ಮುಂಬೈ ಓಟಕ್ಕೆ ಬ್ರೇಕ್‌ ನೀಡಲು ರಾಯಲ್ಸ್‌ ಕಾತರ


Team Udayavani, Oct 6, 2020, 6:02 AM IST

ಮುಂಬೈ ಓಟಕ್ಕೆ ಬ್ರೇಕ್‌ ನೀಡಲು ರಾಯಲ್ಸ್‌ ಕಾತರ

ಅಬುಧಾಬಿ: ಪ್ರಚಂಡ ಫಾರ್ಮ್ ಮತ್ತು ಆತ್ಮವಿಶ್ವಾಸದಲ್ಲಿರುವ ಮುಂಬೈ ಇಂಡಿಯನ್ಸ್‌ನ ಗೆಲುವಿನ ಓಟಕ್ಕೆ ಬ್ರೇಕ್‌ ಹಾಕಲು ರಾಜಸ್ಥಾನ ರಾಯಲ್ಸ್‌ ಕಾತರದಲ್ಲಿದೆ. ಯುವ ಆಟಗಾರರನ್ನು ಒಳಗೊಂಡ ರಾಯಲ್ಸ್‌ ತಂಡ ಮತ್ತೆ ಗೆಲುವಿನ ಟ್ರ್ಯಾಕ್‌ಗೆ ಮರಳಲು ಯೋಜನೆ ಹಾಕಿಕೊಂಡಿದೆ.

ಕೂಟದಲ್ಲಿ ಉತ್ತಮ ಆರಂಭ ಪಡೆದಿದ್ದ ರಾಜಸ್ಥಾನ ತಂಡವು ಕಳೆದ ಎರಡು ಪಂದ್ಯಗಳಲ್ಲಿ ನಿರೀಕ್ಷಿತ ನಿರ್ವಹಣೆ ನೀಡಲು ವಿಫ‌ಲವಾಗಿತ್ತು. ಟಿ20 ಪಂದ್ಯದಲ್ಲಿ ಯಾವುದನ್ನು ಊಹಿಸಲು ಸಾಧ್ಯವಿಲ್ಲ. ಕಳೆದ ಎರಡು ಪಂದ್ಯಗಳಲ್ಲಿ ಎದುರಾಳಿ ತಂಡ ನಮ್ಮನ್ನು ಹಿಂದಿಕ್ಕಿವೆ ಎಂದು ರಾಯಲ್ಸ್‌ ನಾಯಕ ಸ್ಟೀವನ್‌ ಸ್ಮಿತ್‌ ಹೇಳಿದ್ದಾರೆ.

ಮುಂಬೈ ವಿರುದ್ಧ ಉತ್ತಮ ಬ್ಯಾಟಿಂಗ್‌ ನಡೆಸುವ ವಿಶ್ವಾಸವಿದೆ. ಕಳೆದ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್‌ನಲ್ಲಿ ವೈಫ‌ಲ್ಯ ಅನುಭವಿಸಿದ್ದೆ. ಆದರೆ ಇನ್ನು ಹಾಗೇ ನಡೆಯದು. ಸ್ಫೋಟಕ ಆಟಕ್ಕೆ ಮುಂದಾಗುವೆ ಎಂದು ಸ್ಮಿತ್‌ ತಿಳಿಸಿದ್ದಾರೆ.

