ಜಮೀನಿಗೆ ಹಕ್ಕು ಪತ್ರ ನೀಡಲು ಒತ್ತಾಯ
Team Udayavani, Oct 9, 2020, 7:39 PM IST
ಸಾಗರ: ತಾಲೂಕಿನ ಕಸಬಾ ಹೋಬಳಿ ಪಡವಗೋಡು ಗ್ರಾಪಂ ವ್ಯಾಪ್ತಿಯ ಹಳವಗೋಡು ಗ್ರಾಮದ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ತಾಲೂಕು ಯುವ ಒಕ್ಕೂಟದ ವತಿಯಿಂದ ಗುರುವಾರ ತಾವು ಸಾಗುವಳಿ ಮಾಡುತ್ತಿರುವ ಜಮೀನಿಗೆ ಹಕ್ಕುಪತ್ರನೀಡುವಂತೆ ಒತ್ತಾಯಿಸಿ ಶಿವಮೊಗ್ಗದಲ್ಲಿಜಿಲ್ಲಾ ಧಿಕಾರಿಗಳು ಹಾಗೂ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಭಾರಂಗಿ ಹೋಬಳಿ ಹೆಬ್ಬೂರು ಮತ್ತು ಮಲವಳ್ಳಿ, ಬನಗೋಡಿ ಹಾಗೂ ಇಂಡುವಳ್ಳಿ ಗ್ರಾಮದಲ್ಲಿ ನಾವು ವಾಸವಾಗಿದ್ದೆವು.ನಮ್ಮ ಜಮೀನು ಹಿರೇಭಾಸ್ಕರ ನಂತರ ಶರಾವತಿ ವಿದ್ಯುತ್ ಯೋಜನೆಯಿಂದಎರಡು ಬಾರಿ ಮುಳುಗಡೆಯಾಗಿದೆ. ಆ ಸಂದರ್ಭದಲ್ಲಿ ನಮಗೆ ಸಾಗರ ತಾಲೂಕಿನ ಪಡವಗೋಡು ಗ್ರಾಪಂವ್ಯಾಪ್ತಿಯ ಹಳವಗೋಡು ಗ್ರಾಮದಲ್ಲಿಜಮೀನು ಸಾಗುವಳಿ ಮಾಡಿಕೊಳ್ಳಲುಸರ್ಕಾರ ಅವಕಾಶ ಮಾಡಿಕೊಟ್ಟಿತ್ತು ಎಂದು ತಿಳಿಸಲಾಗಿದೆ.
1959ರಿಂದ ನಾವು ಹಳವಗೋಡು ಗ್ರಾಮದ ಸರ್ವೇ ನಂ. 12ರಲ್ಲಿ 19 ಕುಟುಂಬಗಳು ಸುಮಾರು 52 ಎಕರೆಜಮೀನು ಸಾಗುವಳಿ ಮಾಡಿಕೊಂಡು ಜೀವನ ನಡೆಸಿಕೊಂಡು ಬರುತ್ತಿದ್ದೇವೆ.1995-96ರಲ್ಲಿ ನಮ್ಮ ಜಮೀನುಗಳನ್ನು ಅರಣ್ಯಭೂಮಿಯೆಂದು ಪರಿವರ್ತನೆ ಮಾಡಲಾಗಿದೆ. ಇದರಿಂದ ನಾವು ತೀವ್ರ ಸಂಕಷ್ಟಕ್ಕೆ ಒಳಗಾಗುವಂತೆ ಆಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ರಾಜ್ಯಕ್ಕೆ ಬೆಳಕು ನೀಡಲು ನಮ್ಮಮನೆ, ಆಸ್ತಿ, ಜಮೀನು ಕಳೆದುಕೊಂಡು ಒಂದರ್ಥದಲ್ಲಿ ನಮ್ಮ ಬದುಕುನಿರಾಶ್ರಿತವಾಗಿದೆ. ಸರ್ಕಾರವೇ ನಮ್ಮನ್ನು ಮುಳುಗಡೆ ಸಂತ್ರಸ್ತರು ಎಂದುಪುನರ್ವಸತಿ ಕಲ್ಪಿಸಿದ ಜಾಗವನ್ನು ಅರಣ್ಯಇಲಾಖೆಗೆ ಸೇರಿಸಿ ಈತನಕ ಹಕ್ಕುಪತ್ರ ನೀಡದೆ ಇರುವುದು ಬಹಳ ನೋವಿನ ಸಂಗತಿ. ಹಳವಗೋಡು ಗ್ರಾಮದ ಸರ್ವೇ ನಂ. 12ರಲ್ಲಿ ವಾಸವಿರುವ 19 ಕುಟುಂಬಗಳು ಸಾಗುವಳಿ ಮಾಡಿಕೊಂಡು ಬಂದಿರುವ 52 ಎಕರೆಜಮೀನನ್ನು ಕಂದಾಯ ಭೂಮಿಯಾಗಿ ಪರಿವರ್ತಿಸಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಲಾಗಿದೆ. ಪ್ರಗತಿಪರ ಯುವ ಒಕ್ಕೂಟದ ತಾಲೂಕು ಅಧ್ಯಕ್ಷ ರಮೇಶ್ ಈ. ಕೆಳದಿ, ಮುಳುಗಡೆಸಂತ್ರಸ್ತರಾದ ಅಶೋಕ್, ಮಹಾಬಲೇಶ್, ಕನ್ನಪ್ಪ, ಗಿರೀಶ್, ಉಮೇಶ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