ರಾಜ್ಯದಲ್ಲಿ ರಸಗೊಬ್ಬರ ಕೊರತೆಯಿಲ್ಲ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
Team Udayavani, Oct 8, 2020, 11:37 AM IST
ಮಂಡ್ಯ: ರೈತರಿಗೆ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ಪೂರೈಸಲಾಗುತ್ತಿದ್ದು ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ಮದ್ದೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಸಗೊಬ್ಬರ ತೊಂದರೆ ಇಲ್ಲ. ಈ ವಿಚಾರವಾಗಿ ಕೃಷಿ ಸಚಿವ ಬಿಸಿ ಪಾಟೀಲ್ ಗೆ ತಿಳಿಸಿದ್ದೇನೆ. ಎಲ್ಲ ಗೋಡನ್ ಗಳಲ್ಲಿ ರಸಗೊಬ್ಬರ ಸಂಗ್ರಹವಿದೆ. ಆದರೂ ಬ್ಲಾಕ್ ಮಾಡ್ತಿದ್ದಾರೆ. ಆದ್ದರಿಂದ ದಾಳಿ ಮಾಡಿ ಎಂದು ಕೃ಼ಷಿ ಸಚಿವರಿಗೆ ತಿಳಿಸಿದ್ದೇನೆ ಎಂದರು.
ಕರ್ನಾಟಕದಲ್ಲಿ ಸುಮಾರು 148 ಲೈಸನ್ಸ್ ರದ್ದು ಮಾಡಿದ್ದೇವೆ. ಗೋಡನ್ ಫುಲ್ ಇದ್ರೂ, ಹೊರಗಡೆ ನೋ ಸ್ಟಾಕ್ ಬೋರ್ಡ್ ಹಾಕುತ್ತಿದ್ದಾರೆ. ಅಧಿಕಾರಿಗಳು ಮತ್ತು ಮಾಲೀಕರು ಸೇರಿ ಈ ಅಕ್ರಮ ಮಾಡಿದ್ದಾರೆ. ಮೊನ್ನೆ ಎಲ್ಲಾ ಕ್ಲೀಯರ್ ಮಾಡಲಾಗಿದೆ ಎಂದರು.
ಇದನ್ನೂ ಓದಿ:ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ: ರೈತ ಸಂಪರ್ಕ ಕೇಂದ್ರದೆದುರು ಕಲ್ಲು ಹೊತ್ತು ಪ್ರತಿಭಟನೆ
ರಾಜ್ಯ ಸರ್ಕಾರ ಮಾಸ್ಕ್ ದಂಡದ ಧರ ಇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜನರ ನೀರಿಕ್ಷೇಗೆ ಅನುಗುಣವಾಗಿ ಆಡಳಿತ ಮಾಡಲಾಗುತ್ತಿದೆ. ನಾವೇ ನೆಡೆದಿದ್ದೇ ದಾರಿ ಅಂತ ನಮ್ಮ ಸರ್ಕಾರ ಆಲೋಚನೆ ಮಾಡಿಲ್ಲ. ಪ್ರಾಥಮಿಕ ಹಂತದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮಾಡಲು ಸ್ವಲ್ಪ ಪ್ರಬಲವಾದ ಆಸ್ತ್ರ ಪ್ರಯೋಗ ಮಾಡಲು ಆಲೋಚನೆ ಮಾಡಲಾಗಿತ್ತು. ಜನರು ಹೇಳಿದ್ರು, ಇದು ಜಾಸ್ತಿ ಆಯ್ತು ಕಡಿಮೆ ಮಾಡಿ ಅಂತಾ. ಅದಕ್ಕೆ ಜನರ ಆದೇಶದ ಪ್ರಕಾರವೇ ಕೆಲಸ ಮಾಡಿದ್ದೇವೆ ಎಂದು ಹೇಳಿದರು.
ರಾಜರಾಜೇಶ್ವರಿ ನಗರ ಉಪಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಾತನಾಡಿ, ಇಬ್ಬರ ಹೆಸರನ್ನ ಆಯ್ಕೆ ಮಾಡಿ ಹೈಕಮಾಂಡ್ ಗೆ ಕಳಿಸಿದ್ದೇವೆ. ಕೇಂದ್ರದವರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
NDA ಕೂಟದಿಂದ ಜೆಡಿಎಸ್ ಹೊರ ಹಾಕಿ: ಶಿವರಾಮೇ ಗೌಡ
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
MUST WATCH
ಹೊಸ ಸೇರ್ಪಡೆ
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