ತುಡವಿ ಜೇನು ಹುಳುವಿಗೆ ಶೀಘ್ರ ರಾಜ್ಯಕೀಟ ಕಿರೀಟ!

 ವನ್ಯಜೀವಿ ಮಂಡಳಿ ಮುಂದಿನ ಸಭೆಯಲ್ಲಿ ಘೋಷಣೆ ಸಾಧ್ಯತೆ

Team Udayavani, Oct 9, 2020, 1:33 AM IST

ತುಡವಿ ಜೇನು ಹುಳುವಿಗೆ ಶೀಘ್ರ ರಾಜ್ಯಕೀಟ ಕಿರೀಟ!

ಕಾರ್ಕಳ: ತುಡವಿ (ತೊಡ್ವೆ) ಜೇನು ನೊಣಕ್ಕೆ ರಾಜ್ಯ ಕೀಟ ಪಟ್ಟ ಸಿಗುವ ದಿನಗಳು ಹತ್ತಿರದಲ್ಲಿವೆ. ವನ್ಯಜೀವಿ ಮಂಡಳಿ ಈ ಕುರಿತು ಕ್ರಮ ಕೈಗೊಂಡಿದ್ದು, ಮುಂದಿನ ಮಂಡಳಿ ಸಭೆಯಲ್ಲಿ ಇದು ಘೋಷಣೆಯಾಗುವ ಸಾಧ್ಯತೆ ಇದೆ.

ವನ್ಯಜೀವಿ ಮಂಡಳಿ ಈ ಬಗ್ಗೆ ಸರಕಾರಕ್ಕೆ ಶಿಫಾರಸು ಮಾಡಿತ್ತು. ಅದಕ್ಕೆ ಪೂರಕ ವಾಗಿ ಮಂಡಳಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಮುಂದಿನ ಸಭೆಯಲ್ಲಿ ಘೋಷಿಸುವ ಭರವಸೆ ನೀಡಿದ್ದು, ಅರಣ್ಯ ಇಲಾಖೆ ಮುಖ್ಯಸ್ಥರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಿದ್ದರು.

ವನ್ಯಜೀವಿ ಕಾಯ್ದೆಯಡಿಯಲ್ಲಿ ಈಗಾಗಲೇ ಕಮಲ ಹೂವನ್ನು ರಾಜ್ಯ ಹೂವು, ಆನೆಯನ್ನು ರಾಜ್ಯ ಪ್ರಾಣಿ, ಶ್ರೀಗಂಧವನ್ನು ರಾಜ್ಯ ವೃಕ್ಷ, ನೀಲಕಂಠವನ್ನು ರಾಜ್ಯ ಪಕ್ಷಿ, ಸದರ್ನ್ ಬರ್ಡ್‌ ವಿಂಗ್‌ ಅನ್ನು ರಾಜ್ಯ ಪಾತರಗಿತ್ತಿ ಎಂದು ಘೋಷಿಸಿದೆ. ವನ್ಯಜೀವಿ ಕಾಯ್ದೆಯನ್ವಯ ನೈಸರ್ಗಿಕ ಜೇನು ಪ್ರಭೇದ ತುಡವಿ ಜೇನು ಹುಳ ಇದರ ಸಾಲಿಗೆ ಸೇರುವುದು ನಿಶ್ಚಿತವಾಗಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಾಣಿಸಿಕೊಳ್ಳುವ ನೊಣವಿದು.

ಸಂತತಿ ಅಳಿವಿನಲ್ಲಿ ಕಾಡುಗಳಲ್ಲಿ ಇತ್ತೀಚೆಗೆ ನೈಸರ್ಗಿಕ
ಜೇನು ಸಂತತಿ ಕಡಿಮೆಯಾಗಿದೆ. ಜೀವ ವೈವಿಧ್ಯದ ಮುಖ್ಯ ಕೊಂಡಿಯಾದ ಜೇನುಗಳು ಪರಕೀಯ ಪರಾಗಸ್ಪರ್ಶಕ್ಕೆ ಪೂರಕ. ಆದರೆ ಈ ಕ್ರಿಯೆ ಕ್ಷೀಣ ಗೊಂಡಿರುವುದರಿಂದ ಅರಣ್ಯ ವೃದ್ಧಿಗೆ ಧಕ್ಕೆಯಾಗಿದೆ. ಜತೆಗೆ ಘಟ್ಟ ಪ್ರದೇಶದ ಕೃಷಿ ಫ‌ಸಲು-ತೋಟಗಾರಿಕೆ ಬೆಳೆಗಳ ಇಳುವರಿ ಮತ್ತು ಗುಣಮಟ್ಟ ಕ್ಷೀಣಿಸಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ ವರದಿ ನೀಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ, ಅಡವಿ ಜೇನು ಸಂರಕ್ಷಣೆ ದೃಷ್ಟಿಯಿಂದ ತುಡವಿ ಜೇನು ರಾಜ್ಯ ಕೀಟವಾಗಿ ಘೊಷಣೆಯಾಗುವುದರ ಜತೆಗೆ ಅರಣ್ಯ ಇಲಾಖೆ ಮೂಲಕ ಸಂರಕ್ಷಣೆಯ ಹಲವು ಯೋಜನೆಗಳು ಕಾರ್ಯಗತಕ್ಕೆ ಬರಲಿವೆ.

