ಮುಂಬಯಿ ರೈಲುಗಳ ನಿರೀಕ್ಷೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಯಾಣಿಕರು


Team Udayavani, Oct 12, 2020, 1:25 PM IST

ಮುಂಬಯಿ ರೈಲುಗಳ ನಿರೀಕ್ಷೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಯಾಣಿಕರು

ಮಂಗಳೂರು: ಮಂಗಳೂರಿನಿಂದ ಮುಂಬಯಿಗೆ ರೈಲು ಸಂಚಾರ ಸ್ಥಗಿತಗೊಂಡು 7 ತಿಂಗಳು ಸಮೀಪಿಸುತ್ತಿದ್ದು, ಕರಾವಳಿ ಕರ್ನಾಟಕದ  ಪ್ರಮುಖ ಸಂಚಾರ ವ್ಯವಸ್ಥೆಯೊಂದು ಸ್ತಬ್ಧಗೊಂಡಿದೆ.

ರೈಲ್ವೇ ಮಂಡಳಿ ದೇಶದ ವಿವಿಧ ಭಾಗಗಳಲ್ಲಿ ಆರಂಭಿಸಲುದ್ದೇಶಿಸಿರುವ 200 ವಿಶೇಷ ರೈಲುಗಳಲ್ಲಿ ಮಂಗಳೂರು-ಮುಂಬಯಿ ಮಾರ್ಗವನ್ನು ಸೇರಿಸಿ ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿದೆ. ಈ ವಿಚಾರವಾಗಿ ಸೆಂಟ್ರಲ್‌ ರೈಲ್ವೇ ವಲಯ ಕೂಡ ರೈಲ್ವೇ ಮಂಡಳಿಗೆ ಪ್ರಸ್ತಾವನೆ ಕಳುಹಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್‌ – ಮುಂಬಯಿ ಲೋಕಮಾನ್ಯ ತಿಲಕ್‌ ಮತ್ಸ éಗಂಧ ಎಕ್ಸ್‌ ಪ್ರಸ್‌ ಹಾಗೂ ಮಂಗಳೂರು ಜಂಕ್ಷನ್‌- ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ ರೈಲು ಮಾ. 21ರಿಂದ ಸ್ಥಗಿತಗೊಂಡಿದೆ. ಪ್ರಸ್ತುತ ಮಂಗಳೂರು ಜಂಕ್ಷನ್‌ ನಿಲ್ದಾಣದ ಮೂಲಕ ತಿರುವನಂತಪುರ-ಕುರ್ಲಾ ವಿಶೇಷ ರೈಲು (ರೈಲು ನಂ. 06345/346) ಹಾದು ಹೋಗುತ್ತಿದೆ. ಕರಾವಳಿ ಕರ್ನಾಟಕದ ಜನರು ಈ ರೈಲು ಸೇವೆಯನ್ನು ಅವಲಂಬಿಸಬೇಕಾಗಿದೆ.

ಇದನ್ನೂ ಓದಿ:ಸಚಿವರುಗಳ ದಿಢೀರ್ ಖಾತೆ ಬದಲಾವಣೆ: ಬಿಜೆಪಿ ನಾಯಕರಲ್ಲಿ ಅಸಮಾಧಾನ, ರಾಮುಲು ಬೇಸರ

ಹಬ್ಬಗಳ ಹಿನ್ನೆಲೆಯಲ್ಲಿ ಅ. 15ರಿಂದ ನವೆಂಬರ್‌ 30ರ ವರೆಗೆ ದೇಶದೆಲ್ಲಡೆ 200 ವಿಶೇಷ ರೈಲುಗಳನ್ನು ಓಡಿಸಲು ಮಂಡಳಿ ನಿರ್ಧರಿಸಿದೆ. ಪ್ರಥಮ ಹಂತವಾಗಿ 39 ವಿಶೇಷ ರೈಲುಗಳಿಗೆ ಅನುಮತಿಸಲಾಗಿದ್ದು, ಇದರಲ್ಲಿ ಕರ್ನಾಟಕ ಭಾಗದಿಂದ ಯಶವಂತಪುರದಿಂದ ಕಾಮಕ್ಯ, ಬಾರ್ಮಾರ್‌, ಹೌರಾ ಹಾಗೂ ಬೆಂಗಳೂರು -ಚೆನ್ನೈ ಸೇರಿದಂತೆ 5 ರೈಲುಗಳಿವೆ.

