ತಿಂಗಳುಗಳ ಬಳಿಕ ಮೇಲೇರಲಿದೆ ಕರಾವಳಿಯ ಬೆಳ್ಳಿ ಪರದೆ!

ಕೋಸ್ಟಲ್‌ವುಡ್‌ನ‌ಲ್ಲಿ ಕುತೂಹಲ; ಸಿನೆಮಾ ರಿಲೀಸ್‌ಗೆ ತಯಾರಿ

Team Udayavani, Oct 5, 2020, 12:49 PM IST

MNG-TDY-2

ಮಹಾನಗರ, ಅ. 4: ಬರೋಬ್ಬರಿ ಏಳು ತಿಂಗಳುಗಳ ಬಳಿಕ ಅ. 15ರಿಂದ ಚಿತ್ರಮಂದಿರಗಳು ಆರಂಭವಾಗುವ ಸುಳಿವು ದೊರೆಯುತ್ತಿರುವಂತೆಯೇ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ನಿರೀಕ್ಷೆ ಆರಂಭವಾಗಿದೆ.

ಸಿನೆಮಾ ಪ್ರದರ್ಶನ ಆರಂಭದ ಬಗ್ಗೆ ಕೇಂದ್ರ ಸರಕಾರ ಸಹಮತ ವ್ಯಕ್ತಪಡಿಸಿದ್ದ ರಿಂದ ಕರಾವಳಿ ಭಾಗದಲ್ಲಿ ಈಗಾಗಲೇ ಸಿದ್ಧ ಗೊಂಡಿರುವ ತುಳು ಸಿನೆಮಾ ಪ್ರದರ್ಶನಕ್ಕೆ ತಯಾರಿ ನಡೆಯುತ್ತಿದೆ. ಈ ಮೂಲಕ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಚೇತರಿಕೆ ಶುರುವಾಗುವ ಲಕ್ಷಣ ಗೋಚರಿಸಿದೆ.

ಸದ್ಯದ ಮಾಹಿತಿ ಪ್ರಕಾರ; ಕಾರ್ನಿಕದ ಕಲ್ಲುರ್ಟಿ, ಇಂಗ್ಲೀಷ್‌, ಇಲ್ಲೊಕ್ಕೆಲ್‌, ಪೆಪ್ಪೆರೆರೆ ಪೆರೆರೆರೆ ಸಿನೆಮಾಗಳು ಈಗಾಗಲೇ ಬಿಡುಗಡೆಗೆ ಸಿದ್ಧವಾಗಿವೆ. ಈ ಪೈಕಿ ಕಾರ್ನಿಕದ ಕಲ್ಲುರ್ಟಿ, ಇಂಗ್ಲೀಷ್‌ ಸಿನೆಮಾಗಳು ಲಾಕ್‌ಡೌನ್‌ ಮುನ್ನವೇ ಪ್ರದರ್ಶನಕ್ಕೆ ದಿನಾಂಕ ನಿಗದಿ ಮಾಡಿತ್ತಾ ದರೂ ಲಾಕ್‌ಡೌನ್‌ ಕಾರಣದಿಂದ ಪ್ರದರ್ಶನ ಸ್ಥಗಿತಗೊಳಿಸಿತ್ತು. ಈ ಮಧ್ಯೆ, ಪೆಪ್ಪೆರೆರೆ ಪೆರೆರೆರೆ ಸಿನೆಮಾ ಡಿಸೆಂಬರ್‌ನಲ್ಲಿ ಒಟಿಟಿ ಫ್ಲ್ಯಾಟ್‌ಫಾರಂನಲ್ಲಿ ರಿಲೀಸ್‌ಗೆ ಸಿದ್ಧವಾಗಿವೆ. ಒಂದು ವೇಳೆ ಥಿಯೇಟರ್‌ ಆರಂಭವಾಗುವುದಾದರೆ ಈ ಸಿನೆಮಾ ಥಿಯೇಟರ್‌ನಲ್ಲಿಯೂ ರಿಲೀಸ್‌ ಆಗಲಿದೆ. ಜತೆಗೆ ವಿಕ್ರಾಂತ್‌, ಲಾಸ್ಟ್‌ ಬೆಂಚ್‌, ಏರೆಗಾವುಯೆ ಕಿರಿಕಿರಿ, ಅಗೋಳಿ ಮಂಜಣ್ಣ ಮುಂತಾದ ಸಿನೆಮಾಗಳು ಕೂಡ ಬಿಡುಗಡೆಗೆ ಸಿದ್ಧವಾಗಿವೆೆ.  ಈ ಮಧ್ಯೆ, ಮಗನೇ ಮಹಿಷ, ರಾಜ್‌ ಸೌಂಡ್ಸ್‌ ಆ್ಯಂಡ್‌ ಲೈಟ್ಸ್‌, ಟ್ಯಾಕ್ಸಿ ಬಾಬಣ್ಣ, ಗಬ್ಬರ್‌ಸಿಂಗ್‌ ಸಹಿತ ಇನ್ನೂ ಕೆಲವು ಸಿನೆಮಾಗಳು ಕೆಲವೇ ದಿನಗಳಲ್ಲಿ ಶೂಟಿಂಗ್‌ ಆರಂಭಿಸಲಿವೆ.

