ದೇವನಗರಿಯಲ್ಲಿ ತಗ್ಗಿದ ಕೋವಿಡ್ ಸೋಂಕು

ಶೇ.3ರಿಂದ 4ರಷ್ಟಿದ್ದ ಸಾವಿನ ಪ್ರಮಾಣ ಈಗ ಶೇ.1ಕ್ಕೆ ಇಳಿಕೆ

Team Udayavani, Oct 10, 2020, 5:47 PM IST

dg-tdy-2

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯಲ್ಲಿ ಅಬ್ಬರಿಸಿದ್ದ ಕೋವಿಡ್ ಈಗ ಗಣನೀಯವಾಗಿ ಇಳಿಕೆಯಾಗುತ್ತಿದೆ.

ಸೋಂಕು ಕಾಣಿಸಿಕೊಂಡ ಪ್ರಾರಂಭಿಕ ಹಂತದಲ್ಲಿ ಹೊರ ಜಿಲ್ಲೆಯ ಎರಡು ಪ್ರಕರಣ ಸೇರಿದಂತೆ ಮೂರು ಪ್ರಕರಣಗಳಿದ್ದ ದಾವಣಗೆರೆ ಜಿಲ್ಲೆ ಹಸಿರು ವಲಯದತ್ತ ಸಾಗುತ್ತಿತ್ತು. ಏ.29ರಂದು ದಾವಣಗೆರೆಯಲ್ಲೇ ಮೊದಲ ಪ್ರಕರಣ ವರದಿಯಾದ ನಂತರ ಏರಿಕೆ ಪ್ರಮಾಣ ಹೆಚ್ಚಾಗಿತ್ತು. ಮೇ 3ರಂದು ಒಂದೇ ದಿನ 21 ಪ್ರಕರಣ ಪತ್ತೆಯಾಗುವ ಮೂಲಕ ಏರಿಕೆ ಪ್ರಮಾಣ ಹೆಚ್ಚಾಗುತ್ತಲೇ ಸಾಗಿತ್ತು. ಇಲ್ಲಿನ ಜಾಲಿನಗರದಲ್ಲಿ 100ಕ್ಕೂ ಹೆಚ್ಚು ಪಾಸಿಟಿವ್‌ ಪ್ರಕರಣಗಳಿದ್ದವು. ತಿಂಗಳುಗಟ್ಟಲೆ ಕಂಟೈನ್ಮೆಂಟ್‌ ಝೋನ್‌ ಆಗಿತ್ತು. ಇದರ ತೆರವಿಗಾಗಿ ಜನ ಪ್ರತಿಭಟನೆ ಸಹ ನಡೆಸಿದ್ದರು. ಜಾಲಿನಗರ, ಬೇತೂರು ರಸ್ತೆ, ಇಮಾಂ ನಗರ, ಕೆಟಿಜೆ ನಗರ, ಆಜಾದ್‌ ನಗರ, ಅಹಮ್ಮದ್‌ ನಗರ, ಬಾಷಾ ನಗರ ಇತರೆ ಭಾಗಗಳು ಹಲವಾರು ತಿಂಗಳವರೆಗೆ ಕಂಟೈನ್ಮೆಂಟ್‌ ಝೋನ್‌ ಗಳಾಗಿದ್ದು ಕೊರೊನಾ ಅಬ್ಬರಕ್ಕೆ ಸಾಕ್ಷಿ.

ಆದರೆ ಸದ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆ ಆಗುತ್ತಿದೆ. ಜೂನ್‌ -ಜುಲೈ ತಿಂಗಳ ಎರಡನೇ ವಾರದವರೆಗೆ ಪ್ರತಿ ನಿತ್ಯ 300ಕ್ಕಿಂತಲೂ ಹೆಚ್ಚಿನ ಪ್ರಕರಣ ಪತ್ತೆ ಆಗುತ್ತಿದ್ದವು. ಆಗಸ್ಟ್‌ ಎರಡನೇ ಮತ್ತು ಮೂರನೇ ವಾರದ ಹೊತ್ತಿಗೆ ಶೇ.25ರಿಂದ 30ರಂತೆ ಪ್ರತಿ ದಿನ ಸೋಂಕಿತರ ಪ್ರಮಾಣ 250ರ ಆಸುಪಾಸಿಗೆ ಇಳಿಯಿತು.

