ್ಕಿಲ್ಲ. ಹಾಗಾಗಿ, ಈ ಸೈಟ್‌ ಬೇಡ’ ಎಂದು ಹಿಂತಿರುಗಿಸಿದ್ದಾರೆ.

“ಫ‌ಲಾನುಭವಿಗಳು ಹೀಗೆ ಹಿಂತಿರುಗಿಸಲು ಅಧಿಕೃತವಾಗಿ ಯಾವುದೇ ನಿರ್ದಿಷ್ಟ ಕಾರಣಗಳನ್ನು ನೀಡಿಲ್ಲ. ಆದರೆ ನಾವಾಗಿಯೇ ವಿಚಾರಿಸಿದಾಗ, ಅವರಿಂದಬರುವಉತ್ತರವಾಸ್ತು ಸರಿಇಲ್ಲ.ಆದ್ದರಿಂದ ಬದಲಿ ಸೈಟ್‌ ಹಂಚಿಕೆ ಮಾಡಿ. ಬೇಕಿದ್ದರೆ ಅಲ್ಲಿಯವರೆಗೂ ಕಾಯಲು ನಾವು ತಯಾರಿದ್ದೇವೆ’ ಎಂಬ ಉತ್ತರ ಬರುತ್ತಿದೆ. ಇನ್ನು ಹಲವರು ಹತ್ತಿರದಲ್ಲಿ ಸ್ಮಶಾನಇದೆ,ಆರ್ಥಿಕ ಸಮಸ್ಯೆ ಮತ್ತಿತರ ಕಾರಣಗಳನ್ನು ನೀಡುತ್ತಾರೆ. ಆದರೆ, ಒಟ್ಟಾರೆ 930 ಜನರಲ್ಲಿ ಬಹುತೇಕರಿಗೆ ವಾಸ್ತುದೋಷವೇ ಅಡ್ಡಿಆಗಿದೆ’ ಎಂದು ಹೆಸರು ಹೇಳಲಿಚ್ಛಿಸದ ಬಿಡಿಎ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ಮಾರ್ಗಸೂಚಿ ದರದ ಅನ್ವಯ ಚದರಡಿಗೆ 2,500 ರೂ. ಇದೆ. 30×40 ಚದರಡಿ ಎಂದು ಲೆಕ್ಕಹಾಕಿದರೂ 930 ನಿವೇಶನಗಳಿಗೆ ಸುಮಾರು 300-350 ಕೋಟಿ ರೂ. ಆಗುತ್ತದೆ. ಮುಂದಿನ ದಿನಗಳಲ್ಲಾದರೂ ಇವುಗಳು ಮಾರಾಟ ಆಗುತ್ತವೆ. ಹೆಚ್ಚು ಹಣವೂ ಬರಬಹುದು. ಕೆಲ ಫ‌ಲಾನುಭವಿಗಳಿಗೆ ವಾಸ್ತು ಸರಿಇಲ್ಲದಿದ್ದರೂ, ಇನ್ನು ಹಲವರಿಗೆ ಸರಿ ಬರಬಹುದು. ಆದೆ, ಈಗ ಸರ್ಕಾರಕ್ಕೆ ಹಣಕಾಸಿನ ತುರ್ತು ಇರುವ ಕಾರಣ ಶೀಘ್ರ ಹಂಚಿಕೆ ಆಗಬೇಕಿದೆ. ಸದ್ಯದ ಸ್ಥಿತಿಯಲ್ಲಿ ಇದು ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ ಅಧಿಕಾರಿಗಳು, “ಇದೇ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಇನ್ನೂ ಆರು ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸಿದ್ಧತೆ ನಡೆಯುತ್ತಿದೆ. ಆಗ, ವಾಪಸ್‌ ನೀಡಿದ ಈ 930 ನಿವೇಶನಗಳನ್ನೂ ಸೇರಿಸಲಾಗುವುದು’ ಎಂದೂ ಹೇಳಿದರು.

 ಅಧಿಕಾರಿಗಳಿಗೆ ವಾಸ್ತು ತೊಡಕು :  ಹಿಂದೆ ಸೈಟ್‌ಗಳಿಗಾಗಿ ಜನ ಹತ್ತಾರು ವರ್ಷ ಕಾದು ಕುಳಿತ ಉದಾಹರಣೆಗಳಿವೆ. ಹಂಚಿಕೆಯಾದ ನಂತರ ವಾಪಸ್‌ ಮಾಡಿದವರ ಸಂಖ್ಯೆ ತುಂಬಾ ವಿರಳ. ಅದಕ್ಕೆ ಕೆರೆಪಕ್ಕದಲ್ಲಿಬಫ‌ರ್‌ಝೋನ್‌ನಂತಹಸಕಾರಣಗಳೂ ಇರುತ್ತಿದ್ದವು. ಇತ್ತೀಚಿನ ದಿನಗಳಲ್ಲಿ ವಾಸ್ತು ಹಾವಳಿ ಹೆಚ್ಚಾಗಿದೆ. “ನಮಗೆ ಉತ್ತರ-ದಕ್ಷಿಣದಲ್ಲಿ ಬೇಕಿತ್ತು. ಪೂರ್ವ-ಪಶ್ಚಿಮದಲ್ಲಿನ ನಿವೇಶನ ದೊರಕಿದೆ’ “ನನ್ನ ಹೆಸರು, ರಾಶಿ ಮತ್ತು ಸೈಟ್‌ ಹಂಚಿಕೆಯಾದ ದಿಕ್ಕು ಒಂದಕ್ಕೊಂದು ಪೂರಕವಾಗಿಲ್ಲ’ ಎನ್ನುವುದು ಸೇರಿ ದಂತೆಹಲವುಕಾರಣನೀಡಿವಾಪಸ್‌ಮಾಡುತ್ತಿದ್ದಾರೆ. ಇವೆಲ್ಲವೂ ಮಧ್ಯಂತರ ನಿವೇಶನಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದರು.

ಹೊಸ ತಲೆನೋವು :  ವಾಸ್ತುದೋಷ ಸಮಸ್ಯೆ ಬಿಡಿಎಗೆ ತಲೆನೋವಾಗಿ ಪರಿಣಮಿಸಿದೆ. ಹೀಗೆ ಹಿಂತಿರುಗಿಸಿದ ನಿವೇಶನಗಳನ್ನು ಹೈಕೋರ್ಟ್‌ ಆದೇಶದಂತೆ ಸದ್ಯಕ್ಕೆ ಹರಾಜು  ಮಾಡುವಂತಿಲ್ಲ. ಅತ್ತ ಕೋವಿಡ್‌ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಇರುವುದರಿಂದ ಸಂಪನ್ಮೂಲ ಕ್ರೋಡೀಕರಣಕ್ಕೆ ಸರ್ಕಾರ ಒತ್ತಡ ಹಾಕುತ್ತಿದೆ. ಇದು ಕಗ್ಗಂಟಾಗಿದ್ದು, ಪ್ರಾಧಿಕಾರವು ಪರ್ಯಾಯ ಮಾರ್ಗಗಳ ಹುಡುಕಾಟ ನಡೆಸಿದೆ.

 

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.