ಒಂದೊಂದು  ಸೀಟ್‌ ಖಾಲಿ!  :  ಚಿತ್ರಮಂದಿರ ತೆರೆದರೆ ಚಿತ್ರೋದ್ಯಮ ಚೇತರಿಸಿಕೊಳ್ಳಲು ಹೆಚ್ಚು ಸಮಯ ಬೇಕಿಲ್ಲ. ಮನೋರಂಜನೆಗಾಗಿ ಜನ ಸಿನೆಮಾ ನೋಡಲು ಬಂದೇ ಬರುತ್ತಾರೆ ಎಂಬ ಆಶಾಭಾವ ಇದೆ ಎಂಬುದು ಸಿನೆಮಾ ಥಿಯೇಟರ್‌ಗಳ ಪ್ರಮುಖರ ಅಭಿಪ್ರಾಯ. ಥಿಯೇಟರ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕಾರಣದಿಂದ ಒಂದು ಸೀಟಿನ ಅನಂತರದ ಸೀಟನ್ನು ಖಾಲಿ ಬಿಡಲಾಗುತ್ತದೆ. ಜತೆಗೆ, ಒಟ್ಟು ಥಿಯೇಟರ್‌ನಲ್ಲಿ ಅರ್ಧದಷ್ಟು ಪ್ರೇಕ್ಷಕರ ವೀಕ್ಷಣೆಗೆ ಮಾತ್ರ ಅವಕಾಶ ನೀಡಲಾಗುವುದು. ಅದೇ ರೀತಿ ಸಿನೆಮಾ ಟಿಕೆಟ್‌ ಬದಲು ಆನ್‌ಲೈನ್‌ ಟಿಕೆಟ್‌ ಅಥವಾ ಮೆಸೇಜ್‌ ತೋರಿಸುವ ಮೂಲಕ ಸಿನೆಮಾ ವೀಕ್ಷಣೆಗೆ ಒತ್ತು ನೀಡಲಾಗುವುದು. ಈ ಮೂಲಕ ಸಿನೆಮಾ ಮಂದಿರಗಳು ಸಿನಿಪ್ರೀಯರ ಸ್ವಾಗತಕ್ಕೆ ಸರ್ವ ಸಿದ್ಧತೆ ಮಾಡಿದೆ ಎನ್ನುತ್ತಾರೆ ಸಿನೆಪೊಲಿಸ್‌ ಪ್ರಮುಖರಾದ ಕೀರ್ತನ್‌ ಶೆಟ್ಟಿ.

ಕಲಾವಿದರಿಗೆ ಆಶಾಭಾವ : ಥಿಯೇಟರ್‌ ಆರಂಭಕ್ಕೆ ಕೇಂದ್ರ ಸರಕಾರ ಅವಕಾಶ ನೀಡಿರುವುದು ಉತ್ತಮ ಬೆಳವಣಿಗೆ. ಈ ಮೂಲಕ ತುಳುವಿನಲ್ಲಿ ಈಗಾಗಲೇ ಸಿದ್ಧವಾಗಿರುವ ಹಲವು ಸಿನೆಮಾ ಪ್ರದರ್ಶನಕ್ಕೆ ಅವಕಾಶ ಸಿಗಲಿದೆ. ಜತೆಗೆ, ಥಿಯೆಟರ್‌ ಆರಂಭದ ಮುಖೇನ ಹೊಸ ಸಿನೆಮಾಗಳ ಶೂಟಿಂಗ್‌ ಮತ್ತೆ ಮುಂದುವರಿಸುವ ಆಶಾಭಾವ ಮೂಡುತ್ತದೆ. ಕಲಾವಿದರು, ತಂತ್ರಜ್ಞರಿಗೆ ಇದರಿಂದ ಉಪಯೋಗವಾಗಲಿದೆ. ತುಳು ನಾಟಕಕ್ಕೆ ಕೂಡ ಇದೇ ರೀತಿ ಅವಕಾಶ ದೊರಕಿದರೆ ಸಾವಿರಾರು ಕಲಾವಿದರಿಗೆ ಅನುಕೂಲವಾಗಲಿದೆ.-ಅರವಿಂದ ಬೋಳಾರ್‌ನಟ-ರಂಗಭೂಮಿ ಕಲಾವಿದರು

ಪ್ರದರ್ಶನಕ್ಕೆ ಸಿದ್ಧತೆ :ಮಂಗಳೂರಿನಲ್ಲಿ ಸಿಂಗಲ್‌ ಥಿಯೇಟರ್‌ಗಳು ಜ್ಯೋತಿ, ರಾಮಕಾಂತಿ, ರೂಪವಾಣಿ, ಪ್ರಭಾತ್‌, ಸುಚಿತ್ರ ಇದ್ದು, ಮಲ್ಟಿಪ್ಲೆಕ್ಸ್‌ನಲ್ಲಿ ಸಿಟಿಸೆಂಟರ್‌ನಲ್ಲಿ ಸಿನೆಪೊಲಿಸ್‌, ಭಾರತ್‌ ಮಾಲ್‌ನಲ್ಲಿ ಬಿಗ್‌ ಸಿನೆಮಾಸ್‌ ಹಾಗೂ ಫಾರಂ ಮಾಲ್‌ನಲ್ಲಿ ಪಿವಿಆರ್‌ ಥಿಯೇಟರ್‌ಗಳಿವೆ. ಅ. 15ರಿಂದ ಈ ಎಲ್ಲ ಥಿಯೇಟರ್‌ನಲ್ಲಿ ಸಿನೆಮಾ ಪ್ರದರ್ಶನಕ್ಕೆ ಸಿದ್ಧತೆ ನಡೆಯುತ್ತಿದೆ. ಆದರೆ ಯಾವ ಸಿನೆಮಾ ಮೊದಲು ರಿಲೀಸ್‌ ಆಗಲಿದೆ ಎಂಬುದು ಇನ್ನಷ್ಟೇ ಅಂತಿಮವಾಗಬೇಕಿದೆ. ಮುಂದೆ ಸುರತ್ಕಲ್‌ನಲ್ಲಿ ಮೂರು ಥಿಯೇಟರ್‌ಗಳು ಹೊಸದಾಗಿ ಕಾರ್ಯಾರಂಭಿಸಲಿವೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.