ಕೆಲವು ಬದಲಾವಣೆ
ಜೋಸ್‌ ಬಟ್ಲರ್‌ ಅವರ ವೈಫ‌ಲ್ಯ ರಾಜಸ್ಥಾನದ ನೀರಸ ನಿರ್ವಹಣೆಗೆ ಪ್ರಮುಖ ಕಾರಣವೆಂದು ಹೇಳಬಹುದು. ಜೈದೇವ್‌ ಉನಾದ್ಕತ್‌ ಮತ್ತು ಯುವ ರಿಯಾನ್‌ ಪರಾಗ್‌ ಕೂಡ ನಿರೀಕ್ಷಿತ ನಿರ್ವಹಣೆ ನೀಡಿಲ್ಲ. ಹೀಗಾಗಿ ತಂಡದಲ್ಲಿ ಕೆಲವೊಂದು ಬದಲಾವಣೆ ಮಾಡುವ ಬಗ್ಗೆ ಸ್ಮಿತ್‌ ಮಾತನಾಡಿದ್ದಾರೆ. ಅಗ್ರ ಕ್ರಮಾಂಕದಲ್ಲಿ ಪರಾಗ್‌ ಬದಲಿಗೆ ಯಶಸ್ವಿ ಜೈಸ್ವಾಲ್‌ ಅವರಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಉನಾದ್ಕತ್‌ ಬದಲಿಗೆ ಅನುಭವಿ ವರುಣ್‌ ಅರೊನ್‌ ಅಥವಾ ಯುವ ಕಾರ್ತಿಕ್‌ ತ್ಯಾಗಿ ಅವರನ್ನು ಸೇರ್ಪಡೆಗೊಳಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಮುಂಬೈ ಪ್ರಚಂಡ ಫಾರ್ಮ್
ಕಳೆದ ಕೆಲವು ಪಂದ್ಯಗಳಲ್ಲಿ ಪ್ರಚಂಡ ಫಾರ್ಮ್ ಪ್ರದರ್ಶಿಸಿದ ಹಾಲಿ ಚಾಂಪಿಯನ್‌ ಮುಂಬೈ ತಂಡವು ಆರಂಕದೊಂದಿಗೆ ಉತ್ತಮ ರನ್‌ಧಾರಣೆಯ ಆಧಾರದಲ್ಲಿ ಸದ್ಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸೂಪರ್‌ ಓವರ್‌ನಲ್ಲಿ ಆರ್‌ಸಿಬಿ ವಿರುದ್ಧ ಆಘಾತಕಾರಿ ಸೋಲನ್ನು ಕಂಡ ಬಳಿಕ ಮುಂಬೈ ತಂಡವು ಪಂಜಾಬ್‌ ಮತ್ತು ಹೈದರಾಬಾದ್‌ ವಿರುದ್ಧ ಅಮೋಘ ಗೆಲುವು ದಾಖಲಿಸಿ ಗೆಲುವಿನ ಟ್ರ್ಯಾಕ್‌ಗೆ ಮರಳಿತ್ತು.
ರೋಹಿತ್‌ ಶರ್ಮ ಫಾರ್ಮ್ನಲ್ಲಿರುವುದು ಮುಂಬೈಯ ಅಭಿಯಾನದ ಪ್ರಮುಖ ಅಂಶವಾಗಿದೆ. ಅವರು 176 ರನ್‌ ಗಳಿಸಿದ್ದರೆ ಕ್ವಿಂಟನ್‌ ಡಿ ಕಾಕ್‌ ಕಳೆದ ಪಂದ್ಯದಲ್ಲಿ ಉತ್ತಮವಾಗಿ ಆಡಿ ಗಮನ ಸೆಳೆದಿದ್ದಾರೆ. ಕೈರನ್‌ ಪೊಲಾರ್ಡ್‌ ಸ್ಥಿರ ನಿರ್ವಹಣೆ ನೀಡುತ್ತ ಬಂದಿದ್ದರೆ ಕಿಶನ್‌, ಹಾರ್ದಿಕ್‌ ಪಾಂಡ್ಯ ಕೊನೆ ಹಂತದಲ್ಲಿ ಸ್ಫೋಟಕ ಟಚ್‌ ನೀಡುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಹಾರ್ದಿಕ್‌ ಅವರ ಸಹೋದರ ಕೃಣಾಲ್‌ ಕೂಡ ಸ್ಫೋಟಕ ಬ್ಯಾಟಿಂಗ್‌ ನಡೆಸಿದ್ದರು. ಮುಂಬೈ ಪರ ಜೇಮ್ಸ್‌ ಪ್ಯಾಟಿನ್ಸನ್‌ ಉತ್ತಮ ಬೌಲಿಂಗ್‌ ದಾಳಿ ಸಂಘಟಿಸಿದ್ದಾರೆ. ಜಸ್‌ಪ್ರೀತ್‌ ಬುಮ್ರಾ, ಟ್ರೆಂಟ್‌ ಬೌಲ್ಟ್ ಮತ್ತು ಹಾರ್ದಿಕ್‌ ಪಾಂಡ್ಯ ಎದುರಾಳಿಯನ್ನು ಕಟ್ಟಿಹಾಕಲು ಸಮರ್ಥರಿದ್ದಾರೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.