ಮೋದಿ ನೇತೃತ್ವದಲ್ಲಿ ಅಭಿವೃದ್ಧಿ ಕಂಡಿದೆ ಬಿಹಾರ : ಸುರಕ್ಷಿತ ಬಿಹಾರಕ್ಕೆ ನಿತೀಶ್ ಅಗತ್ಯ
Team Udayavani, Oct 12, 2020, 5:30 AM IST
ಪಾಟ್ನಾ/ಮುಂಬಯಿ: ಪ್ರಧಾನಿ ಮೋದಿ ನೇತೃತ್ವದ ಸರಕಾರ ಕೇಂದ್ರದಲ್ಲಿ ಇರುವುದರಿಂದಲೇ ಬಿಹಾರ ಸಾಕಷ್ಟು
ಅಭಿವೃದ್ಧಿ ಕಂಡಿದೆ. ಮುಂದಿನ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿಯೇ ಸರಕಾರ ರಚನೆ ಮಾಡಲಾಗುತ್ತದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.
ಗಯಾದಲ್ಲಿ ಬಿಜೆಪಿಯ ಮೊದಲ ಚುನಾವಣ ರ್ಯಾಲಿಯಲ್ಲಿ ಮಾತ ನಾಡಿದ ಅವರು, ನಿತೀಶ್ ಕುಮಾರ್ ನೇತೃತ್ವದ ಸರಕಾರ 15 ವರ್ಷಗಳಿಂದ ಸಾಧಿಸಿದ ಅಭಿವೃದ್ಧಿ ಮತ್ತು ಲಾಲು ಪ್ರಸಾದ್ ಯಾದವ್ ರಾಜ್ಯದ ಮುಖ್ಯ ಮಂತ್ರಿಯಾಗಿದ್ದ ಅವಧಿಯ ದಿನಗಳನ್ನು ಹೋಲಿಸಿ ಕೊಳ್ಳಿ ಎಂದೂ ಹೇಳಿದರು. ನಡ್ಡಾ ಅವರ ಮಾತಿನಲ್ಲಿ ಹೆಚ್ಚಿನ ಅಂಶ ಪ್ರಧಾನಿ ಮೋದಿಯವರ ಸಾಧನೆಯ ಬಗ್ಗೆಯೇ ಇದ್ದದ್ದು ಗಮನಾರ್ಹ.
ನಿತೀಶ್ ನಾಯಕತ್ವದಲ್ಲಿ ಬಿಹಾರ ಸುರಕ್ಷಿತವಾಗಿದೆ. ಹೀಗಾಗಿ, ಅದನ್ನೇ ಮುಂದುವರಿಸುವುದು ಅಗತ್ಯ ಎಂದೂ ನಡ್ಡಾ ಹೇಳಿದ್ದಾರೆ. ರಾಜ್ಯ ಸರಕಾರವು ಕೊರೊನಾ ಸೋಂಕಿನ ಅವಧಿಯಲ್ಲಿ ರಾಜ್ಯದ ಜನರನ್ನು ರಕ್ಷಿಸಿದೆ. ಕೇಂದ್ರ ಸರಕಾರದಿಂದಲೂ ಅದಕ್ಕೆ ಪೂರಕವಾಗಿ ವಿತ್ತೀಯ ನೆರವು ನೀಡಲಾಗಿದೆ. ಪ್ರಧಾನಿ ಮೋದಿ ನೇತೃತ್ವದ ಆಡಳಿತದಲ್ಲಿ ಭಾರತ ಸುಭದ್ರವಾಗಿದೆ. ಅದೇ ರೀತಿ ನಿತೀಶ್ ನೇತೃತ್ವದಲ್ಲಿ ಬಿಹಾರ ಸುರಕ್ಷಿತವಾಗಿದೆ. ಹೀಗಾಗಿ, ಜನರು ಅದನ್ನೇ ಮುಂದುವರಿಸುವ ನಿಟ್ಟಿನಲ್ಲಿ ಮನಸ್ಸು ಮಾಡಬೇಕು ಎಂದು ನಡ್ಡಾ ಮತದಾರರಿಗೆ ಮನವಿ ಮಾಡಿದ್ದಾರೆ.
ಪ್ರಣಾಳಿಕೆ ಬಿಡುಗಡೆ: ಚುನಾವಣೆಗೆ ಅನುಗುಣವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ದಿಕ್ಸೂಚಿ ದಾಖಲೆ
“ಸಾತ್ ನಿಶ್ಚಯ’ ಎಂಬ 7 ಅಂಶಗಳ ಆಶ್ವಾಸನೆ ಬಿಡುಗಡೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ, ಉದ್ಯೋಗಾವ
ಕಾಶ ಪ್ರಧಾನವಾಗಿ ಉಲ್ಲೇಖವಾಗಿವೆ. ಇದೇ ವೇಳೆ, 2ನೇ ಹಂತದ ಚುನಾವಣೆಗಾಗಿ ಬಿಜೆಪಿ 46 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಕಾಂಗ್ರೆಸ್ನಿಂದ ಸಮಿತಿ
ಚುನಾವಣೆಗಾಗಿ ಕಾಂಗ್ರೆಸ್ ಕೂಡ ವಿವಿಧ ಸಮಿತಿಗಳನ್ನು ರಚಿಸಿದೆ. ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುಜೇìವಾಲಾ ನೇತೃತ್ವದಲ್ಲಿ ಚುನಾವಣ ನಿರ್ವಹಣ ಸಮಿತಿ ಮತ್ತು ಸಂಚಾಲನ ಸಮಿತಿ ರಚಿಸಲಾಗಿದೆ. ಮೋಹನ್ ಪ್ರಕಾಶ್ ಅದರ ಸಂಚಾಲಕರು. ಮಾಧ್ಯಮ ಸಮನ್ವಯ ಸಮಿತಿ, ಪ್ರಚಾರ ಸಮಿತಿಗಳ ರಚನೆ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
MUST WATCH
ಹೊಸ ಸೇರ್ಪಡೆ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