ಕ್ರೀಡಾಂಗಣಕ್ಕಿಲ್ಲ ಉದ್ಘಾಟನಾ ಭಾಗ್ಯ

1.5 ಕೋಟಿ ವೆಚ್ಚದಲ್ಲಿ ನಿರ್ಮಾಣ ,ಒಂದೂವರೆ ವರ್ಷವಾದರೂ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ

Team Udayavani, Oct 5, 2020, 6:30 PM IST

ಕ್ರೀಡಾಂಗಣಕ್ಕಿಲ್ಲ ಉದ್ಘಾಟನಾ ಭಾಗ್ಯ

ಸಿಂದಗಿ: ತಾಲೂಕಿನ ಕ್ರೀಡಾ ಪ್ರೇಮಿಗಳ ಮತ್ತು ಅಭಿಮಾನಿಗಳ ಬಹು ವರ್ಷಗಳ ತಾಲೂಕು ಕ್ರೀಡಾಂಗಣ ಕಟ್ಟಡ ಪೂರ್ಣಗೊಂಡರೂ ಕಳೆದ ಒಂದುವರೆ ವರ್ಷದಿಂದ ಅದಕ್ಕೆ ಉದ್ಘಾಟನೆಯ ಯೋಗ ಕೂಡಿ ಬಂದಿಲ್ಲ. ಉದ್ಘಾಟನೆ ಮೊದಲೇ ಕ್ರೀಡಾಂಗಣ ಹಾಳಾಗುವ ದುಸ್ಥಿತಿಗೆ ತಲುಪಿಸಿದೆ.

ಪಟ್ಟಣದ ವಿದ್ಯಾನಗರದ ಒಂದನೇ ಕ್ರಾಸ್‌ನಲ್ಲಿನ 5.24 ಎಕರೆ ವಿಸ್ತೀರ್ಣದಲ್ಲಿ ಅಂದಾಜು 1.5 ಕೋಟಿ ರೂ.ವೆಚ್ಚದಲ್ಲಿ ತಾಲೂಕು ಕ್ರೀಡಾಂಗಣ ಸಜ್ಜಾಗಿದೆ. ಕ್ರೀಡಾಂಗಣದಲ್ಲಿ 200 ಮೀ. ಟ್ರ್ಯಾಕ್‌ ಸಿದ್ಧಗೊಂಡಿದೆ. ಮಲ್ಟಿ ಜಿಮ್‌ಗೆ ಬೇಕಾದ ಸ್ಥಳಾವಕಾಶ, ಸಾವಿರಾರು ಪ್ರೇಕ್ಷಕರು ಕುಳಿತು ವೀಕ್ಷಿಸುವವ ಕಟ್ಟೆ (ಗ್ಯಾಲರಿ), ಆಡಳಿತಕ್ಕೆ ಹಾಗೂ ಕ್ರೀಡಾಪಟುಗಳಿಗೆ ಅನುಕೂಲವಾಗುವ ಕೊಠಡಿಗಳು ಸಿದ್ಧವಾಗಿವೆ. ಕರ್ನಾಟಕ ಭೂಸೇನಾ ನಿಗಮ ಕ್ರೀಡಾಂಗಣ ಕಾಮಗಾರಿ ನಡೆಸುತ್ತಿದೆ. ಕ್ರೀಡಾಂಗಣದಲ್ಲಿ ವಾಲಿಬಾಲ್‌, ಬಾಸ್ಕೇಟ್‌ ಬಾಲ್‌, ಲಾಂಗ್‌ಜಂಪ್‌, ಹೈ ಜಂಪ್‌ ಪಿಟ್‌, ಖೋಖೋ, ಕಬಡ್ಡಿ ಆಟಗಳ ಮೈದಾನ ಸಿದ್ಧವಾಗಿದೆ. ಇನ್ನೂ ಕೆಲ ಸಣ್ಣ ಪುಟ್ಟ ಕಾಮಗಾರಿಗಳು ನಡೆಯುತ್ತಿವೆ. ಕಟ್ಟಡ ಸೇರಿದಂತೆ, ಆಟದ ಮೈದಾನಗಳ ಬಹುಭಾಗ ಕಾಮಗಾರಿ ಪೂರ್ಣಗೊಂಡರೂ ಕರ್ನಾಟಕ ಭೂಸೇನಾ ನಿಗಮಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಗೆ ಕ್ರೀಡಾಂಗಣ ಹಸ್ತಾಂತರಿಸಿಲ್ಲ.

