ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ

ಹೋಂ ಕ್ವಾರಂಟೈನ್‌ನಲ್ಲಿರುವವರಿಂದ ಪಾಲಿಕೆ ನೀಡುತ್ತಿರುವ ಚಿಕಿತ್ಸೆಕುರಿತು ಸಮೀಕ್ಷೆ

Team Udayavani, Oct 6, 2020, 11:42 AM IST

bng-tdy-2

ಬೆಂಗಳೂರು: ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆದವರಿಂದ ಪಾಲಿಕೆಯ ಸೇವೆಯ ಬಗ್ಗೆ (ಫೀಡ್‌ಬ್ಯಾಕ್‌) ಸಂಗ್ರಹಿಸುವಂತೆ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌ ಬಿಬಿಎಂಪಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್ ಸೋಂಕು ತಡೆ ಸಂಬಂಧ ಪೂರ್ವ ವಲಯ ಕೋವಿಡ್‌ ಕಮಾಂಡ್‌ ಸೆಂಟರ್‌ (ಅಕ್ಕಮಹಾದೇವಿ ಸಭಾಂಗಣ)ಗೆ ಆಯುಕ್ತರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಅಧಿಕಾರಿಗಳ ಜತೆ ಮಾತನಾಡಿದ ಅವರು, ನಗರದಲ್ಲಿ ಸೋಂಕು ದೃಢಪಟ್ಟ ಶೇ.55 ಜನ ಹೋಂ ಐಸೋಲೇಷನ್‌ಗೆ ಒಲವು ತೋರಿಸುತ್ತಿದ್ದಾರೆ. ಇವರಿಗೆ ಪಾಲಿಕೆಯ ಕಮಾಂಡ್‌ ಸೆಂಟರ್‌ ಹಾಗೂ ಆರೋಗ್ಯಾಧಿಕಾರಿಗಳು ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಜತೆಗೆ ವಿಟಮಿನ್‌ ಮಾತ್ರೆಗಳು ನೀಡಲಾಗುತ್ತಿದ್ದು, ಸೋಂಕಿತರ ಆರೋಗ್ಯ ಕಾಳಜಿ ವಹಿಸಲಾಗುತ್ತಿದೆ. ಅಲ್ಲದೆ, ತುರ್ತು ವೇಳೆಯಲ್ಲಿ ಸ್ಪಂದಿಸಲಾಗುತ್ತಿದೆ. ಈ ವ್ಯವಸ್ಥೆ ಸಾರ್ವಜನಿಕರಿಗೆ ತೃಪ್ತಿ ನೀಡಿದೆಯೇ ಅಥವಾ ಬದಲಾವಣೆ ಮಾಡಿಕೊಳ್ಳಬೇಕೆ ಎಂಬುದನ್ನು ತಿಳಿಸಬೇಕಿದೆ ಹೀಗಾಗಿ, ಗೃಹ ಆರೈಕೆಯಲ್ಲಿರುವವರ ಅಭಿಪ್ರಾಯ ತಿಳಿಯುಲು ಒಂದು ನಿರ್ದಿಷ್ಟ ಪ್ರಶ್ನೆ ಮಾದರಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಸೋಂಕಿತರ ಚಿಕಿತ್ಸೆ ನೀಡುತ್ತಿರುವ ಮಾದರಿ ಬಗ್ಗೆ ಮಾಹಿತಿ ಪಡೆದರು. ಮಾಹಿತಿಗೆ ಇಂಡೆಕ್ಸ್‌ ತಂತ್ರಾಂಶ: ಹೋಂ ಐಸೋಲೇಷನ್‌ನ ಬಗ್ಗೆ ಆಯುಕ್ತರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಮನೆಯಲ್ಲಿ ಚಿಕಿತ್ಸೆ ಪಡೆಯುವವರರ ಬಗ್ಗೆ ಇಂಡೆಕ್ಸ್‌ ಎಂಬ ತಂತ್ರಾಂಶದಲ್ಲಿ ಮಾಹಿತಿಸಂಗ್ರಹಿಸಲಿದ್ದು, ಅದಕ್ಕಾಗಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ಸಿಬ್ಬಂದಿ ನಿಯೋಜಿಸಲಾಗಿದೆ. ಇವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಜತೆ ದೂರವಾಣಿಮೂಲಕ ಸಂಪರ್ಕಿಸಿ,ಮನೆ ವಾತಾವರಣ ಸೇರಿದಂತೆ ಪ್ರತ್ಯೇಕ ವ್ಯವಸ್ಥೆ ಇದೆಯೇ ಎಂದು ಪರಿಶೀಲಿಸಿ ಹೋಂ ಕ್ವಾರಂಟೈನ್‌ಗೆ ಅವಕಾಶ ನೀಡುವರು ಎಂದು ತಿಳಿಸಿದರು.

