ಪರಿಸರ ಸಂರಕ್ಷಣೆಗೆ ಸಂಕಲ್ಪ
Team Udayavani, Oct 4, 2020, 2:38 PM IST
ಚಿಂತಾಮಣಿ: ಗಾಂಧಿ ಜಯಂತಿ ಪ್ರಯುಕ್ತ ತಾಲೂಕಿನ ಹಿರೇಕಟ್ಟಿಗೇನಹಳ್ಳಿ ಗ್ರಾಪಂ ವ್ಯಾಪ್ತಿಯ ರಾಚಾಪುರ ಗ್ರಾಮದ ಯುವಕರು ಕೆರೆಯಂಗಳದಲ್ಲಿರುವ 20 ಎಕರೆ ಖಾಲಿ ಜಾಗದಲ್ಲಿ ಸುಮಾರು 4 ಸಾವಿರ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಪಣ ತೊಡುವ ಮೂಲಕ ಗಾಂಧಿ ಮತ್ತು ಲಾಲ್ಬಹದ್ದೂರು ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಸಸಿ ನೆಟ್ಟು ಮಾತನಾಡಿದ ಗ್ರಾಮದ ಯುವ ಮುಖಂಡ ಮನೋಜ್ ಕುಮಾರ್, ಇಂದಿನ ಆಧುನಿಕತೆಯಧಾವಂತದಲ್ಲಿ ಜನರು ಜೀವ ಸಂಕುಲಕ್ಕೆ ಮುಖ್ಯವಾದ ಪರಿಸವನ್ನು ನಾಶ ಮಾಡುತ್ತಿದ್ದಾರೆ. ಆಧುನಿಕತೆ ಎಂದರೆ ಪರಿಸರ ನಾಶ ಎಂಬ ನಂಬಿಕೆ ನಮ್ಮಲ್ಲಿ ಮೂಡುತ್ತಿದೆ. ಈ ಆಲೋಚನೆಯನ್ನು ಹೋಗಲಾಡಿಸಬೇಕಿದೆ.ಆನಿಟ್ಟಿನಲ್ಲಿ ಪರಿಸರ ಮಹತ್ವವನ್ನು ಪರಿಸರ ಬೆಳೆಸುವುದರೊಂದಗೆ ಉಂಟು ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.
ಗ್ರಾಮೀಣ ಭಾದಲ್ಲಿ ಅರಣ್ಯದ ಪ್ರಮಾಣದಿನೇದಿನೆಕಡಿಮೆಯಾಗುತ್ತಿದೆ. ಪರಿಸರವು ಸಹ ಸಮತೋಲನ ಕಳೆದುಕೊಳ್ಳುತ್ತಿದೆ. ಇದರಿಂದ ಜಾಗತಿಕ ತಾಪಮಾನ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಆ ನಿಟ್ಟಿಲ್ಲಿ ಪರಿಸರ ರಕ್ಷಿಸಬೇಕಾದ ತುರ್ತು ಇದೆ. ಗ್ರಾಮದ ಯುವಕರು ಮತ್ತು ಹಿರಿಯರ ಸಹಕಾರದಿಂದ ಎರಡು ಕೆರೆಯಂಗಳದ 20 ಎಕರೆಯಲ್ಲಿ ನೇರಳೆ, ಹಲಸು, ಮಾವು, ಹೊಂಗೆ ಸೇರಿದಂತೆ ವಿವಿಧ ಜಾತಿಯ ಸುಮಾರು 4 ಸಾವಿರ ಸಸಿಗಳನ್ನು ನೆಡುವ ಸಂಕಲ್ಪಕ್ಕೆ ನಾಂದಿ ಹಾಡಿದ್ದೇವೆ ಎಂದರು.
ಗ್ರಾಮದ ಮುಖಂಡರಾದ ಆರ್ .ಬಿ.ಅಶ್ವತ್ಥಗೌಡ, ವಿಜಯ್ಕುಮಾರ್, ಮುನಿರಾಜು, ಆನೇಗೌಡ, ಎಂ.ಶ್ರೀಧರ್ ಮೂರ್ತಿ, ಎನ್.ಶ್ರೀಕಂಠ, ಗ್ರಾಪಂ ಮಾಜಿ ಸದಸ್ಯ ನಾರಾಯಣಸ್ವಾಮಿ, ಪದ್ಮಮ್ಮ ಜಿ.ಕೃಷ್ಣಪ್ಪ ಉಪಸ್ಥಿತರಿದ್ದರು.
