ಅರಣ್ಯ ಇಲಾಖೆಯಲ್ಲಿ ಹುದ್ದೆ ಖಾಲಿ ಖಾಲಿ

ಒಬ್ಬ ಅಧಿಕಾರಿಗೆ ಮೂರು ಇಲಾಖೆ ಹೊಣೆ ,ಅರಣ್ಯದಲ್ಲಿನ ಮರಗಳಿಗೆ ಬೀಳುತ್ತಿದೆ ಕೊಡಲಿಪೆಟ್ಟು

Team Udayavani, Oct 5, 2020, 5:42 PM IST

ಅರಣ್ಯ ಇಲಾಖೆಯಲ್ಲಿ ಹುದ್ದೆ  ಖಾಲಿ ಖಾಲಿ

ದೇವದುರ್ಗ: ಪಟ್ಟಣದ ವಲಯ ಅರಣ್ಯ ಇಲಾಖೆ ಕಚೇರಿಯಲ್ಲಿ ವಲಯ ಅರಣ್ಯಾಧಿಕಾರಿ ಸೇರಿ ಇತರೆ ಅಧಿಕಾರಿ, ಸಿಬ್ಬಂದಿ ಹುದ್ದೆ ಖಾಲಿ ಇದ್ದು, ಇರುವ ಸಿಬ್ಬಂದಿಯೇ ಅರಣ್ಯ ಸಂರಕ್ಷಣೆ, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಹರಸಾಹಸಪಡುವಂತಾಗಿದೆ.

ಹುದ್ದೆಗಳು ಖಾಲಿ ಖಾಲಿ: ಪಟ್ಟಣದ ವಲಯ ಅರಣ್ಯ ಇಲಾಖೆ ಅಧಿಕಾರಿ ಸೇರಿ ಎರಡು ಉಪ ವಲಯ ಅಧಿಕಾರಿ, ಅರಣ್ಯ ರಕ್ಷಣೆ, ಎಫ್‌ಡಿಎ ಸೇರಿ ವಿವಿಧ ಹುದ್ದೆಗಳು ಖಾಲಿ ಇವೆ. ಹೀಗಾಗಿ ಕಚೇರಿಯಲ್ಲಿ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗಿವೆ. ರಾಜ್ಯ ಸರಕಾರ ಸುಮಾರು ವರ್ಷಗಳಿಂದ ಖಾಲಿ ಹುದ್ದೆ ಭರ್ತಿಗೆ ಮುಂದಾಗದ್ದರಿಂದ ಇರುವ ಸಿಬ್ಬಂದಿ ಮೇಲೆ ಹೆಚ್ಚಿನ ಹೊರೆ ಬಿದ್ದಿದೆ. ಪಟ್ಟಣ ಮತ್ತು ಮಸರಕಲ್‌ ಉಪ ವಲಯ ಅಧಿಕಾರಿ ಹುದ್ದೆ ಖಾಲಿ ಇದೆ. ಅರಣ್ಯ ರಕ್ಷಕರ ಹುದ್ದೆಯೂ ಖಾಲಿರುವ ಕಾರಣ ಅರಣ್ಯ ಸಂರಕ್ಷಣೆಗೆ ಇಲ್ಲಿನ ಅಧಿ ಕಾರಿಗಳು ಸಮಸ್ಯೆ ಎದುರಿಸುವಂತಾಗಿದೆ. ಪರಿಚಾರ ಹುದ್ದೆ ಖಾಲಿ ಇದ್ದು, ಗುತ್ತಿಗೆ ಸಿಬ್ಬಂದಿ ನೇಮಕ ಮಾಡಲಾಗಿದೆ.

ಮೂರು ಇಲಾಖೆ ಹೊಣೆ: ಇಲ್ಲಿನ ವಲಯ ಅರಣ್ಯ ಅಧಿಕಾರಿಗೆ ರಾಯಚೂರು, ಮಾನ್ವಿ, ದೇವದುರ್ಗ ಪ್ರಭಾರಿ ವಹಿಸಲಾಗಿದೆ. ವಾರದಲ್ಲಿ ಎರಡ್ಮೂರು ದಿನ ಕಚೇರಿಗೆ ಆಗಮಿಸುತ್ತಿದ್ದು, ಕಚೇರಿ ಕಡತಗಳ ವಿಲೇವಾರಿ ವಿಳಂಬವಾಗುತ್ತಿದೆ. ದಿನಗೂಲಿ ಸಿಬ್ಬಂದಿ ವೇತನ ಪಾವತಿ ಕೂಡ ವಿಳಂಬವಾಗುತ್ತಿದೆ. ಎಫ್‌ ಡಿಎ ಹುದ್ದೆ ಖಾಲಿ ಇದ್ದು ಗುತ್ತಿಗೆ ಸಿಬ್ಬಂದಿ ಕಚೇರಿ, ಕೆಲಸ ಕಾರ್ಯ ನೋಡಿಕೊಳ್ಳಬೇಕಿದೆ.

