ಪಟ್ಲ ಸತೀಶ್ ಶೆಟ್ರ ಸಾರಥ್ಯದಲ್ಲಿ ಪಾವಂಜೆ ಯಕ್ಷಗಾನ ಮೇಳ? ಈ ಬಗ್ಗೆ ಪಟ್ಲರು ಹೇಳುವುದೇನು?


Team Udayavani, Oct 12, 2020, 12:04 PM IST

ಪಟ್ಲ ಸತೀಶ್ ಶೆಟ್ರ ಸಾರಥ್ಯದಲ್ಲಿ ಪಾವಂಜೆ ಯಕ್ಷಗಾನ ಮೇಳ? ಈ ಬಗ್ಗೆ ಪಟ್ಲರು ಹೇಳುವುದೇನು?

ಮಂಗಳೂರು: ಈ ಹಿಂದೆ ಕಟೀಲು ಯಕ್ಷಗಾನ ಮೇಳದಲ್ಲಿದ್ದ ಭಾಗವತ ಪಟ್ಲ ಸತೀಶ್‌ ಶೆಟ್ಟಿ ಅವರ ಸಾರಥ್ಯದಲ್ಲಿ ಶೀಘ್ರದಲ್ಲೇ ಹೊಸ ಮೇಳ ಆರಂಭಗೊಳ್ಳಲಿದ್ದು, ಸಿದ್ಧತೆಗಳು ನಡೆಯುತ್ತಿವೆ.

ಪಟ್ಲ ಸತೀಶ್‌ ಶೆಟ್ಟಿ ಅವರ ಸಾರಥ್ಯದಲ್ಲಿ ಹೊಸ ಮೇಳವೊಂದು ಆರಂಭವಾಗಲಿದೆ ಎಂಬ ಊಹಾಪೋಹ ಹಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಇದೀಗ ಅದಕ್ಕೆ ಪುಷ್ಟಿ ನೀಡುವಂತೆ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಮೇಳ ಆರಂಭವಾಗಲಿದೆ.

ಈ ಬಗ್ಗೆ ಭಾಗವತ ಪಟ್ಲ ಸತೀಶ್‌ ಶೆಟ್ಟಿ ಅವರು “ಉದಯವಾಣಿ’ಗೆ ಪ್ರತಿಕ್ರಿಯಿಸಿ,”ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಮೇಳದ ಭಾಗವತಿಕೆಗೆ ಸಂಬಂಧಪಟ್ಟಂತೆ ಕ್ಷೇತ್ರದ ಕಮಿಟಿ-ನನ್ನ ನಡುವೆ ಮಾತುಕತೆ ನಡೆದಿದೆ. ಆ ಮೇಳದಲ್ಲಿ ನಾನು ಕಲಾವಿದ ಇರಬಹುದಷ್ಟೇ; ಆ ಮೂಲಕ ನಾನು ಸುಬ್ರಹ್ಮಣ್ಯ ದೇವರ ಸೇವೆ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಆಶ್ಲೇಷ‌ ನಕ್ಷತ್ರ ಹಿನ್ನಲೆ ಕುಕ್ಕೆಯಲ್ಲಿ ಭಕ್ತರ ದಂಡು: ರವಿವಾರ ರಾತ್ರಿಯಿಂದಲೇ ಸರತಿ ಸಾಲು

ಪಾವಂಜೆ ಶ್ರೀಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಮೇಳ ಆರಂಭದ ಕುರಿತು ಕಳೆದ ಮೂರು ವರ್ಷಗಳ ಹಿಂದೆಯೇ ಚಿಂತನೆ ಇತ್ತು. ಸದ್ಯ ಪ್ರಥಮ ಹಂತದಲ್ಲಿದೆ. ಪಟ್ಲ ಸತೀಶ್‌ ಶೆಟ್ಟಿ ಹೆಸರು ಕೇಳಿಬಂದ ಕಾರಣ ಈ ವಿಚಾರ ಮುನ್ನೆಲೆಗೆ ಬಂದಿದೆ. ಪಟ್ಲ ಸತೀಶ್‌ ಶೆಟ್ಟಿ ಅವರನ್ನು ಭಾಗವತರಾಗಿ ಆಯ್ಕೆ ಮಾಡುವ ಕುರಿತು ಚರ್ಚೆ ನಡೆಯುತ್ತಿದ್ದು, ಕಮಿಟಿ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್‌ ತಿಳಿಸಿದ್ದಾರೆ.

ಯಕ್ಷಗಾನ

ಎರಡು ವರ್ಷಗಳ ಹಿಂದೆ ಕಟೀಲಿನ ಆರು ಮೇಳಗಳಲ್ಲಿ ಕಲಾವಿದರ ವರ್ಗಾವಣೆ ಮಾಡಲಾಗಿತ್ತು. ಈ ವೇಳೆ ಐದನೇ ಮೇಳದಲ್ಲಿದ್ದ ಪಟ್ಲರನ್ನು ನಾಲ್ಕನೇ ಮೇಳಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ಬೆಳವಣಿಗೆಯನ್ನು ವಿರೋಧಿಸಿ ಐದನೇ ಮೇಳದ ಕೆಲವು ಕಲಾವಿದರು ಬಂಡೆದಿದ್ದರು. ಇದಾಗಿ ವರ್ಷಗಳ ನಂತರ ಪಟ್ಲರನ್ನೇ ಮೇಳದಿಂದ ಹೊರಹಾಕಲಾಗಿತ್ತು. ಇದು ವಿವಾದಕ್ಕೂ ಕಾರಣವಾಗಿತ್ತು.

ಕಟೀಲು ಮೇಳದಿಂದ ಬಂಡಾಯವೆದ್ದಿದ್ದ ಕೆಲವು ಕಲಾವಿದರು ನಂತರ ಇತರ ಯಕ್ಷಗಾನ ಮೇಳಗಳಿಗೆ ಸೇರಿದ್ದರು. ಈ ಕಲಾವಿದರು ಮತ್ತೆ ಪಟ್ಲರ ಜೊತೆ ಸೇರಬಹುದು ಎನ್ನಲಾಗಿದೆ.

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.