ಶಾಲಾ ತರಗತಿಯಲ್ಲೇ ವಿದ್ಯಾರ್ಥಿಗಳಿಗೆ ಪಾಠ

ಯಡಾಡಿ ಮತ್ಯಾಡಿ: ಶಾಲೆಯಲ್ಲಿ ಪಾಠಕ್ಕೆ ಹೆತ್ತವರ ಆಗ್ರಹ

Team Udayavani, Oct 10, 2020, 2:31 AM IST

ಶಾಲಾ ತರಗತಿಯಲ್ಲೇ ವಿದ್ಯಾರ್ಥಿಗಳಿಗೆ ಪಾಠ

ತೆಕ್ಕಟ್ಟೆ: ಕೊರೊನಾದ ತೀವ್ರತೆ ಏರುಗತಿಯಲ್ಲಿರುವುದರಿಂದ ಶಾಲಾ ರಂಭದ ಬಗ್ಗೆ ರಾಜ್ಯ ಸರಕಾರ ಇನ್ನೂ ನಿರ್ಧಾರ ಪ್ರಕಟಿಸದಿದ್ದರೂ ಇಲ್ಲಿನ ಯಡಾಡಿ, ಮತ್ಯಾಡಿಯ ಖಾಸಗಿ ಶಾಲೆಯೊಂದು ಹೆತ್ತವರ ಆಗ್ರಹದಂತೆ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ತರಗತಿ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ಲಿಟ್ಲ ಸ್ಟಾರ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತರಗತಿ ನಡೆಸುತ್ತಿದ್ದಾರೆಂಬ ಮಾಹಿತಿ ಆಧರಿಸಿ ಮಾಧ್ಯಮದವರು ಶಾಲೆಗೆ ಭೇಟಿ ನೀಡಿದಾಗ ಶಿಕ್ಷಕರು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಗಣಿತ ವಿಷಯಕ್ಕೆ ಸಂಬಂಧಿಸಿ ವಿಶೇಷ ತರಗತಿ ನಡೆಸುತ್ತಿರುವುದು ಕಂಡು ಬಂದಿದೆ. ಈ ಸಂಬಂಧ ಶಾಲಾ ಆಡಳಿತ ಮಂಡಳಿಯವರನ್ನು ವಿಚಾರಿಸಿದಾಗ ಶಾಲೆಯ ತರಗತಿಗಳು ವಾಟ್ಸಾಪ್‌ ಮೂಲಕ ನಡೆಯುತ್ತದೆ. ಆದರೆ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆಯಿಂದ ಗಣಿತ ವಿಷಯಕ್ಕೆ ಸಂಬಂಧಿಸಿ ಸಂದೇಹಗಳನ್ನು ಪರಿಹರಿಸಿಕೊಳ್ಳಲು ಪೋಷಕರ ಒತ್ತಾಯದಿಂದಾಗಿ ತರಗತಿ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಶಿಕ್ಷಣ ಇಲಾಖೆ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಿದರೂ ಮಕ್ಕಳು ಶಾಲೆಯ ಹೊರಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠ ಕೇಳುತ್ತಿದ್ದಾರೆ. ಆದರೆ ತರಗತಿ ಒಳಗಡೆ ಇಷ್ಟರವರೆಗೆ ಎಲ್ಲಿಯೂ ಪಾಠ ನಡೆದಿರಲಿಲ್ಲ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸರಕಾರ ಶಾಲಾ ಆರಂಭಕ್ಕೆ ಹಿಂದೇಟು ಹಾಕುತ್ತಿದೆ. ಈ ಕಾರಣದಿಂದಾಗಿ ಶಿಕ್ಷಣ ಸಂಸ್ಥೆಯ ಈ ನಡೆ ಸಾರ್ವಜನಿಕರಲ್ಲಿ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಮತ್ತು ಪೋಷಕರು ಅನುಮತಿ ನೀಡಿದ್ದಾರಾ? ಎನ್ನುವುದನ್ನು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ.

ನೆಟ್‌ವರ್ಕ್‌ ಸಮಸ್ಯೆ
ಈಗಾಗಲೇ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಆನ್‌ಲೈನ್‌ ತರಗತಿಗಳು ಆರಂಭಗೊಂಡಿವೆ. ಆದರೆ ಗ್ರಾಮೀಣ ಭಾಗದಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆಗಳು ಒಂದೆಡೆಯಾದರೆ ಮತ್ತೂಂದೆಡೆ ಅದಕ್ಕೆ ಪೂರಕವಾದ ಆ್ಯಂಡ್ರಾಯ್ಡ ಮೊಬೈಲ್‌ ಹ್ಯಾಂಡ್‌ಸೆಟ್‌ಗಳ ಸಮಸ್ಯೆ
ಯಿಂದಾಗಿ ಕಲಿಕೆಯ ಹಂಬಲದಲ್ಲಿರುವ ಅದೆಷ್ಟೋ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರಿತಪಿಸುತ್ತಿರು ವುದು ಕೂಡ ವಾಸ್ತವ ಸತ್ಯ.

ಅನುಮತಿ ನೀಡಿಲ್ಲ
ಜಿಲ್ಲೆಯಲ್ಲಿ ಯಾವುದೇ ವಿದ್ಯಾ ಸಂಸ್ಥೆಗಳಿಗೆ ತರಗತಿ ನಡೆಸಲು ಅನುಮತಿ ನೀಡಿರುವುದಿಲ್ಲ, ಅಲ್ಲದೆ ಸರಕಾರದ ಆದೇಶವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೀರಲಿಲ್ಲ. ಈ ಘಟನೆಯ ಬಗ್ಗೆ ವರದಿ ಪಡೆದು, ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆದೇಶಿಸಲಾಗಿದೆ.
-ವೇದಮೂರ್ತಿ ಪ್ರಭಾರ ವಿದ್ಯಾಂಗ
         ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ

ಪೋಷಕರ ಒತ್ತಾಯ
ನಮ್ಮ ಶಾಲೆಯ ತರಗತಿಗಳು ವಾಟ್ಸಾ ಪ್‌ ಮೂಲಕ ನಡೆಯುತ್ತಿದ್ದು, ನೆಟ್‌ವರ್ಕ್‌ ಸಮಸ್ಯೆಇರುವುದರಿಂದ ಗಣಿತ ವಿಷಯದ ಬಗ್ಗ ಸಂದೇಹಗಳನ್ನು ಬಗೆಹರಿಸಲು ಪೋಷಕರ ಒತ್ತಾಯದ ಮೇರೆಗೆ ಒಪ್ಪಿಗೆ ಪತ್ರದೊಂದಿಗೆ ಗುರುವಾರ 12 ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಶಾಲೆ ತನಕ ಬಿಟ್ಟು ಹೋಗಿರುತ್ತಾರೆ.
– ಪಾಂಡುರಂಗ ಗಾಣಿಗ ಆಡಳಿತ ನಿರ್ದೇಶಕರು,
ಲಿಟ್ಲ ಸ್ಟಾರ್‌ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ ಮತ್ಯಾಡಿ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.