ಸೀಟ್‌ ಬ್ಲಾಕಿಂಗ್‌ ದಂಧೆಯ ಕಡಿವಾಣಕ್ಕೆ ಅನುಷ್ಠಾನ ಅಚ್ಚುಕಟ್ಟಾಗಲಿ


Team Udayavani, Oct 8, 2020, 3:41 PM IST

ಸೀಟ್‌ ಬ್ಲಾಕಿಂಗ್‌ ದಂಧೆಯ ಕಡಿವಾಣಕ್ಕೆ ಅನುಷ್ಠಾನ ಅಚ್ಚುಕಟ್ಟಾಗಲಿ

ವೃತ್ತಿಪರ ಶಿಕ್ಷಣ ಸಂಸ್ಥೆ ಅಥವಾ ಎಂಜಿನಿಯರಿಂಗ್‌ ಕಾಲೇಜುಗಳು ಹಾಗೂ ವಿದ್ಯಾರ್ಥಿಗಳಿಂದ ನಡೆಯುತ್ತಿರುವ ಸೀಟ್‌ ಬ್ಲಾಕಿಂಗ್‌ ದಂಧೆಗೆ ಕಡಿವಾಣ ಹಾಕಲು ರಾಜ್ಯ ಸರಕಾರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ)-2006ರ ಕಾಯ್ದೆಗೆ ಈಗ ತಿದ್ದುಪಡಿ ತಂದಿದೆ. ತಿದ್ದುಪಡಿ ಕಾಯ್ದೆ-2020 ರಾಜ್ಯಪತ್ರವೂ ಪ್ರಕಟವಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ರ್‍ಯಾಂಕಿಂಗ್‌ ಮೂಲಕ ಸರಕಾರಿ ಕೋಟಾದಡಿ ಸೀಟು ಪಡೆದ ವಿದ್ಯಾರ್ಥಿಯು ಪ್ರಾಧಿಕಾರ ನಿಗದಿಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧಪಟ್ಟ ಕಾಲೇಜಿಗೆ ನಿರ್ದಿಷ್ಟ ದಿನಾಂಕದೊಳಗೆ ದಾಖಲಾತಿ ಪಡೆಯಬೇಕು. ಒಂದೊಮ್ಮೆ ಕಾಲೇಜಿಗೆ ದಾಖಲಾತಿ ಪಡೆಯದೇ ಇದ್ದಲ್ಲಿ ಸೀಟು ಹಂಚಿಕೆಯ ಸಾಮಾನ್ಯ ಸುತ್ತು ಮುಗಿದ ಕೂಡಲೇ ಸೀಟನ್ನು ಪ್ರಾಧಿಕಾರಕ್ಕೆ ಹಿಂದಿರುಗಿಸಬೇಕು. ಇಲ್ಲವಾದರೆ ಪ್ರಾಧಿಕಾರದ

ಕಾರ್ಯಕಾರಿ ನಿರ್ದೇಶಕರು ಆ ಸೀಟನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಾರೆ. ಅಲ್ಲದೆ, ನಿರ್ದಿಷ್ಟ ಸಮಯದೊಳಗೆ ಕಾಲೇಜಿಗೂ ಸೇರದೆ, ಸೀಟನ್ನು ಪ್ರಾಧಿಕಾರಕ್ಕೆ ವಾಪಸ್‌ ಮಾಡದೇ ಇದ್ದರೆ, ಅಭ್ಯರ್ಥಿಯು ಶುಲ್ಕದ 5 ಪಟ್ಟು ದಂಡ ಪಾವತಿಸಬೇಕು.

ಅಂದರೆ, ಸರಕಾರಿ ಕೋಟಾದ ಎಂಜಿನಿಯರಿಂಗ್‌ ಸೀಟಿಗೆ 58,000 ರೂ. ಶುಲ್ಕವಿದ್ದರೆ, 2.90 ಲಕ್ಷ ರೂ. ದಂಡ ಪಾವತಿಸಬೇಕಾಗುತ್ತದೆ. ಹಾಗೆಯೇ ಸೀಟು ಪಡೆದ ಅಭ್ಯರ್ಥಿಯು ಸಂಬಂಧಪಟ್ಟ ಕಾಲೇಜಿಗೆ ದಾಖಲಾಗದೇ ಇದ್ದಾಗ, ಕಾಲೇಜಿನ ಆಡಳಿತ ಮಂಡಳಿ ಅಥವಾ ಶಿಕ್ಷಣ ಸಂಸ್ಥೆ ಆ ಮಾಹಿತಿಯನ್ನು ಕ್ಲಪ್ತ ಸಮಯಕ್ಕೆ ಪ್ರಾಧಿಕಾರಕ್ಕೆ ನೀಡಬೇಕು. ಒಂದೊಮ್ಮೆ ಕಾಲೇಜಿನ ಆಡಳಿತ ಮಂಡಳಿ ಅಥವಾ ಶಿಕ್ಷಣ ಸಂಸ್ಥೆ ಅಭ್ಯರ್ಥಿ ಸಂಬಂಧಪಟ್ಟ ಕೋರ್ಸ್‌ಗೆ ಸೇರಿಕೊಳ್ಳದೇ ಇರುವ ಮಾಹಿತಿ ಪ್ರಾಧಿಕಾರಕ್ಕೆ ನೀಡದೇ, ಸೀಟು ಹಾಗೆಯೇ ಉಳಿದರೆ, ಆ ಸಂಸ್ಥೆಯೂ ವಿದ್ಯಾರ್ಥಿ ಶುಲ್ಕದ 5 ಪಟ್ಟು ದಂಡ ಪಾವತಿಸಬೇಕು. ಅಂದರೆ, 58 ಸಾವಿರ ರೂ. ಶುಲ್ಕವಿದ್ದರೆ, 2.90 ಲಕ್ಷ ದಂಡ ಪಾವತಿಸಬೇಕು ಎಂದು ತಿದ್ದುಪಡಿ ಕಾಯ್ದೆಯಲ್ಲಿ ಸ್ಪಷ್ಟವಾಗಿಸಿದೆ.