ಗಣನೀಯ ಪ್ರಮಾಣ ಇಳಿಕೆ: ಸೆಪ್ಟೆಂಬರ್‌ ತಿಂಗಳಲ್ಲಿ ಇಳಿಕೆ ಪ್ರಮಾಣ ಗಣನೀಯವಾಗಿದೆ. ಅಕ್ಟೋಬರ್‌ ಮೊದಲ ವಾರದಲ್ಲೂ ಕೋವಿಡ್ ಸೋಂಕಿತರ ಪ್ರಮಾಣ ಇಳಿಮುಖವಾಗ ತೊಡಗಿದೆ. ಜಿಲ್ಲಾಡಳಿತದ ಮೂಲಗಳ ಪ್ರಕಾರ ಈವರೆಗೆ ಶೇ. 40ರಿಂದ 50 ರಷ್ಟು ಸೋಂಕಿನ ಪ್ರಮಾಣ ಇಳಿಕೆ ಆಗಿದೆ. ಕೊರೊನಾ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದರನ್ನು ತ್ವರಿತಗತಿಯಲ್ಲಿ ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸುತ್ತಿರುವುದು. ವಾರ್ಡ್‌, ಗ್ರಾಮಟಾಸ್ಕ್ಫೋರ್ಸ್‌ ಮೂಲಕ ಸೋಂಕಿನ ಲಕ್ಷಣ ಇದ್ದವರು, ಇಲ್ಲದೇಇರುವರಿಗೂ ಪರೀಕ್ಷೆಗೆ ಒಳಪಡಿಸುತ್ತಿರುವುದು. ಸೋಂಕಿನಿಂದಗುಣಮುಖರಾದವರಿಗೆ ಕಟ್ಟುನಿಟ್ಟಾಗಿ ಹೋಂ ಐಸೋಲೇಷನ್‌ಮಾಡುವ ಜತೆಗೆ ಔಷಧೋಪಚಾರ ಮುಂದುವರಿಸುವುದುಒಳಗೊಂಡಂತೆ ಹಲವಾರು ಕ್ರಮ ಕೈಗೊಂಡಿರುವ ಪರಿಣಾಮ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದೆ.

ಜೂನ್‌, ಜುಲೈ, ಆಗಸ್ಟ್‌ ತಿಂಗಳಲ್ಲಿ ಪ್ರತಿ ದಿನ ಸಾವಿನ ಪ್ರಕರಣ ವರದಿಯಾಗುತ್ತಲೇ ಇದ್ದವು. ಒಂದೇ ದಿನ 10 ಜನ ಮೃತಪಟ್ಟ ದಾಖಲೆಯೂ ಇದೆ. ಶೇ.3ರಿಂದ 4ರಷ್ಟಿದ್ದಂತಹ ಸಾವಿನ ಸಂಖ್ಯೆ ಪ್ರಮಾಣ ಈಗ ಶೇ.1ಕ್ಕಿಂತಲೂ ಕಡಿಮೆ ಆಗಿದೆ. ದಾವಣಗೆರೆಜಿಲ್ಲೆಯಲ್ಲಿ ಅ.8ಕ್ಕೆ ಒಟ್ಟಾರೆಯಾಗಿ 17,537 ಪ್ರಕರಣಗಳಲ್ಲಿ 15,476 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೆ 243 ಮಂದಿ ಮೃತಪಟ್ಟಿದ್ದಾರೆ. 1818 ಸಕ್ರಿಯ ಪ್ರಕರಣಗಳಿವೆ.

 

-ರಾ. ರವಿಬಾಬು

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.