ನವೆಂಬರ್‌ನಿಂದ ಮೇಳಗಳ ತಿರುಗಾಟ?- ಮೇಳಗಳ ಆರ್ಥಿಕ ಸಂಕಷ್ಟ ನೀಗಿಸಲು ಸಹಕಾರ: ಸಚಿವರ ಭರವಸೆ


Team Udayavani, Oct 7, 2020, 7:15 AM IST

ನವೆಂಬರ್‌ನಿಂದ ಮೇಳಗಳ ತಿರುಗಾಟ?- ಮೇಳಗಳ ಆರ್ಥಿಕ ಸಂಕಷ್ಟ ನೀಗಿಸಲು ಸಹಕಾರ: ಸಚಿವರ ಭರವಸೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು: ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿರುವ ಯಕ್ಷಗಾನ ಮೇಳಗಳ ಈ ಬಾರಿಯ ತಿರುಗಾಟಕ್ಕೆ ಸರಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಧಾರ್ಮಿಕ ದತ್ತಿ ಇಲಾಖೆ, ಮೀನುಗಾರಿಕೆ ಮತ್ತು ಬಂದರು ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯಕ್ಷಗಾನ ಮೇಳಗಳ ಯಜಮಾನರು, ಸಂಚಾಲಕರು ಮತ್ತು ಕಲಾವಿದರ ಸಭೆಯಲ್ಲಿ ಅವರು ಮಾತನಾಡಿದರು.

ನವೆಂಬರ್‌ ಅಂತ್ಯಕ್ಕೆ/ ನಿಗದಿತ ದಿನಾಂಕಗಳಲ್ಲಿ ತಿರುಗಾಟ ಆರಂಭಿಸಲು ಪೂರಕ ಸಿದ್ಧತೆ ಮಾಡಿಕೊಳ್ಳಬೇಕು.

ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಿಂದ ಯಾವುದೇ ಮೇಳಗಳು ತಿರುಗಾಟ ನಿಲ್ಲಿಸುವಂತಾಗಬಾರದು. ಯಾವೊಬ್ಬ ಕಲಾವಿದನ ಉದ್ಯೋಗಕ್ಕೂ ತೊಂದರೆಯಾಗಬಾರದು.

ಮೇಳಗಳ ಯಜಮಾನರು ಮೇಳಗಳ ತಿರುಗಾಟವನ್ನು ನಿಲ್ಲಿಸುವ, ಮೇಳವನ್ನೇ ನಿಲ್ಲಿಸುವ ಬಗ್ಗೆ ಯೋಚಿಸದಿರಿ. ದೇವಸ್ಥಾನಗಳ ಮೂಲಕ ಆರ್ಥಿಕ ಸಹಕಾರ ಒದಗಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು.

ಈ ಬಗ್ಗೆ ಶಾಸಕರ ಜತೆಗೂ ಸಮಾಲೋಚನೆ ನಡೆಸಲಾಗುವುದು. ಅಲ್ಲದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಕ್ಷಗಾನ ಅಕಾಡೆಮಿಗಳ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದಲೂ ನೆರವು ಒದಗಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ಹೇಳಿದರು.

ಪರ್ಯಾಯ ಅವಕಾಶ
ಒಂದು ವೇಳೆ ತೀರಾ ಅನಿವಾರ್ಯವಾಗಿ ಯಾವುದಾದರೂ ಮೇಳವನ್ನು ನಿಲ್ಲಿಸಿದರೆ ಅದರಲ್ಲಿರುವ ಕಲಾವಿದರ ಹಿತದೃಷ್ಟಿಯಿಂದ ಬೇರೊಂದು ಹೊಸ ಮೇಳವನ್ನು ಆರಂಭಿಸಲು ಕೂಡ ಸಹಕಾರ ನೀಡಲಾಗುವುದು. ಕೆಲವು ದೇವಸ್ಥಾನಗಳಲ್ಲಿ ಮೇಳ ನಡೆಸಬಹುದಾದ ಸಾಮರ್ಥ್ಯ ಇದೆ. ಅಂತಹ ಕೆಲವು ದೇವಸ್ಥಾನಗಳ ಸಹಕಾರವನ್ನು ಈಗಾಗಲೇ ಕೇಳಿದ್ದೇವೆ. ಕೆಲವು ದಿನಗಳ ಅನಂತರ ಮತ್ತೂಮ್ಮೆ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಸ್ಯಾನಿಟೈಸರ್‌ ವ್ಯವಸ್ಥೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಬಯಲು ಪ್ರದೇಶಗಳಲ್ಲಿ 200 ಜನ ಮೀರದಂತೆ ಪ್ರದರ್ಶನ ಮಾಡಬಹುದು ಎಂದು ತಿಳಿಸಿದರು.  ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ವೆಂಕಟೇಶ್‌ ಉಪಸ್ಥಿತರಿದ್ದರು.

ದಾಖಲೀಕರಣಕ್ಕೆ ಕ್ರಮ
ಎಲ್ಲಾ ಯಕ್ಷಗಾನ ಕಲಾವಿದರು ಮತ್ತು ಮೇಳಗಳ ದಾಖಲೀಕರಣವಾಗಬೇಕು ಎಂದು ಮೇಳಗಳ ಯಜಮಾನರು, ಕಲಾವಿದರು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಸರಕಾರ ವಾರದೊಳಗೆ ಕ್ರಮ ಕೈಗೊಳ್ಳಲಿದೆ ಎಂದರು.

ಎಲ್ಲಾ ಕಲಾವಿದರಿಗೆ ಕೋವಿಡ್ 19 ಪರೀಕ್ಷೆ
ಎಲ್ಲಾ ಯಕ್ಷಗಾನ ಕಲಾವಿದರ ಕೋವಿಡ್ 19 ಸೋಂಕು ತಪಾಸಣೆಯನ್ನು ಸರಕಾರದ ವತಿಯಿಂದಲೇ ನಡೆಸಲಾಗುವುದು. ಕೋವಿಡ್ 19 ಸೋಂಕು ಹಿನ್ನೆಲೆಯಲ್ಲಿ ಈ ಬಾರಿ 60 ವರ್ಷ ಮೇಲ್ಪಟ್ಟ ಹಿರಿಯ ಕಲಾವಿದರು ಅವರು ಬಯಸಿದರೆ ಮನೆಯಲ್ಲಿಯೇ ಉಳಿದುಕೊಳ್ಳಬಹುದು. ಅಂತಹ ಕಲಾವಿದರಿಗೆ ಸರಕಾರದಿಂದಲೇ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.