ತಾಲೂಕು ಕ್ರೀಡಾಂಗಣ ಕಳೆದ ಒಂದುವರೆವರ್ಷದ ಹಿಂದೆ ಉದ್ಘಾಟನೆಗೆ ಸಿದ್ಧಗೊಂಡಿತ್ತು. ವಿಧಾನ ಪರಿಷತ್‌ ಚುನಾವಣೆ ನೀತಿ ಸಂಹಿತೆಯಿಂದ ಉದ್ಘಾಟನೆ ಮುಂದೂಡಲಾಯಿತು. ನಂತರದ ದಿನಗಳಲ್ಲಿ ತಾಲೂಕು ಕ್ರೀಡಾಂಗಣ ಉದ್ಘಾಟನೆಗೆ ಮೀನ ಮೇಷ ಎಣಿಸುತ್ತಿರುವದೇಕೆ ಎಂಬುದು ಪ್ರಶ್ನೆ ಯಕ್ಷಪ್ರಶ್ನೆಯಾಗಿದೆ. ಕೆಲವೆಡೆ ವಿಶಾಲ ಜಾಗೆ ಸಮಸ್ಯೆಯಿಂದ ಕ್ರೀಡಾಂಗಣ ಮಂಜೂರಾಗದೆ ಕ್ರೀಡಾಪಟುಗಳು ಅವಕಾಶ ವಂಚಿತಗೊಳ್ಳುತ್ತಾರೆ. ಇಲ್ಲಿ ಜಾಗೆ ಮತ್ತು ಕಟ್ಟಡ ಸೌಲಭ್ಯ ಇದ್ದರೂ ಅದು ಉದ್ಘಾಟನೆಯಾಗದೆಕ್ರೀಡಾಪಟುಗಳಿಗೆ ಪ್ರಯೋಜನಕ್ಕೆ ಬಾರದಂತಾಗಿದೆ.

ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲಿಯೂ ಉತ್ತಮ ಕ್ರೀಡಾಪಟುಗಳಿದ್ದಾರೆ. ರಾಜ್ಯ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ್ದಾರೆ. ಬೇರೆ ಬೇರೆ ಕಡೆಗೆ ಕ್ರೀಡಾ ಯೋಜನೆ ರೂಪಿಸುವ ಬದಲು ಕ್ರೀಡಾಂಗಣದಲ್ಲಿ ಆಯೋಜಿಸಿಇಲ್ಲಿಯೇ ಇಲಾಖೆಯ ಮಟ್ಟದಲ್ಲಿ ತರಬೇತಿ ಕೊಡುವಂತಾದರೆ ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಿದಂತಾಗುತ್ತದೆ. ಕ್ರೀಡಾಂಗಣ ಮತ್ತು ಕಟ್ಟಡ ಸಂಪೂರ್ಣ ಸದುಪಯೋಗವಾಗದಿದ್ದರೆ ಇಲ್ಲಿ ಅನೈತಿಕ ಚಟುವಟಿಕೆಗಳಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಇದನ್ನು ತಡೆಯಲು ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕು. ತಾಲೂಕಿಗೆ ಯಾವಾಗಲೂ ಸರಕಾರಿ ಶಾಲಾ ದೈಹಿಕ ಶಿಕ್ಷಕರನ್ನು ಪ್ರಭಾರಿ ತಾಲೂಕು ಯುವಜನ ಮತ್ತು ಕ್ರೀಡಾಧಿ ಕಾರಿಯಾಗಿ ನೇಮಿಸಲಾಗುತ್ತಿತ್ತು. ಕಳೆದ ಒಂದುವರೆ ವರ್ಷದಿಂದ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಯಾರು ಎಂಬುದು ಗೊತ್ತಿಲ್ಲ ಹೀಗಾದಲ್ಲಿ ಯುವಜನರು ಯಾರಿಗೆಸಂಪರ್ಕಿಸಬೇಕು ಎಂಬುದು ತಿಳಿಯುತ್ತಿಲ್ಲ. ಇದರಿಂದ ತಾಲೂಕಿನಲ್ಲಿ ದಸರಾ ಮತ್ತು ಇತರ ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟಗಳು ದಿಕ್ಕು ತಪ್ಪಲಿವೆ.