ಈ ವೇಳೆಪೂರ್ವ ವಲಯ ಜಂಟಿ ಆಯುಕ್ತೆಕೆ.ಆರ್‌. ಪಲ್ಲವಿ, ಆರೋಗ್ಯಾಧಿಕಾರಿ ಸಿದ್ದಪ್ಪಾಜಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ತಪಾಸಣೆ: ದೊಮ್ಮಲೂರು ವಾರ್ಡ್‌ನ ನಗರ ಪ್ರಾಥಮಿಕ್ಕೆ ಆರೋಗ್ಯ ಕೇಂದ್ರಕ್ಕೆ ಆಯುಕ್ತರು ಭೇಟಿ ನೀಡಿ, ನಿತ್ಯಕೊರೊನಾ ಪರೀಕ್ಷೆ ಮತ್ತು ನಿರ್ವಹಣೆಕುರಿತು ಪರಿಶೀಲನೆ ನಡೆಸಿದರು. ಪ್ರತಿನಿತ್ಯ 30- 40 ಜನರ ಸೋಂಕು ಪರೀಕ್ಷೆ ನಡೆಯುತ್ತಿದ್ದು, ರಜಾ ದಿನದಲ್ಲಿ 20- 25 ಜನ ಸೋಂಕು ಪರೀಕ್ಷೆಗೆ ಒಳಗಾಗುತ್ತಿದ್ದಾರೆ ಎಂದು ಸಿಬ್ಬಂದಿ ಮಾಹಿತಿ ನೀಡಿದರು. ಪರೀಕ್ಷೆಗಾಗಿ ಆಗಮಿಸಿದ್ದ ನಾಗರಿಕರ ಜತೆ ಆಯುಕ್ತರು ಮಾತುಕತೆ ನಡೆಸಿದರು.

ಹೋಂಐಸೋಲೇಷನ್‌ ನಲ್ಲಿಇರುವವರಿಂದ ಚಿಕಿತ್ಸೆ ಕುರಿತು ಪಾಲಿಕೆ ಸೇವೆಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಆಯುಕ್ತರು ಸೂಚಿಸಿದ್ದಾರೆ. ಪಾಲಿಕೆಯಕಾರ್ಯವೈಖರಿ ತೃಪ್ತಿದಾಯಕವಾಗಿದೆಯೇ ಅಥವಾ ಸರಿಪಡಿಸಿಕೊಳ್ಳಬೇಕಾದ ಅಂಶಗಳ ಬಗ್ಗೆ ಅಭಿಪ್ರಾಯ ಸಂಗ್ರಹ ಅಗತ್ಯವಾಗಿದೆ.ಈ ಕುರಿತು ಶೀಘ್ರ ಅಭಿಪ್ರಾಯ ಸಂಗ್ರಹ ಪ್ರಶ್ನೆ ಮಾದರಿ ಸಿದ್ಧಪಡಿಸಿಕೊಳ್ಳಲಾಗುವುದು. -ಕೆ.ಆರ್‌.ಪಲ್ಲವಿ, ಬಿಬಿಎಂಪಿ ಪೂರ್ವ ವಲಯ ಜಂಟಿ ಆಯುಕ್ತೆ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.