ಅಂಗಡಿಗೆ ಪರವಾನಗಿ ಪಡೆಯಲು ಹೊಸ ನಿಯಮ

ಬಾಳ್ಳುಪೇಟೆ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ವರ್ತಕರ ಪ್ರತಿಭಟನೆ

Team Udayavani, Oct 4, 2020, 2:51 PM IST

ಅಂಗಡಿಗೆ ಪರವಾನಗಿ ಪಡೆಯಲು ಹೊಸ ನಿಯಮ

ಸಕಲೇಶಪುರ: ಅಂಗಡಿಗಳಿಗೆ ಪರವಾನಗಿ ನೀಡಲು ಗ್ರಾಪಂ ಜಾರಿ ಮಾಡಿರುವ ನೂತನ ನಿಯಮದ ವಿರುದ್ಧ ಆಕ್ರೋಶಗೊಂಡಿರುವ ವರ್ತಕರು, ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ತಾಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ.

ಗ್ರಾಮದ ವರ್ತಕರ ಸಂಘದ ಸದಸ್ಯರು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ, ವ್ಯಾಪಾರ ವಹಿವಾಟು ನಡೆಸಲು ಈ ಹಿಂದೆ ಇದ್ದ ನಿಯಮ ಮುಂದುವರಿಸಬೇಕು ಎಂದು ವರ್ತಕರು ಒತ್ತಾಯಿಸಿದರು.

ಈ ವೇಳೆ ಸಂಘದ ಅಧ್ಯಕ್ಷ ಬಿ.ಎನ್‌.ನಾಗೇಂದ್ರ ಮಾತನಾಡಿ, ಇಷ್ಟು ವರ್ಷ ಕಟ್ಟಡದ ಮಾಲಿಕರಿಂದ ಕರಾರು ಪತ್ರ, ವ್ಯಾಪಾರ ನಡೆಸುವ ವರ್ತಕರಿಂದ ಗುರುತಿನ ಚೀಟಿ ಪಡೆದು ಪರವಾನಗಿ ಪತ್ರವಿತರಿಸಲಾಗುತ್ತಿತ್ತು. ಆದರೆ, ಈಗಕಟ್ಟಡ ಮಾಲಿಕರ ಸ್ಥಳದ ಈ ಸ್ವತ್ತು ಹಾಗೂ ವರ್ತಕರು 20 ರೂ.ನ ಛಾಪಾಕಾಗದ ನೀಡಬೇಕೆಂದು ಪಿಡಿಒ ಹೇಳುತ್ತಿದ್ದಾರೆ ಎಂದು ಹೇಳಿದರು.

ಪಿಡಿಒ ಪ್ರಭಾ ಮಾತನಾಡಿ, ನಾವು ಯಾವುದೇ ಹೊಸ ನಿಯಮ ಜಾರಿಗೆ ತಂದಿಲ್ಲ. ಹಿಂದೆ ಕೈಬರಹದಲ್ಲಿ ಪರವಾನಗಿ ಪತ್ರ ವಿತರಿಸಲಾಗುತ್ತಿತ್ತು. ಆದರೆ, ಸರ್ಕಾರ ಆನ್‌ಲೈನ್‌ ವ್ಯವಸ್ಥೆ ಮಾಡಿದೆ.ಇದಕ್ಕೆ ಕೆಲ ದಾಖಲಾತಿ ವರ್ತಕರು ನೀಡಬೇಕು.ಕೃಷಿ ಜಾಗದಲ್ಲಿ ಅಕ್ರಮಕಟ್ಟಡ ನಿರ್ಮಿಸಿ ವಾಣಿಜ್ಯಕ್ಕೆ  ಬಳಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ತಕರಿಂದ ಸ್ಥಳದ ಇ ಸ್ವತ್ತು ಪಡೆದು ಪರಿಶೀಲಿಸಿ, ಪರವಾನಗಿ ನೀಡಲಾಗುತ್ತದೆ ಎಂದರು.

ಕೆಲವು ವರ್ತಕರು ಬ್ಯಾಂಕ್‌ ಹಾಗೂ ಸಹಕಾರ ಸಂಘಗಳಲ್ಲಿ ಸಾಲ ಪಡೆದು ತೀರಿಸದೆ ಊರು ಬಿಟ್ಟಿರುತ್ತಾರೆ. ಈ ಮಾಹಿತಿಯನ್ನು ಬ್ಯಾಂಕಿನವರು ಗ್ರಾಪಂಗೆ ಕೇಳುತ್ತಾರೆ. ಹಾಗಾಗಿ ಇ ಸತ್ತು ನೀಡದ ವರ್ತಕರಿಂದ 20 ರೂ. ಛಾಪಾಕಾಗದ ಪಡೆದು, ಯಾವುದೇ ರೀತಿ ಸಾಲ ಪಡೆದುಕೊಳ್ಳುವುದಿಲ್ಲ ಎಂದು ಬರೆಯಿಸಿ ಸಹಿ ಮಾಡಿಸಿಕೊಳ್ಳುತ್ತೇವೆ ಅಷ್ಟೇ ಎಂದು ತಿಳಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವರ್ತಕರ ಸಂಘದ ಉಪಾಧ್ಯಕ್ಷ ವೆಂಕಟೇಶ್‌, ಸಾಲ ನೀಡುವುದು ಬ್ಯಾಂಕಿನವರ ವಿವೇಚನೆಗೆ ಬಿಟ್ಟಿದ್ದು, ವೈಯಕ್ತಿಕ ದಾಖಲೆ ಪರಿಶೀಲನೆ ಮಾಡಿ ಸಾಲ ನೀಡುತ್ತಾರೆ. ಅದಕ್ಕೆ ನಿಮಗೆ ಏಕೆ ಬಾಂಡ್‌ ಪೇಪರ್‌ ನೀಡಬೇಕು ಎಂದರು. ಪಿಎಸ್‌ಐ ಕೆ.ಎನ್‌.ಚಂದ್ರಶೇಖರ್‌ಭದ್ರತೆ ಕಲ್ಪಿಸಿದ್ದರು. ಪಂಚಾಯ್ತಿ ಆಡಳಿತ ಅಧಿಕಾರಿ ಉಳ್ಳಾಗಡ್ಡಿ, ಕಾರ್ಯದರ್ಶಿ ಶೇಖರ್‌, ವರ್ತಕರ ಸಂಘದ ಕಾರ್ಯದರ್ಶಿ ಭೋಗರಾಜ್‌, ಖಜಾಂಚಿ ಶಿವಕುಮಾರ್‌ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.