ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ 957 ಜನ ಕೋವಿಡ್ ನಿಂದ ಗುಣಮುಖ
Team Udayavani, Oct 11, 2020, 5:54 PM IST
ಚಿತ್ರದುರ್ಗ: ಜಿಲ್ಲೆಯ ಹಲವೆಡೆ ಕೋವಿಡ್ ಸೋಂಕಿನಿಂದಾಗಿ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 957 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 382 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9652 ಕ್ಕೆ ಏರಿಕೆಯಾಗಿದೆ.
ಭಾನುವಾರ ಒಟ್ಟು 1543 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 392 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 9652ಕ್ಕೆ ಏರಿಕೆಯಾಗಿದ್ದು, ಇಂದು 4 ಜನರು ಮೃತಪಟ್ಟಿದ್ದು ಇದುವರೆಗೆ 45 ಜನ ಕೋವಿಡ್ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8177 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1383 ಸಕ್ರಿಯ ಪ್ರಕರಣಗಳು ಇವೆ.
ಇದನ್ನೂ ಓದಿ :ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿದ್ದ ಬಸ್ಸಿಗೆ ರೈಲು ಡಿಕ್ಕಿ 18 ಸಾವು, 40ಕ್ಕೂ ಹೆಚ್ಚು ಗಾಯ
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 74010 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 77809 ಜನರ ಮಾದರಿ ಸಂಗ್ರಹಿಸಲಾಗಿದ್ದು, 67550 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 121 ಜನರ ವರದಿ ಬರುವುದು ಬಾಕಿ ಇದೆ. 486 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ತುಳಸಿರಂಗನಾಥ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