ಕಾದಿಟ್ಟ ಅರಣ್ಯ: ಪಟ್ಟಣ ಸೇರಿ ತಾಲೂಕಿನಾದ್ಯಂತ ಸಾವಿರಾರು ಹೆಕ್ಟೇರ್‌ ಕಾದಿಟ್ಟ ಅರಣ್ಯ ಪ್ರದೇಶವಿದೆ. ಈ ಭಾಗದಲ್ಲಿ ಬೆಟ್ಟಗಳು, ವನ್ಯ ಸಂಪತ್ತು ಇದೆ. ಇದೀಗ ಸತತ ಮಳೆಯಿಂದ ಕಾದಿಟ್ಟ ಅರಣ್ಯ ಪ್ರದೇಶ ಹಸಿರು ಹೊದ್ದು ನಿಂತಿದೆ. ಇಲ್ಲಿನ ಮರಗಳಿಗೆ ಆಗಾಗ ಕೊಡಲಿ ಪೆಟ್ಟು ಬೀಳುತ್ತಿದ್ದು, ಸಿಬ್ಬಂದಿ ಕೊರತೆಯಿಂದ ಇವುಗಳ ಸಂರಕ್ಷಣೆ ಸವಾಲಾಗಿದೆ. ಸಾವಿರಾರು ಸಸಿಗಳು: ಜಾಲಹಳ್ಳಿ, ತಳವರದೊಡ್ಡಿ,ಸಮುದ್ರ, ಜಾಗೀರ ಜಾಡಲದಿನ್ನಿ ಸೇರಿ ಇತರೆ ಗ್ರಾಮಗಳ ವ್ಯಾಪ್ತಿಯ ಅರಣ್ಯ ಇಲಾಖೆಯ ನಿವೇಶನದಲ್ಲಿ 20 ಸಾವಿರಕ್ಕೂ ಹೆಚ್ಚು ವಿವಿಧ ಗಿಡಗಳನ್ನು ಬೆಳೆಸಲಾಗಿದೆ. ಒಂದು ಗ್ರಾಮದಲ್ಲಿ 5 ಸಾವಿರದಂತೆ ಸಸಿಗಳನ್ನು ನೆಡಲಾಗಿದೆ. ಪಟ್ಟಣದಲ್ಲಿ 900 ಗಿಡಗಳು, ರಾಜ್ಯ ಹೆದ್ದಾರಿ ರಸ್ತೆ ಪಕ್ಕದಲ್ಲಿ 900 ಗಿಡಗಳನ್ನು ಬೆಳೆಸಲಾಗಿದೆ. ರಸ್ತೆ ಬದಿ ಬೆಳೆಸಿದಗಿಡಗಳು ಆಗಾಗ ಜಾನುವಾರುಗಳಿಗೆ ಆಹಾರಆಗುತ್ತಿವೆ. ಇನ್ನಾದರೂ ಅರಣ್ಯ ಇಲಾಖೆ ಯಲ್ಲಿನ ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಮುಂದಾಗಬೇಕಿದೆ.

ರಾಯಚೂರು, ಮಾನ್ವಿ ಇಲಾಖೆ ಜತೆ ದೇವದುರ್ಗ ವಲಯ ಅರಣ್ಯ ಇಲಾಖೆ ಕಚೇರಿ ಜವಾಬ್ದಾರಿ ನೀಡಲಾಗಿದೆ. ಕೆಲ ಹುದ್ದೆಗಳು ಖಾಲಿರುವ ಕಾರಣ ಇರುವಂತಹ ಅ ಧಿಕಾರಿಗಳು ಅರಣ್ಯ ಸಂರಕ್ಷಣೆ ಮಾಡಬೇಕಾಗಿದೆ.  -ರಾಜೇಶ, ಪ್ರಭಾರಿ ವಲಯ ಅರಣ್ಯಾಧಿಕಾರಿ

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.