ಸ್ವಚ್ಛತೆಗೆ ಸಹಕಾರ ಮುಖ್ಯ :
ಚಿಂತಾಮಣಿ: ನಾವು ವಾಸವಿರುವ ಮನೆಯ ಜೊತೆಗೆ ನಮ್ಮ ಸುತ್ತಮುತ್ತ ಸ್ವಚ್ಛತೆ ಕಾಪಾಡಿ ಕೊಳ್ಳುವುದು ಅಗತ್ಯವಾಗಿದ್ದು, ಗ್ರಾಮಗಳ ಸ್ವಚ್ಛತೆಗೆ ನಿವಾಸಿಗಳ ಸಹಕಾರ ಅಗತ್ಯ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ನುಡಿದರು.
ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ತಾಲೂಕಿನ ಮುನಗನಹಳ್ಳಿ ಗ್ರಾಪಂ ವ್ಯಾಪ್ತಿಯ ಐತಿಹಾಸಿಕ ಕ್ಷೇತ್ರ ಆಲಂಬಗಿರಿ ಗ್ರಾಮದಲ್ಲಿನ ಕಲ್ಯಾಣಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮಕ್ಕೆ ಕಲ್ಪವೃಕ್ಷವಿಟ್ಟು ಗಿಡಕ್ಕೆ ನೀರುಹರಿಸುವ ಚಾಲನೆ ನೀಡಿ ಮಾತನಾಡಿದರು.
ಗ್ರಾಪಂ ವ್ಯಾಪ್ತಿಯಲ್ಲಿನ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತೆ ನಿರ್ವಹಿಸಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಗ್ರಾಮಸ್ಥರು ಕೈಜೋಡಿಸುವ ಮೂಲಕ ಅನುಕೂಲವನ್ನು ಪಡೆಯಬೇಕೆಂದರು. ತಾಪಂ ಇಒ ಮಂಜುನಾಥ್ ಮಾತನಾಡಿ, ಸ್ವಚ್ಛತೆ ನಿತ್ಯೋತ್ಸವದಿಂದ ಪ್ರತಿಯೊಬ್ಬರು ಆರೋಗ್ಯವಂತರಾಗಿರುತ್ತಾರೆ. ಸ್ವಚ್ಛತೆ ಇದ್ದಲ್ಲಿ ಆರೋಗ್ಯವಿರುತ್ತದೆ. ನಿತ್ಯೋತ್ಸವವಿದ್ದಲ್ಲಿ ಆಯುಷ್ಇರುತ್ತದೆ.ಮಕ್ಕಳುಬಾಲ್ಯದಿಂದಲೇ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಲು ಪೋಷಕರು ಶ್ರಮಿಸಬೇಕೆಂದರು.
ಆರ್ಡಿಪಿಆರ್ ಇಲಾಖೆಯ ಎಲ್ಲಾ ಸಿಬ್ಬಂದಿ ಶ್ರಮ ವಹಿಸಿದರು. ತಾಪಂ ಎಡಿಎ ಕವಿತಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್, ಕೃಷಿ ಇಲಾಖೆಯ ಪುಷ್ಪಾ, ನರೇಗಾ ಇಲಾಖೆಯ ಅರುಣ್ ಹಾಗೂ ಅವರ ಸಹಪಾಠಿಗಳು, ಪಿಡಿಒಗಳಾದ ನಾಗೇಶ್, ಶಿವಣ್ಣ, ಸುರೇಶ್, ದೇವರಾಜ್, ಯಾದವ್ ಸೇರಿದಂತೆ ಹಲವು ಪಿಡಿಒಗಳು, ತಾಲೂಕಿನ ಗ್ರಾಪಂಕಾರ್ಯದರ್ಶಿಗಳು,ನೀರುಗಂಟಿಗಳು, ಬಿಲ್ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ಅಂಗನವಾಡಿ ಕಾರ್ಯಕರ್ತರು, ನರೇಗಾ ಇಲಾಖೆಯ ಎಲ್ಲಾ ಸಿಬ್ಬಂದಿ, ಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