ಖಾಸಗಿ ವೃತ್ತಿಪರ ಅಥವಾ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆಯುತ್ತಿರುವ ಸೀಟ್‌ ಬ್ಲಾಕಿಂಗ್‌ ದಂಧೆಗೆ ಕಡಿವಾಣ ಹಾಕಲು ಸರಕಾರ ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಇದರ ಅನುಷ್ಠಾನವೂ ಅಷ್ಟೇ ಮುಖ್ಯವಾಗಿದೆ. ಸೀಟು ಹಂಚಿಕೆಯ ಅನಂತರ ನಿರಂತವಾಗಿ ಮೇಲ್ವಿಚಾರಣೆ ಮಾಡುವ ಕಾರ್ಯವೂ

ಆಗಬೇಕು. ಸರಕಾರಿ ಕೋಟಾದಡಿ ಸೀಟು ಪಡೆದು, ಆ ಸೀಟಿಗೆ ಅಭ್ಯರ್ಥಿ ದಾಖಲಾಗದೇ ಇದ್ದರೂ, ದಾಖಲಾಗಿದ್ದಾರೆ ಎಂದು ಸುಳ್ಳು ಮಾಹಿತಿ ನೀಡಿ, ಅನಂತರ ಅದನ್ನು ಮ್ಯಾನೇಜ್‌ಮೆಂಟ್‌ ಕೋಟಾದ ಸೀಟುಗಳಾಗಿ ಪರಿವರ್ತಿಸಿ, ದುಬಾರಿ ಶುಲ್ಕದಡಿ ಬೇರೆ ಅಭ್ಯರ್ಥಿಗಳನ್ನು ದಾಖಲಿಸಿಕೊಳ್ಳುವ ಪ್ರವೃತ್ತಿ ಕಳೆದ ಅನೇಕ ವರ್ಷಗಳಿಂದ ನಡೆಯುತ್ತಲೇ ಇದೆ. ಇದಕ್ಕೆ ಸಂಪೂರ್ಣ ಕಡಿವಾಣ ಬೀಳಬೇಕು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರಕಾರಿ ಕೋಟಾದಡಿ ಸೀಟು ಸಿಗುವಂತೆ ಮಾಡಬೇಕು. ಅನುಷ್ಠಾನದಲ್ಲಿ ಲೋಪವಾದರೆ, ಸೀಟ್‌ ಬ್ಲಾಕಿಂಗ್‌ ದಂಧೆಗೆ ಕಡಿವಾಣ ಹಾಕುವುದು ಕಷ್ಟ. ಇದಕ್ಕಾಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳು ಪರ್ಯಾಯ ಮಾರ್ಗ ಸೃಷ್ಟಿಸದಂತೆಯೂ ಎಚ್ಚರ ವಹಿಸಿಬೇಕು. ಇನ್ನು ವೈದ್ಯಕೀಯ ಸೀಟಿನ ವಿಚಾರದಲ್ಲೂ ಬ್ಲಾಕಿಂಗ್‌ ದಂಧೆ ಜೋರಾಗಿದೆ. ಕಾರಣ, ವೈದ್ಯಕೀಯ ಸೀಟುಗಳಿಗೆ ಬೇಡಿಕೆ ಹೆಚ್ಚಿದೆ. ಸೀಟಿನ ಪ್ರಮಾಣ ಕಡಿಮೆ ಇರುವುದರಿಂದ  ಸೀಟ್‌ ಬ್ಲಾಕಿಂಗ್‌ ಮೂಲಕ ಇನ್ನಷ್ಟು ಬೇಡಿಕೆ ಹೆಚ್ಚಿಸಿ, ದುಬಾರಿ ಶುಲ್ಕಕ್ಕೆ ಸೀಟು ಮಾರಾಟವಾಗುತ್ತದೆ. ಇದಕ್ಕೂ ಸರಕಾರ ಕಡಿವಾಣ ಹಾಕಲೇಬೇಕು. ತಿದ್ದುಪಡಿ ಕಾಯ್ದೆಯಲ್ಲಿ ದುಬಾರಿ ದಂಡ ವಿಧಿಸಲು ನಿಯಮ ರೂಪಿಸಿರುವುದು ಸ್ವಾಗತಾರ್ಹವಾಗಿದೆ

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.