ಕಟ್ಟಡ ಕಾಮಗಾರಿ ಇತರ ಕಾಮಗಾರಿ ಪೂರ್ಣಗೊಂಡರೂ ಅದು ಕ್ರೀಡಾಪಟುಗಳಿಗೆ ಸಾರ್ವತ್ರಿಕವಾಗಿ ಅರ್ಪಣೆಯಾಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗುತ್ತಿಲ್ಲ. ಇದರಿಂದ ಕ್ರೀಡಾಳುಗಳಿಗೆ ಉತ್ತೇಜನವಾಗಬೇಕಾಗಿದ್ದ ಯುವಜನ ಮತ್ತು ಕ್ರೀಡಾ ಇಲಾಖೆ ದಿವ್ಯ ಮೌನದಿಂದ ಕ್ರೀಡಾಪಟುಗಳಿಗೆ ನಿರಾಶೆಯಾಗುತ್ತಿದೆ. ಕೇವಲ ಸರಕಾರ ಕಟ್ಟಡ ನಿರ್ಮಾಣ ಮಾಡಿದರೆ ಸಾಲದು, ಕ್ರೀಡಾ ಚಟುವಟಿಕೆ ನಿರಂತರವಾಗಿರಲು ಇಲ್ಲಿ ಸರಿಯಾದ ವ್ಯವಸ್ಥೆ ಕಲ್ಪಿಸಿಕೊಡಬೇಕು. ಕಟ್ಟಡದ ಎಲ್ಲ ಕೊಠಡಿ ಮತ್ತು ಭಾಗಗಳಸಂಪೂರ್ಣ ಬಳಕೆಯಾಗಬೇಕು. ಸಿಬ್ಬಂದಿ ಕಾರ್ಯ ನಿರ್ವಹಿಸುವಂತಾಗಬೇಕು. ಒಬ್ಬದಕ್ಷ ಕ್ರೀಡಾಧಿಕಾರಿಯನ್ನ ನೇಮಕ ಮಾಡಿದಲ್ಲಿಕ್ರೀಡಾಂಗಣ ಸುಸಜ್ಜಿತವಾಗಿ ಇರಲು ಮತ್ತು ಕ್ರೀಡಾ ಚಟುಟಿಕೆಗಳು ನಡೆಯುತ್ತವೆ ಎಂಬುದು ಕ್ರೀಡಾಪಟುಗಳ ಮತ್ತು ಸಾರ್ವಜನಿಕರ ಅಭಿಪ್ರಾಯ.

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಠ್ಯ ಅಧ್ಯಯನದ ಜೊತೆಗೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಪಟ್ಟಣದಲ್ಲಿ ಕ್ರೀಡಾಪಟುಗಳಿಗೆ ಸಿದ್ಧಗೊಂಡತಾಲೂಕು ಕ್ರೀಡಾಂಗಣ ಉದ್ಘಾಟನೆಗೊಂಡು ಅಲ್ಲಿ ವಿದ್ಯಾರ್ಥಿ ಹಾಗೂ ಯುವಕರಿಗಾಗಿ ಕ್ರೀಡಾ ಚಟುವಟಿಕೆಗಳು ಪ್ರಾರಂಭವಾಗಲಿ -ನವೀನ ಶಹಾಪುರ,ಕ್ರೀಡಾಭಿಮಾನಿ, ಸಿಂದಗಿ

ಕ್ರೀಡಾಂಗಣ ಕಟ್ಟಡ ಪೂರ್ಣಗೊಂಡ ನಂತರ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆಗಳ ಮೈದಾನ ಸಿದ್ಧ ಪಡಿಸಲು ವಿಳಂಬವಾಗಿದೆ. ಅಲ್ಲದೆ ಕರ್ನಾಟಕ ಭೂಸೇನಾ ನಿಗಮ ನಮ್ಮ ಇಲಾಖೆಗೆ ಇನ್ನೂ ಹಸ್ತಾಂತರಿಸಿಲ್ಲ. ಆದ ಕಾರಣ ಉದ್ಘಾಟನೆ ವಿಳಂಬವಾಗಿದೆ. ಎಸ್‌.ಜಿ. ಲೋಣಿ  ಸಹಾಯಕ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ವಿಜಯಪುರ

ಪಟ್ಟಣದಲ್ಲಿ ಕ್ರೀಡಾಂಗಣ ಇಲ್ಲದ ಸಂದರ್ಭದಲ್ಲಿ ಸ್ಥಳೀಯ ಶಾಲಾ-ಕಾಲೇಜುಗಳಲ್ಲಿ ಕ್ರೀಡಾಭ್ಯಾಸ ಮಾಡುತ್ತಿದ್ದೇವು. ಆದರೆ ಈಗ ಅಲ್ಲಿ ಅವಕಾಶ ಸಿಗುತ್ತಿಲ್ಲ. ಕ್ರೀಡಾಂಗಣ ಶೀಘ್ರದಲ್ಲಿ ಉದ್ಘಾಟನೆಯಾಗಬೇಕು. –ಮಲ್ಲನಗೌಡ ಬಿರಾದಾರ, ಮ್ಯಾರಾಥಾನ್‌ ಪಟು, ಚಿಕ್ಕಸಿಂದಗಿ

 

-ರಮೇಶ ಪೂಜಾರ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.