ತುಂಬೆ ಡ್ಯಾಂನಲ್ಲಿ 6 ಮೀ. ನೀರು ಸಂಗ್ರಹ; 67.51 ಎಕರೆ ಜಲಾವೃತ

ಮನಪಾ ಪ್ರಕಾರ ದಾಖಲೆ ನೀಡಿದವರ ಪರಿಹಾರ ಪೂರ್ಣ; ಸಿಕ್ಕಿಲ್ಲವೆಂದು ರೈತರ ಆರೋಪ

Team Udayavani, Oct 14, 2020, 4:40 AM IST

ತುಂಬೆ ಡ್ಯಾಂನಲ್ಲಿ 6 ಮೀ. ನೀರು ಸಂಗ್ರಹ; 67.51 ಎಕರೆ ಜಲಾವೃತ

ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಂ.

ಬಂಟ್ವಾಳ: ಮಂಗಳೂರು ನಗರಕ್ಕೆ ನೀರಿನ ಕೊರತೆ ಎದುರಾಗುವ ದೃಷ್ಟಿಯಿಂದ ಮಂಗಳೂರು ಮಹಾನಗರ ಪಾಲಿಕೆಯು ಪ್ರಾರಂಭದಲ್ಲಿ ತುಂಬೆ ಡ್ಯಾಂನ್ನು 4-5 ಮೀಟರ್‌ ಬಳಿಕ 5-6 ಮೀಟರ್‌ ಏರಿಕೆ ಮಾಡಿತ್ತು. ಇದರಿಂದ ಬಂಟ್ವಾಳ ತಾಲೂಕಿನ 67.51 ಎಕರೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ಪೂರ್ಣ ಪ್ರಮಾಣದ ಪರಿಹಾರ ವಿತರಣೆಯಾಗಿಲ್ಲ ಎಂದು ರೈತರು ಆರೋಪಿಸಿದರೆ, ದಾಖಲೆ ನೀಡಿದ ಎಲ್ಲರಿಗೂ ಪರಿಹಾರ ನೀಡಲಾಗಿದೆ ಎಂದು ಪಾಲಿಕೆ ಹೇಳುತ್ತಿದೆ.

ಡ್ಯಾಂನಲ್ಲಿ 6 ಮೀ. ನೀರು ನಿಲ್ಲಿಸಿದ ಪರಿಣಾಮ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು, ಪಾಣೆಮಂ ಗಳೂರು, ಬಿ.ಮೂಡ ಹಾಗೂ ಕಳ್ಳಿಗೆ ಹೀಗೆ 4 ಗ್ರಾಮಗಳ ಭೂ ಪ್ರದೇಶ ಮುಳುಗಡೆಯಾಗಿದೆ. ಎರಡು ಹಂತದ ಮುಳುಗಡೆಗಾಗಿ ಒಟ್ಟು 22.3 ಕೋ.ರೂ. ಪರಿಹಾರ ಮೊತ್ತ ಬಿಡುಗಡೆಗೊಂಡಿದ್ದು, 11.3 ಕೋ.ರೂ. ವಿತರಿಸಲಾಗಿದೆ. ಒಟ್ಟು ಮುಳುಗಡೆ ಜಮೀನಿನಲ್ಲಿ 36.1 ಎಕರೆ ಪ್ರದೇಶದ ನೋಂದಣಿ(ರಿಜಿಸ್ಟ್ರೇಶನ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಪರಿಹಾರ ವಿತರಣೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡುತ್ತಾರೆ.

ಆದರೆ ಹೋರಾಟ ಸಮಿತಿ ಪ್ರಕಾರ ದಾಖಲೆ ನೀಡಿರುವ ಕೆಲವರಿಗೆ ಪರಿಹಾರ ವಿತರಣೆಯಾಗಿಲ್ಲ, ಇನ್ನು ಕೆಲವಡೆ ಮುಳುಗಡೆಯಾದರೂ ಪರಿಹಾರಕ್ಕೆ ಸರ್ವೇ ಕಾರ್ಯವನ್ನೂ ಮಾಡಿಲ್ಲ ಎಂದು ಆರೋಪಿಸಿದೆ. ಇಲ್ಲಿ ಖರೀದಿ ಪ್ರಕ್ರಿಯೆ ನಡೆಸಿಯೇ ಪರಿಹಾರ ವಿತರಣೆಯಾಗುವುದರಿಂದ ನಕ್ಷೆಗಳು ಸರಿಯಿಲ್ಲದೆ, ಅಪ್ರಾಪ್ತ ವಯಸ್ಸಿನ ಹಕ್ಕು ಇದ್ದರೆ (ಮೈನರ್‌ ರೈಟ್ಸ್‌), ಹೆಸರುಗಳಲ್ಲಿ ವ್ಯತ್ಯಾಸವಿದ್ದರೆ ವಿಳಂಬವಾಗುತ್ತಿದೆ ಎಂಬ ಕಾರಣವೂ ಇದೆ.

