ಹುಬ್ಬಳ್ಳಿಯಲ್ಲಿ ಹೆದ್ದಾರಿಗೆ ನುಗ್ಗಿದ ಹಳ್ಳದ ನೀರು! ಕೆಲಕಾಲ ಸಂಚಾರ ಸ್ಥಗಿತ
Team Udayavani, Oct 6, 2020, 11:30 AM IST
ಹುಬ್ಬಳ್ಳಿ: ಕುಂದಗೋಳ ಹಾಗೂ ಶಿಗ್ಗಾವಿ ಸುತ್ತಮುತ್ತ ಸೋಮವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಿಂದ ನಗರದ ಹೊರ ವಲಯದ ಕುಂದಗೋಳ ಕ್ರಾಸ್ ಬಳಿಯ ಹಳ್ಳ ತುಂಬಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ಕ್ಕೆ ನೀರು ನುಗ್ಗಿದ ಪರಿಣಾಮ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯಾಯಿತು.
ಈ ಪ್ರದೇಶಗಳಲ್ಲಿ ಸುರಿದ ಮಳೆಯಿಂದ ರಭಸವಾಗಿ ಹರಿದು ಬಂದು ಹಳ್ಳದ ನೀರು ಕುಂದಗೋಳ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ ಮೇಲೆ ಬಂದಿದೆ. ಈ ಹೆದ್ದಾರಿಯಲ್ಲಿ ಷಟ್ಪಥ ರಸ್ತೆ ಹಾಗೂ ಹಳ್ಳದ ಮೇಲೆ ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಹಳ್ಳದ ನೀರೆಲ್ಲ ರಾಷ್ಟ್ರೀಯ ಹೆದ್ದಾರಿ ಮಾರ್ಗ ಆವರಿಸಿತ್ತು. ಇದರಿಂದ ಹುಬ್ಬಳ್ಳಿ-ಹಾವೇರಿ ನಡುವಿನ ಸಂಚಾರ ಕೆಲ ಕಾಲ ಸ್ಥಗಿತಗೊಂಡಿತ್ತು. ಹೆದ್ದಾರಿಯ ಎರಡು ಬದಿಯಲ್ಲಿ ಸುಮಾರು 3-4 ಕಿಮೀ ದೂರದಷ್ಟು ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಾಹನ ಸವಾರರು ಹಾಗೂ ಪ್ರಯಾಣಿಕರು ಸಮಸ್ಯೆ ಅನುಭವಿಸಬೇಕಾಯಿತು.
ಇದನ್ನೂ ಓದಿ :ನನ್ನ ಸ್ಟಾಫ್ ಗೆ ಹಲ್ಲೆ ಮಾಡಿದ್ದಾರೆ: ಸಿಬಿಐ ಅಧಿಕಾರಿಗಳ ಮೇಲೆ ಡಿಕೆಶಿ ಗಂಭೀರ ಆರೋಪ
ರೋಗಿಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ವಾಹನಗಳ ಚಾಲಕರು ಸಹಿತ ವಾಹನಗಳು ಸಾಲುಗಟ್ಟಿ ನಿಂತಿದ್ದಕ್ಕೆ ಮುಂದೆ ಸಾಗಲಾಗದೆ ಪರಿತಪಿಸಬೇಕಾಯಿತು. ಹಳ್ಳದ ನೀರಿನ ಹರಿವು ಕ್ರಮೇಣ ಕಡಿಮೆಯಾಗುತ್ತಿದ್ದಂತೆ ಒಂದೊಂದಾಗಿ ವಾಹನಗಳು ಮುಂದೆ ಸಾಗಿದವು. ಸ್ಥಳಕ್ಕೆ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಹಾಗೂ ಗ್ರಾಮೀಣ ಠಾಣೆ ಪೊಲೀಸರು ತೆರಳಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