ಬಿಜೆಪಿ ಮುಖಂಡ ಶುಕ್ಲಾ ಹತ್ಯೆ: ಟಿಎಂಸಿ, ಬಿಜೆಪಿ ನಡುವೆ ವಾಕ್ಸಮರ
ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೊಪ್ಪಿಸಿದೆ.
Team Udayavani, Oct 6, 2020, 2:41 PM IST
ಕೋಲ್ಕತಾ: ಪಶ್ಚಿಮ ಬಂಗಾಳದ “ಉತ್ತರ 24 ಪರಗಣಾಸ್’ ಜಿಲ್ಲೆಯ ತಿತಾಗಢ ಪಟ್ಟಣದಲ್ಲಿ ಭಾನುವಾರ ರಾತ್ರಿ ನಡೆದ ಬಿಜೆಪಿ ನಾಯಕ ಮನೀಶ್ ಶುಕ್ಲಾರವರ
ಹತ್ಯೆ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ವಿಪಕ್ಷ ಬಿಜೆಪಿ ನಡುವಿನ ಬಹಿರಂಗ ವಾಕ್ಸಮರಕ್ಕೆ ವೇದಿಕೆಯಾಗಿದೆ.
ಭಾನುವಾರ ರಾತ್ರಿ 7:30ರ ಸುಮಾರಿಗೆ, ತಿತಾಗಢ ಪೊಲೀಸ್ ಠಾಣೆ ಸಮೀಪ ಬೈಕ್ನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಶುಕ್ಲಾ ಮೇಲೆ ಗುಂಡು ಹಾರಿಸಿ ಹತ್ಯೆ
ಗೈದಿದ್ದರು. ಶುಕ್ಲಾ ತಿತಾಗಢ ನಗರಸಭೆಯ ಬಿಜೆಪಿ ಸದಸ್ಯರೂ ಆಗಿದ್ದರು.
ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೊಪ್ಪಿಸಿದೆ. ಮತ್ತೂಂದೆಡೆ, ಹತ್ಯೆಯನ್ನು
ತೀವ್ರವಾಗಿ ಖಂಡಿಸಿರುವ ಬಿಜೆಪಿ ಕಾರ್ಯಕರ್ತರು, ಜಿಲ್ಲೆಯ ಹಲವೆಡೆ ರಸ್ತೆ ತಡೆ ನಡೆಸಿ, ಟೈರ್ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರ ಬೇಸರ: ಶುಕ್ಲಾ ಹತ್ಯೆ ಬೆನ್ನಲ್ಲಿ ಭುಗಿಲೆದ್ದಿರುವ ಆಕ್ರೋಶದ ಸನ್ನಿವೇಶದ ಬಗ್ಗೆ ಮಾತನಾಡುವಂತೆ ಮಮತಾ ಬ್ಯಾನರ್ಜಿಯವರ ಮೊಬೈಲ್ಗೆ
ತಾವು ಕಳುಹಿಸಿದ ಸಂದೇಶಕ್ಕೆ ಪ್ರತಿಯಾಗಿ ಯಾವುದೇ ಉತ್ತರ ನೀಡಿಲ್ಲ ಎಂದು ರಾಜ್ಯಪಾಲ ಜಗದೀಪ್ ಧನ್ ಕರ್ ಆರೋಪಿಸಿದ್ದಾರೆ. ಅಲ್ಲದೆ, ತಾವು ಕಳುಹಿಸಿದ್ದ ಸಮನ್ಸ್ಗೂ ಸರ್ಕಾರದಿಂದ ಉತ್ತರ ಬಂದಿಲ್ಲ ಎಂದು ಬೇಸರಿಸಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂಡೋಪಾಧ್ಯಾಯ, ರಾಜ್ಯಪಾಲರಿಗೆ ಸರ್ಕಾರದ ವಿವರಣೆ ಸಲ್ಲಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