ಬೆಳೆ ಖರೀದಿ ಸಂಸ್ಥೆಗಳ ಮೇಲೆ ಸರ್ಕಾರ ಹಿಡಿತ ಸಾಧಿಸಲಿ


Team Udayavani, Oct 9, 2020, 5:06 PM IST

ಬೆಳೆ ಖರೀದಿ ಸಂಸ್ಥೆಗಳ ಮೇಲೆ ಸರ್ಕಾರ ಹಿಡಿತ ಸಾಧಿಸಲಿ

ಮೂಡಲಗಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಎ.ಪಿ.ಎಂ.ಸಿ ಮತ್ತುಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತ ವರ್ಗಕ್ಕೆ ಪೂರಕವೋ ಅಥವಾ ಮಾರಕವೋ ಎಂಬ ಕುರಿತು ವಿಚಾರ ಸಂಕೀರಣ ಕರ್ನಾಟಕ ನವ ನಿರ್ಮಾನ ಸೇನೆಯ ಮೂಡಲಗಿ ತಾಲೂಕಾ ಘಟಕ ಆಶ್ರಯದಲ್ಲಿ ನಾಗನೂರ ಅರ್ಬನ್‌ ಸೊಸೈಟಿ ಸಭಾ ಭವನದಲ್ಲಿ ಜರುಗಿತು.

ರೈತ ಮುಖಂಡ ಚುನ್ನಪ್ಪ ಪೂಜೇರಿ ಮಾತನಾಡಿ, ರಾಜ್ಯದಲ್ಲಿ ಜಾರಿ ಆಗಲಿರುವ ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯು ಮಧ್ಯವರ್ತಿಗಳಿಂದ ಮುಕ್ತಗೊಳಿಸುವ ನೆಪದಲ್ಲಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಈಗಾಗಲೇ ಕಬ್ಬನ್ನು ಖಾಸಗಿ ಕಂಪನಿಗಳಿಗೆ ನೀಡಿ ರೈತರು ಅನುಭವಿಸುತ್ತಿರುವ ಗೋಳು ಕೇಳುವವರಿಲ್ಲ. ತಿದ್ದುಪಡಿ ಅನಿವಾರ್ಯವೇ ಆಗಿದ್ದರೆ ಬೆಳೆಯನ್ನು ಖರೀದಿಸುವ ಕಾರ್ಪೊರೇಟ್‌ ಕಂಪನಿಗಳ ಮೇಲೆ ಸರ್ಕಾರ ಪೂರ್ಣ ಹಿಡಿತ ಹೊಂದಿರಬೇಕು. ಇನ್ನು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯು ಕೃಷಿ ಕ್ಷೇತ್ರಕ್ಕೆ ಬಹುದೊಡ್ಡ ಹೊಡೆತವೇ ಸರಿ. ಕೃಷಿ ಹೆಸರಿನಲ್ಲಿ ಭೂಮಿಖರೀದಿಸುವ ಕಾರ್ಪೊರೇಟ್‌  ಕಂಪನಿಗಳು ಕಾಲಕ್ರಮೆಣ ಉದ್ಯಮಕ್ಕೆ ಬಳಸಿಕೊಳ್ಳುವ ಮೂಲಕ ಕೃಷಿ ಕ್ಷೇತ್ರಕ್ಕೆ ಕೊಡಲಿ ಪೆಟ್ಟು ನೀಡಲಿವೆ ಎಂದರು. ಮಲ್ಲಪ್ಪ ಮದಗುಣಕಿ ಮಾತನಾಡಿ, ಮಧ್ಯವರ್ತಿಗಳ ಹಾವಳಿಯಿಂದ ಮುಕ್ತರಾಗಿ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಬೆಳೆಯನ್ನು ಮಾರಾಟ ಮಾಡಲು ಸರಕಾರವು ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ಮಾಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತುಕ್ಕಾನಟ್ಟಿ ಬರ್ಡ್ಸ ಸಂಸ್ಥೆಯ ಅಧ್ಯಕ್ಷ ಎ.ಆರ್‌ ಪಾಟೀಲ್‌ ಮಾತನಾಡಿ, ಕರ್ನಾಟಕ ನವನಿರ್ಮಾಣ ಸೇನೆಯ ಪ್ರಯತ್ನ ಶ್ಲಾಘಿಸಿ ಈ ಚರ್ಚೆಯನ್ನು ಸರ್ಕಾರಕ್ಕೆ ಮುಟ್ಟಿಸುವುದಾಗಿ ತಿಳಿಸಿದರು.

ಉಮೇಶ ಬೆಳಕೂಡ, ಬಿಜೆಪಿ ರೈತಮೋರ್ಚಾ ಅರಭಾಂವಿ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀಕಾಂತ ಕೌಜಲಗಿ ಮಾತನಾಡಿದರು.ಈಸಂದರ್ಭದಲ್ಲಿ ಕರ್ನಾಟಕ ನವನಿರ್ಮಾಣ ಸೇನೆಯ ತಾಲೂಕು ಉಪಾಧ್ಯಕ್ಷ ಮಹಾಂತೇಶ ಮುಗಳಖೋಡ, ಪ್ರಧಾನ ಕಾರ್ಯದರ್ಶಿ ಶಾನೂರ ಕುರಬೇಟ, ಬಸವರಾಜ ನಾಯ್ಕ, ಶಿವಾನಂದ ಮೇಣಸಿ, ಸಾಗರ ಢವಳೇಶ್ವರ, ರಾಘವೇಂದ್ರ ಮುನ್ಯಾಳ, ಸುರೇಶ ಪಾಟೀಲ, ರೈತ ಮುಖಂಡ ಶ್ರೀಶೈಲ ಅಂಗಡಿ, ಮಂಜುನಾಥ ಗದಾಡಿ, ಈರಪ್ಪ ಇದ್ದರು.

 

 

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.