ಜೀವನಾಧಾರ
ಉತ್ತರಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಾಮರಾಜನಗರ ಜಿÇÉೆಗಳಲ್ಲಿ ಕೂಡ ಜೇನು ಕೃಷಿಕರಿದ್ದಾರೆ. ಜೇನು ಹುಳ ಪರಿಸರ ಆರೋಗ್ಯ ಸೂಚಕ ಎಂದೇ ಗುರುತಿಸಿಕೊಂಡಿದೆ. ಪಾರಂ ಪರಿಕ, ಆಯುರ್ವೇದ ಔಷಧದಲ್ಲೂ ಬಳಕೆಯಾಗುತ್ತದೆ. ಜೇನು ಕೃಷಿ ಲಾಭದಾಯಕವಾಗಿದ್ದು, ಹಲವರಿಗೆ ಜೀವನಾಧಾರವೂ ಆಗಿದೆ.

ಜೇನುನೊಣ ವೃದ್ಧಿಗೆ ಕ್ರಮ
ಪಶ್ಚಿಮ ಘಟ್ಟದಲ್ಲಿ ಹೆಜ್ಜೆàನು, ತುಡವಿ, ಕೋಲೆjàನು, ಮಿಸರು ಮತ್ತು ಇಟಲಿ ದುಂಬಿಗಳ ಸಂಖ್ಯೆ ಕ್ಷೀಣಿಸಿದೆ. ಇವುಗಳ ಸಂರಕ್ಷಣೆ ಮತ್ತು ಸಂತಾನ ಅಭಿವೃದ್ಧಿಗೆ ಬಿಳಿಸಾರೆ, ಬೂರಗ, ಮತ್ತಿ, ಬಸರಿ, ನೀರತ್ತಿ, ತಾರೆ, ಹೆದ್ದಿ, ಸಪ್ತಪರ್ಣಿ, ಬೈನೆ, ಬಣಗಿ ಮರಗಳನ್ನು ಕಡಿಯದಂತೆ ಅರಣ್ಯ ಇಲಾಖೆ ಕೂಡ ಕ್ರಮ ವಹಿಸುತ್ತಿದೆ. ಜೇನುಗಳಿಗೆ ಮಕರಂದ ಒದಗಿಸುವ ತಾರಿ, ಅಣಲೆ, ಅಂಟವಾಳ, ನಂದಿ, ಹುಲಿ ಬಳ್ಳಿ, ಹೊಂಗೆ, ಮಾವು, ಬೂರಗ, ಗುರಿಗೆ, ಪಾತಾಳ ಗರುಡ, ಲಕ್ಕಿ ಮತ್ತು ನೇರಳೆ ಗಿಡ-ಮರಗಳನ್ನು ಸಂರಕ್ಷಿಸಲಾಗುತ್ತಿದೆ. ಕಾಫಿ ಮತ್ತು ಚಹಾ ನಾಡುಗಳಲ್ಲಿ ತೋಟದಲ್ಲಿ ಬಳಸುತ್ತಿರುವ ಕ್ರಿಮಿನಾಶಕಗಳಿಂದ ಜೇನಿಗೆ ಹಾನಿಯಾಗುತ್ತಿದ್ದು, ಬಳಕೆಗೆ ಕಡಿವಾಣ ಹಾಕಲು ಯೋಜನೆ ರೂಪಿಸಲಾಗುತ್ತಿದೆ.

ಸಿಎಂ ಭರವಸೆ
ವನ್ಯಜೀವಿ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳೇ ಇದ್ದಾರೆ. ಅವರ ಗಮನಕ್ಕೆ ಈ ವಿಚಾರವನ್ನು ತಂದಿದ್ದೇವೆ. ಅವರು ಸಮ್ಮತಿ ವ್ಯಕ್ತಪಡಿಸಿದ್ದಲ್ಲದೆ ಮುಂದಿನ ಸಭೆಯಲ್ಲಿ ಘೋಷಿಸುವ ಭರವಸೆ ನೀಡಿದ್ದಾರೆ. ಮಂಡಳಿ ಸಭೆ ದಿನಾಂಕ ಇನ್ನೂ ನಿಗದಿಯಾಗಿಲ್ಲ.
-ಅನಂತ ಹೆಗಡೆ ಅಶೀಸರ, ಅಧ್ಯಕ್ಷ, ಪಶ್ಚಿಮ ಘಟ್ಟ ಕಾರ್ಯಪಡೆ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.