ವಿಶೇಷ ರೈಲು ಸಂಚಾರಕ್ಕೆ ಅವಕಾಶ
ಪ್ರಸ್ತುತ ಮಂಗಳೂರು ಸೆಂಟ್ರಲ್‌ನಿಂದ ಚೆನ್ನೈ ಎಕ್ಸ್‌ ಪ್ರಸ್‌ ಮಾತ್ರ ಸಂಚರಿಸುತ್ತಿದೆ. ಬೆಂಗಳೂರು ವಿಶೇಷ ರೈಲನ್ನು ಪ್ರಯಾಣಿಕರ ಕೊರತೆ ನೆಪವೊಡ್ಡಿ ಸ್ಥಗಿತಗೊಳಿಸಲಾಗಿದೆ. ಕೊರೊನಾ ಪೂರ್ವದಲ್ಲಿ ಮಂಗಳೂರು ಜಂಕ್ಷನ್‌ನಿಂದ ಸಂಚರಿಸುತ್ತಿದ್ದ ಮಂಗಳೂರು ಜಂಕ್ಷನ್‌-ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ ರೈಲನ್ನು ರೈಲು ಸಂಚಾರ ಸಾಮಾನ್ಯಸ್ಥಿತಿಗೆ ಬರುವವರೆಗೆ ವಿಶೇಷ ರೈಲು ಆಗಿ ಓಡಿಸಬಹುದಾಗಿದೆ ಎಂಬ ಬೇಡಿಕೆಯನ್ನು ಕರಾವಳಿ ಕರ್ನಾಟಕದ ರೈಲ್ವೇ ಬಳಕೆದಾರರು ಮಂಡಿಸಿದ್ದಾರೆ. ಕೊಂಕಣ ಮಾರ್ಗದ ವ್ಯಾಪ್ತಿಯನ್ನು ಹೊಂದಿರುವ ಕೇಂದ್ರ ರೈಲ್ವೇ ಕೂಡ ಹಬ್ಬಗಳ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಮುಂಬಯಿಗೆ ಕೋವಿಡ್‌-19 ವಿಶೇಷ ರೈಲು ಸಂಚಾರದ ಪ್ರಸ್ತಾವನೆಯನ್ನು ರೈಲ್ವೇ ಮಂಡಳಿಯ ಮುಂದಿರಿಸಿದೆ.

ಇದನ್ನೂ ಓದಿ:ಪ್ರಯಾಣಿಕರ ಸೆಳೆಯಲು ನಮ್ಮ ಮೆಟ್ರೋ ಪ್ಲಾನ್‌ : ಪೇಟಿಎಂ, ಗೂಗಲ್‌ಪೇ ನಲ್ಲೇ ರಿಚಾರ್ಜ್‌

ವಿಶೇಷ ರೈಲಿನ ಆವಶ್ಯಕತೆ
ಕೊರೊನಾ ಕಾರಣದಿಂದಾಗಿ ಉದ್ಯೋಗ, ವಾಣಿಜ್ಯ ಚಟುವಟಿಕೆಗಳನ್ನು ತೊರೆದು ಊರಿಗೆ ಬಂದಿದ್ದವರು ಮರಳಿ ಮುಂಬಯಿಯತ್ತ ತೆರಳಲು ಆರಂಭಿಸಿದ್ದಾರೆ. ಅದುದರಿಂದ ವಿಶೇಷ ರೈಲು ಸಂಚಾರ ಅತೀ ಅವಶ್ಯವಾಗಿದೆ.

ಮಂಗಳೂರಿನಿಂದಲೂ ವಿಶೇಷ ರೈಲುಗಳ ಸಂಚಾರ ಅಗತ್ಯವಿದೆ. ರೈಲ್ವೇ ಮಂಡಳಿ ಆರಂಭಿಸಲುದ್ದೇಶಿಸಿರುವ 200 ರೈಲುಗಳಲ್ಲಿ ಮಂಗಳೂರು-ಮುಂಬಯಿ ಸೇರಿದಂತೆ ಮಂಗಳೂರು ಭಾಗಕ್ಕೂ ಕೆಲವು ವಿಶೇಷ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ರೈಲ್ವೇ ಸಚಿವರನ್ನು ಕೋರಲಾಗುವುದು.
– ನಳಿನ್‌ ಕುಮಾರ್‌ ಕಟೀಲು, ಸಂಸದರು, ದ.ಕ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.