ಶೀಘ್ರವೇ ಶಾಲಾರಂಭ ಇಲ್ಲ, ಮಕ್ಕಳ ಆರೋಗ್ಯವೇ ಮುಖ್ಯ: ಸುರೇಶ್ ಕುಮಾರ್


Team Udayavani, Oct 9, 2020, 5:57 PM IST

suresh-kumar

ಬೆಂಗಳೂರು:  ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ. ನಮಗೆ ನಮ್ಮ‌ ಮಕ್ಕಳ  ಆರೋಗ್ಯ,  ಸುರಕ್ಷತೆ ಅತ್ಯಂತ ಮುಖ್ಯ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಯಾರೂ ಯಾವ ಕಾರ್ಯವನ್ನೂ ಪ್ರತಿಷ್ಟೆಗಾಗಿ ಮಾಡುವುದಿಲ್ಲ. ಶಾಲೆಗಳ ಬಗ್ಗೆ ರಾಜ್ಯದ ಎಲ್ಲಾ ಶಾಸಕರುಗಳ ಅಭಿಪ್ರಾಯವನ್ನು ಸುಮಾರು 9 ದಿವಸಗಳ ಹಿಂದೆ ನಾನು ಕೇಳಿದ್ದೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ಹಿಡಿದು, ಅನೇಕ ಸಚಿವರು, ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅದೇ ರೀತಿ ಆರೋಗ್ಯ ಸಚಿವರಾದ ಶ್ರೀರಾಮುಲುರವರೂ ಸಹ  ಈ ಕುರಿತು ಚರ್ಚೆ ನಡೆಸಿ ನನಗೆ ತಮ್ಮ ಅಭಿಪ್ರಾಯ ನೀಡುವುದಾಗಿ ತಿಳಿಸಿದ್ದಾರೆ. ಡಾ. ಸುಧಾಕರ್ ರವರೂ ನನಗೆ ಪತ್ರದ ಮೂಲಕ ಅಭಿಪ್ರಾಯ ತಿಳಿಸಿದ್ದಾರೆ ಎಂದರು.

ಆದರೆ ಅಭಿಪ್ರಾಯಗಳನ್ನು ಕೇಳಿದ ಮಾತ್ರಕ್ಕೆ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ನಿರ್ಧಾರವನ್ನು ಈಗಾಗಲೇ ಕೈಗೊಂಡೇ ಬಿಟ್ಟಿದೆ ಎಂಬರ್ಥದಲ್ಲಿ ವಿಪುಲವಾಗಿ ಚರ್ಚೆ ನಡೆಯುತ್ತಿರುವುದು ದುರದೃಷ್ಟಕರ. ಮತ್ತೆ ಮತ್ತೆ ಇದು ಮರುಕಳಿಸುತ್ತಲೇ ಇದೆ. ನಾನು ಬಾರಿ  ಬಾರಿ ಸ್ಪಷ್ಟೀಕರಣ ಕೊಡುತ್ತಲೇ ಇದ್ದೇನೆ. ಈಗಾಗಲೇ ರಾಜ್ಯದ  ಸನ್ಮಾನ್ಯ ಮುಖ್ಯಮಂತ್ರಿಗಳು ಸಹ  ಈ ಕುರಿತು ಸರ್ಕಾರದ  ನಿಲುವನ್ನು ಬಹಳ ಸ್ಪಷ್ಟವಾಗಿ  ತಿಳಿಸಿದ್ದಾರೆ.

ಇದನ್ನೂ ಓದಿ:  ಸುಭದ್ರವಾಗಿದೆ ಟೀಂ ಇಂಡಿಯಾ ಭವಿಷ್ಯ… ಐಪಿಎಲ್ ನಲ್ಲಿ ಮಿಂಚುತ್ತಿರುವ ಯುವ ಆಟಗಾರರು

ನಾನು ಮತ್ತೊಮ್ಮೆ, ಮಗದೊಮ್ಮೆ ಸ್ಪಷ್ಟಗೊಳಿಸುತ್ತಿದ್ದೇನೆ.‌ ಶಾಲೆ ಪ್ರಾರಂಭ ಮಾಡುವ ಯಾವುದೇ ತರಾತುರಿ ನಮ್ಮ ಮುಂದೆ ಇಲ್ಲ. ಎಲ್ಲ ಮಾಧ್ಯಮಗಳಲ್ಲಿ ನನ್ನದೊಂದು ಮನವಿ.  ಶಿಕ್ಷಣ ಇಲಾಖೆಯ ಮುಂದಿನ ತೀರ್ಮಾನವನ್ನು  ಮಕ್ಕಳ ಹಿತವನ್ನು ಆದ್ಯತೆಯಲ್ಲಿಟ್ಟುಕೊಂಡು ಎಲ್ಲರೊಡನೆ ಸಮಾಲೋಚನೆಯ ನಂತರ ಕೈಗೊಳ್ಳಲಾಗುತ್ತದೆಯೇ  ಹೊರತು ಯಾವುದನ್ನೂ ಧಿಡೀರನೆ ಘೋಷಿಸುವುದಿಲ್ಲ.

ಯಾವುದೇ ಪೋಷಕರ ಮನಸ್ಸಿನಲ್ಲಿ ಈ ಕುರಿತು ಕಿಂಚಿತ್  ಸಹ ಗೊಂದಲ ಬೇಡ ಎಂದು ಕಳಕಳಿಯಿಂದ ತಿಳಿಸುತ್ತಿದ್ದೇನೆ. ನಾನು ಈ ರಾಜ್ಯದ ಶಿಕ್ಷಣ ಸಚಿವ ಮಾತ್ರನಲ್ಲ. ಸುಮಾರು ಒಂದು ಕೋಟಿ ಮಕ್ಕಳ ಪೋಷಕ  ಎಂಬುದರ ಅರಿವು ನನಗಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:  ಮಂಗಳೂರು: ಹೆಬ್ಬಾವು ಕಚ್ಚಿದರೂ ಅಳುಕದೆ ಅದರ ತಲೆಮೇಲೆ ಕಾಲಿಟ್ಟು ಸೆರೆಹಿಡಿದ 10ರ ಪೋರ !

ಟಾಪ್ ನ್ಯೂಸ್

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

bjp-jdsBJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

BJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

bjp-jdsಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

ಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

1-wew-ewe

Gujarat; ಗೇಮಿಂಗ್‌ ಸೆಂಟರ್‌ ಬೆಂಕಿ ದುರಂತ ಸಾವಿನ ಸಂಖ್ಯೆ 33ಕ್ಕೆ : ಹೈಕೋರ್ಟ್‌ ವಿಚಾರಣೆ

1-qwu

Qatar ವಿಮಾನ ಆಗಸ‌ದಲ್ಲಿ ಓಲಾಡಿ 12 ಮಂದಿಗೆ ಗಾಯ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.