ಶ್ರೀರಂಗಪಟ್ಟಣದ ಯುವಕನ ಹತ್ಯೆ ಪ್ರಕರಣ: ಸುಪಾರಿ ಕಿಲ್ಲರ್ ಸೇರಿ ಐವರ ಬಂಧನ
Team Udayavani, Oct 10, 2020, 7:46 PM IST
ಶ್ರೀರಂಗಪಟ್ಟಣ: ತಾಲೂಕು ಗಣಂಗೂರು ಗ್ರಾಮದ ಬಳಿಯ ಯೋಗನರಸಿಂಹಸ್ವಾಮಿ ಕ್ರಷರ್ ಬಳಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪಾರಿ ಕಿಲ್ಲರ್ ಸೇರಿ ಐವರು ಆರೋಪಿಗಳನ್ನು ಶ್ರೀರಂಗಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅ.2ರಂದು ಪೂರ್ಣಚಂದ್ರ ಎಂಬ ಯುವಕನ ಕೊಲೆಗೆ ಸುಪಾರಿ ನೀಡಿದ್ದ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಜೆ.ಎಂ.ಮಂಜುನಾಥ್ ಹಾಗೂ ಘಟನೆಯಲ್ಲಿ ಭಾಗಿಯಾಗಿದ್ದ ಗಣಂಗೂರು ಗ್ರಾಮದ ಜಿ.ವಿನಯ್ಕುಮಾರ್, ಜಿ.ಕೆ.ಚಂದ್ರಶೇಖರ್, ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದ ಶ್ರೀನಿವಾಸ್, ನಾಗಮಂಗಲ ತಾಲೂಕಿನ ಹೂವಿನಹಳ್ಳಿ ಗ್ರಾಮದ ಹೆಚ್.ಕೆ.ಅಭಿಷೇಕ್ ಬಂಧಿತ ಆರೋಪಿಗಳು.
3 ತಿಂಗಳ ಹಿಂದೆ ಮಂಜುನಾಥ್ ಮೇಲೆ ನಡೆದಿದ್ದ ಕೊಲೆ ಯತ್ನದಲ್ಲಿ ಪೂರ್ಣಚಂದ್ರನ ಕೈವಾಡ ಇದೆ ಎಂದು ಶಂಕಿಸಿ ಪೂರ್ಣಚಂದ್ರನನ್ನು ಕೊಲೆ ಮಾಡಲು ತನ್ನ ಸ್ನೇಹಿತರಿಗೆ 5 ಲಕ್ಷ ರೂ. ಸುಪಾರಿ ನೀಡಿದ್ದ ಎನ್ನಲಾಗಿದೆ. ಪ್ರಕರಣವನ್ನು ಬೇದಿಸಿದ ಶ್ರೀರಂಗಪಟ್ಟಣ ಪೊಲೀಸರು ಐವರು ಆರೋಪಿಗಳೊಂದಿಗೆ 2 ಬೈಕ್, 1 ಕಾರು ವಶಪಡಿಸಿಕೊಂಡು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಸೂದೆಗಳು ರದ್ದು: ಸಿದ್ದರಾಮಯ್ಯ
ಪ್ರಮುಖ ಆರೋಪಿ ಜೆ.ಎಂ. ಮಂಜುನಾಥ ಮೇಲೆ ಶ್ರೀರಂಗಪಟ್ಟಣ ಟೌನ್, ಶ್ರೀರಂಗಪಟ್ಟಣ ಗ್ರಾಮಾಂತರ ಹಾಗೂ ಅರಕರೆ ಪೊಲೀಸ್ ಠಾಣೆಗಳಲ್ಲಿ ಕೊಲೆ ಪ್ರಕರಣ, ಕೊಲೆ ಯತ್ನ, ದೊಂಬಿ ಮತ್ತು ಸ್ಪೋಟಕ ಕಾಯಿದೆ ಪ್ರಕರಣಗಳು ದಾಖಲಾಗಿದ್ದು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆತನ ಮೇಲೆ ರೌಡಿ ಶೀಟ್ ತೆರೆಯಲಾಗಿದೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