4-5 ಮೀ. ನೀರು ಸಂಗ್ರಹ
ತುಂಬೆ ಡ್ಯಾಂನಲ್ಲಿ 4 ರಿಂದ 5 ಮೀ.ನೀರು ನಿಲ್ಲಿಸಿದಾಗ ಒಟ್ಟು 20.53 ಎಕರೆ ಕೃಷಿ ಭೂಮಿ ಜಲಾವೃತವಾಗಿದ್ದು, 28 ಮಂದಿ ಪಹಣಿದಾರರ (38 ಸರ್ವೇ ನಂ.ಗಳು) ಜಮೀನು ಮುಳುಗಡೆಯಾಗಿತ್ತು. ಅದಕ್ಕೆ ಪರಿಹಾರ ಮೊತ್ತವಾಗಿ 7.5 ಕೋ.ರೂ. ಪರಿಹಾರ ಬಿಡುಗಡೆ ಮಾಡಿ, 13.1 ಎಕರೆ ಪ್ರದೇಶದ ನೋಂದಣಿ (ರಿಜಿಸ್ಟ್ರೆಶನ್‌) ಮಾಡಿ 4.9 ಕೋ.ರೂ. ವಿತರಣೆ ಮಾಡಲಾಗಿದೆ. ಇವರಲ್ಲಿ 13 ಮಂದಿ ದಾಖಲೆ ನೀಡುವುದಕ್ಕೆ ಬಾಕಿ ಇದ್ದು, 2.6 ಕೋ.ರೂ. ಪರಿಹಾರ ವಿತರಣೆಗೆ ಬಾಕಿ ಇದೆ.

5-6 ಮೀ. ನೀರು ಸಂಗ್ರಹ
ಡ್ಯಾಂನಲ್ಲಿ 5ರಿಂದ 6 ಮೀ. ನೀರು ನಿಲ್ಲಿಸಿದಾಗ 46.98 ಎಕರೆ ಕೃಷಿ ಭೂಮಿ ಜಲಾವೃತ್ತವಾಗಿದ್ದು, 64 ಪಹಣಿದಾರರ (95 ಸರ್ವೇ ನಂ.ಗಳು) ಜಮೀನು ಮುಳುಗಡೆಯಾಗಿತ್ತು.

ಇದರ ಪರಿಹಾರಕ್ಕಾಗಿ 14.8 ಕೋ.ರೂ. ಬಿಡುಗಡೆ ಮಾಡಲಾಗಿದ್ದು, 32 ಮಂದಿಯ 23 ಎಕರೆ ಪ್ರದೇಶ ಈಗಾಗಲೇ ನೋಂದಣಿ ಪೂರ್ಣಗೊಂಡಿದೆ. 6.4 ಕೋ.ರೂ. ಈಗಾಗಲೇ ವಿತರಿಸಲಾಗಿದೆ. 32 ಮಂದಿ ದಾಖಲೆ ನೀಡುವುದಕ್ಕೆ ಬಾಕಿ ಇದ್ದಾರೆ. ಇವರಲ್ಲಿ 4 ಮಂದಿ ದಾಖಲೆ ನೀಡಿದ್ದು, ಅವರಿಗೆ ವಾರದೊಳಗೆ ಪರಿಹಾರ ವಿತರಣೆಯಾಗುತ್ತದೆ. ಪ್ರಸ್ತುತ 8.4 ಕೋ.ರೂ.ವಿತರಣೆಗೆ ಬಾಕಿ ಇದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡುತ್ತಾರೆ.

ಒರತೆ ಪ್ರದೇಶಕ್ಕೆ ಪರಿಹಾರ
ಹೋರಾಟ ಸಮಿತಿಯು ಮುಳುಗಡೆ ಪ್ರದೇಶದ ಜತೆಗೆ ಒರತೆ ಪ್ರದೇಶಕ್ಕೂ ಪರಿಹಾರ ನೀಡಬೇಕು ಎಂದು ಒತ್ತಾಯಿ ಸುತ್ತಿದ್ದು, ಕೇಂದ್ರ ಜಲ ಮಂಡಳಿಯು ಡ್ಯಾಂಗಳಿಂದಾಗಿ ಒರತೆ ಕಂಡುಬರುವ ಭೂಮಿಗೂ ಪರಿಹಾರ ನೀಡಬೇಕು ಎಂದು ನಿರ್ದೇಶನ ನೀಡಿದೆ ಎಂದು ಹೇಳುತ್ತಿದೆ. ಇದಕ್ಕಾಗಿ ಈ ಹಿಂದೆ ಡಿಸಿಯಾಗಿದ್ದ ಎ.ಬಿ.ಇಬ್ರಾಹಿಂ ಮಲಾಯಿಬೆಟ್ಟು ಪ್ರದೇಶಕ್ಕೆ ಭೇಟಿ ನೀಡಿ ಒರತೆ ಪ್ರದೇಶದ ಪರಿಹಾರದ ಕುರಿತು ರೈತರ ಸಭೆ ನಡೆಸಿದ್ದರು ಎಂದು ಹೋರಾಟ ಸಮಿತಿ ಹೇಳುತ್ತಿದೆ.

ಕೆಲವೆಡೆ ಸರ್ವೇಯೂ ಆಗಿಲ್ಲ
ನಮ್ಮ ಪ್ರಕಾರ ಮಂಗಳೂರು ಮಹಾನಗರ ಪಾಲಿಕೆಯು 19 ಮಂದಿಗೆ ಪರಿಹಾರ ನೀಡಲು ಬಾಕಿ ಇದೆ. ಕೆಲವು ರೈತರ ಜಮೀನು ಮುಳುಗಡೆಯಾಗಿದ್ದು, ಅದರ ಸರ್ವೇ ಕಾರ್ಯವೂ ನಡೆದಿಲ್ಲ. ಜತೆಗೆ ಕೇಂದ್ರ ಜಲ ಮಂಡಳಿಯ ನಿರ್ದೇಶನದ ಪ್ರಕಾರ ಒರತೆ ಪ್ರದೇಶಕ್ಕೂ ಪರಿಹಾರ ನೀಡಬೇಕು.
-ಎಂ.ಸುಬ್ರಹಣ್ಯ ಭಟ್‌ ಅಧ್ಯಕ್ಷರು, ತುಂಬೆ ಡ್ಯಾಂ ಸಂತ್ರಸ್ತರ ಹೋರಾಟ ಸಮಿತಿ.

ವಾರದೊಳಗೆ ಪರಿಹಾರ
ದಾಖಲೆ ನೀಡಿರುವ ಎಲ್ಲ ರೈತರಿಗೂ ಪರಿಹಾರ ನೀಡಲಾಗಿದ್ದು, ದಾಖಲೆ ನೀಡದವರು, ಜಮೀನಿನಲ್ಲಿ ತಕರಾರು ಇರುವವರಿಗೆ ಪರಿಹಾರ ನೀಡುವುದು ಸಾಧ್ಯವಿಲ್ಲ. ಪ್ರಸ್ತುತ 4 ಮಂದಿ ದಾಖಲೆ ನೀಡಿದ್ದು, ಅವರಿಗೆ ವಾರದೊಳಗೆ ಪರಿಹಾರವನ್ನು ವಿತರಿಸುತ್ತೇವೆ. ದಾಖಲೆ ನೀಡಿದರೆ ಶೀಘ್ರದಲ್ಲಿ ಪರಿಹಾರ ಮೊತ್ತ ನೀಡಲು ಸಾಧ್ಯವಾಗುತ್ತದೆ.
-ಬಿನೋಯ್‌, ವಿಶೇಷ ಭೂ ಸ್ವಾಧೀನಾಧಿಕಾರಿ ಮಹಾನಗರಪಾಲಿಕೆ, ಮಂಗಳೂರು.

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.