ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ರಾಯಚೂರಿನ ಯುವತಿಗೆ 2.69 ಲಕ್ಷ ರೂ. ವಂಚನೆ
Team Udayavani, Oct 6, 2020, 10:15 AM IST
ರಾಯಚೂರು: ಹಿಂದಿಯ ಖಾಸಗಿ ವಾಹಿನಿಯಲ್ಲಿ ಖ್ಯಾತ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ ಪತಿ ರಿಯಾಲಿಟಿ ಶೋ ಹೆಸರಲ್ಲಿ ರಾಯಚೂರಿನ ಯುವತಿಗೆ ಲಕ್ಷಾಂತರ ರೂ. ವಂಚಿಸಲಾಗಿದೆ.
ನಗರದ ಆಶ್ರಯ ಕಾಲೋನಿಯ ನಸೀಮಾ ಮಹೆಬೂಬ್ ಬರೋಬ್ಬರಿ 2,69,050 ರೂ. ಕಳೆದುಕೊಂಡಿದ್ದಾರೆ. ಮನೆಗೆಲಸ ಮಾಡಿ ಜೀವದೂಡುತ್ತಿದ್ದ ನಸಿಮಾ ಹಣದಾಸೆಗೆ ವಂಚನೆಗೆ ಒಳಗಾಗಿದ್ದಾರೆ.
ಸೆ.23ರಿಂದ 29ರವರೆಗೆ ವಿಜಯ ಕುಮಾರ್ ಎನ್ನುವ ಹೆಸರು ಹೇಳಿಕೊಂಡು ವ್ಯಕ್ತಿಯೊಬ್ಬ ಕರೆ ಮಾಡಿದ್ದಾರೆ. ರಿಯಾಲಿಟಿ ಶೋದಲ್ಲಿ ನೇರವಾಗಿ ಪಾಲ್ಗೊಳ್ಳಲು ಲಕ್ಕಿ ಡ್ರಾ ನಡೆಸಿದ್ದು, ಅದರಲ್ಲಿ ನಿಮ್ಮ ಹೆಸರು ಆಯ್ಕೆಯಾಗಿದೆ. 25 ಲಕ್ಷ ರೂ. ಬಹುಮಾನ ಬಂದಿದೆ ಎಂದು ವಾಟ್ಸಪ್ ಮೂಲಕ ರವಾನಿಸಿದ್ದಾನೆ.
ಇದನ್ನೂ ಓದಿ:ತನ್ನನ್ನು ಅವಮಾನಿಸಿದ ಪ್ರಶಾಂತ್ ಸಂಬರಗಿಗೆ ತಿರುಗೇಟು ನೀಡಿದ ಡಿಕೆ ರವಿ ಪತ್ನಿ ಕುಸುಮಾ!
ಬಹುಮಾನ ಪಡೆಯಲು 8050 ರೂ. ಪಾವತಿಸುವಂತೆ ತಿಳಿಸಿದ್ದಾನೆ. ಆತನ ಮಾತು ನಂಬಿ ನಸಿಮಾ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದಾಳೆ. ಇದಾದ ಬಳಿಕ ಬೇರೆ ಬೇರೆ ಶುಲ್ಕಗಳೆಂದು ಬೇರೆ ಖಾತೆಗೆ ನಂಬರ್ ನೀಡಿ ಬರೋಬ್ಬರಿ 2,69,050 ರೂ. ಹಾಕಿಸಿಕೊಂಡಿದ್ದಾನೆ.
ಬಹುಮಾನ ಬೇಕೆಂದರೆ ಪುನಃ ಹಣ ಪಾವತಿಸುವಂತೆ ಕೇಳಿದಾಗ ನಸಿಮಾ ಅವರಿಗೆ ಮೋಸ ಹೋಗಿರುವುದು ಗೊತ್ತಾಗಿದೆ. ಈ ಕುರಿತು ಅ.5ರಂದು ಸಿ.ಇ.ಎನ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