ಸಗಣಿ ಚಿಪ್ನಿಂದ ತಗ್ಗುತ್ತದೆ ಮೊಬೈಲ್ ರೇಡಿಯೇಷನ್
Team Udayavani, Oct 14, 2020, 6:30 AM IST
ಹೊಸದಿಲ್ಲಿ: ಸಗಣಿಯಿಂದ ಸಿದ್ಧಪಡಿಸಿದ ಚಿಪ್ ಮೊಬೈಲ್ ರೇಡಿಯೇಷನ್ ತಡೆಯುತ್ತದೆ. ವೈಜ್ಞಾನಿಕವಾಗಿಯೂ ಇದು ಸಾಬೀತಾಗಿದೆ ಎಂದು ರಾಷ್ಟ್ರೀಯ ಗೋ ಆಯೋಗದ ಅಧ್ಯಕ್ಷ ವಲ್ಲಭಭಾಯ್ ಕಥಿರಿಯಾ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, ಸಗಣಿಗೆ ರೇಡಿಯೇಷನ್ ಅನ್ನು ತಡೆಯಲು ಮತ್ತು ಪ್ರಭಾವ ತಗ್ಗಿಸುವ ಸಾಮರ್ಥ್ಯವಿದೆ ಎಂದರು. ಜತೆಗೆ ಸುದ್ದಿಗೊಷ್ಠಿಯಲ್ಲಿ ನೂತನವಾಗಿ ತಯಾರಿಸ ಲಾದ ಚಿಪ್ ಅನ್ನು ಪ್ರದರ್ಶಿಸಿದರು. ಮೊಬೈಲ್ಗಳಲ್ಲಿ ಈ ಚಿಪ್ ಅಳವಡಿಸಿದರೆ, ರೇಡಿಯೇಷನ್ ಪ್ರಮಾಣ ತಗ್ಗಿಸುತ್ತದೆ ಮತ್ತು ಕಾಯಿಲೆಗಳಿಂದ ರಕ್ಷಣೆ ನೀಡುತ್ತದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಬಾಲಿವುಡ್ ನಟ ಅಕ್ಷಯ ಕುಮಾರ್ ಆರೋಗ್ಯ ಕಾರಣಕ್ಕೆ ಗೋ ಮೂತ್ರ ಸೇವಿಸುವುದಾಗಿ ಹೇಳಿದ್ದರು. ಅದರಿಂದ ಅವರಿಗೆ ಧನಾತ್ಮಕ ಪರಿಣಾಮಗಳು ಉಂಟಾದ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು.
33 ಕೋಟಿ ದೀಪಗಳು: ಗೋ ಮೂತ್ರದಿಂದ ಸ್ಯಾನಿಟೈಸರ್ ಸಿದ್ಧಪಡಿಸುವಲ್ಲಿ ಯಶಸ್ವಿಯಾಗಿರುವ ಆಯೋಗ ಸಗಣಿಯಿಂದ ಸಿದ್ಧಪಡಿಸುವ 33 ಕೋಟಿ ದೀಪಗಳ ಬಳಕೆಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಈ ಮೂಲಕ ದೀಪಾವಳಿ ಅವಧಿಯಲ್ಲಿ ಚೀನ ನಿರ್ಮಿತ ಹಣತೆ ಬಳಕೆ ತಗ್ಗಿಸಲು ಪ್ರಯತ್ನ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು