ನರಕ ಯಾತನೆಗೆ ಸುಪ್ರೀಂ ಮುಕ್ತಿ


Team Udayavani, Oct 14, 2020, 11:51 AM IST

bng-tdy-4

ಬೆಂಗಳೂರು: ನಕಲಿ ಮತದಾರರ ಗುರುತಿನ ಚೀಟಿ ಹೆಸರಿನಲ್ಲಿ ಎರಡು ವರ್ಷಗಳಿಂದ ಕೇಳಿಬಂದಿದ್ದಆರೋಪಗಳಿಂದ ನೊಂದಿದ್ದ ನನಗೆ ಸುಪ್ರೀಂಕೋರ್ಟ್‌ ತೀರ್ಪು ಮುಕ್ತಿ ನೀಡಿದೆ. ಕ್ಷೇತ್ರದ ಜನರ ಋಣದಲ್ಲಿದ್ದು, ಅವರ ಋಣ ತೀರಿಸಬೇಕಿದೆ. ಅಭಿವೃದ್ಧಿ ಮಂತ್ರದೊಂದಿಗೆ ಮತ ಯಾಚಿಸುತ್ತೇನೆ. – ಇದು ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಮಾತು.

­ಸುಪ್ರೀಂ ತೀರ್ಪಿನ ಬಗ್ಗೆಏನುಹೇಳುವಿರಿ? :

“ನಕಲಿ ಮತದಾರರ ಗುರುತಿನ ಚೀಟಿ ಪತ್ತೆ, ನನಗೆ ಆ 25,000 ಮತಗಳು ಬರಬೇಕಿತ್ತು, ಅನ್ಯಾಯವಾಗಿದೆ,’ ಎಂಬ ಆರೋಪಗಳಿಂದ ಕಳೆದ ಎರಡು ವರ್ಷ ನರಕ ಯಾತನೆ ಅನುಭವಿಸಿದ್ದೇನೆ. ಆರಂಭದಲ್ಲಿ ಹೈಕೋರ್ಟ್‌ ನ್ಯಾಯ ಒದಗಿಸಿತ್ತು. ಇದೀಗ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ನನ್ನ ನೋವಿಗೆ ಮುಕ್ತಿ ನೀಡಿದ್ದು, ನನ್ನ ಜೀವನದಲ್ಲಿ ದೊಡ್ಡ ಸಂತೋಷ ನೀಡಿದೆ.

­ಕಾಂಗ್ರೆಸ್‌ ಅಭ್ಯರ್ಥಿ ನಿಮಗೆ ಪ್ರತಿಸ್ಪರ್ಧಿಯೇ ? :  ಕಾಂಗ್ರೆಸ್‌ನಿಂದ ಹೆಣ್ಣು ಮಗಳು ಸ್ಪರ್ಧಿಸಿದ್ದಾರೆ. ಪಾಪ ಅವರ ಬಗ್ಗೆ ನಾನು ಏನೂ ಮಾತಾಡುವುದಿಲ್ಲ. ಈವರೆಗೆ ಪಂಚಾಯ್ತಿಗೂ ಸ್ಪರ್ಧಿಸದ ಅವರು ಮೊದಲ ಬಾರಿಗೆ ಸ್ಪರ್ಧಿಸಿದ್ದಾರೆ. ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರೆ, ನಾನು ಬಿಜೆಪಿಯಿಂದ ಸ್ಪರ್ಧಿಸಿದ್ದು,ಅವರ ಬಗ್ಗೆ ಏನೂ ಮಾತನಾಡುವುದಿಲ್ಲ.

­ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಂಸದ ಡಿ.ಕೆ. ಸುರೇಶ್‌ಹಾಗೂ ಮುನಿರತ್ನ ನಡುವಿನ ಚುನಾವಣೆ ಅಂತಾರಲ್ಲಾ? :

ಚುನಾವಣೆ ಎಂದ ಮೇಲೆ ಪ್ರತಿಷ್ಠೆಯ ಪ್ರಶ್ನೆ ಇಲ್ಲ. ಕ್ಷೇತ್ರದ ಜನ ಯಾವ ತೀರ್ಮಾನ ನೀಡುತ್ತಾರೋ ಅದೇ ಅಂತಿಮ. ಅದಕ್ಕೆ ಎಲ್ಲರೂ ತಲೆಬಾಗಬೇಕು.  ಟಿಕೆಟ್‌ಆಕಾಂಕ್ಷಿಯಾಗಿದ್ದ ಮುನಿರಾಜುಗೌಡ ಅವರು ನಿಮ್ಮ ಪರ ಪ್ರಚಾರ ನಡೆಸುವರೇ? ಮುನಿರಾಜುಗೌಡಅವರಿಗೆಕರೆ ಮಾಡಿ ಮಾತನಾಡಿ ದ್ದ, ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬುಧವಾರ ನಾಮಪತ್ರ ಸಲ್ಲಿಸುತ್ತಿದ್ದು, ಜೊತೆಗೆ ಬರುವಂತೆ ಆಹ್ವಾನ ನೀಡಿದ್ದೇನೆ. ಬುಧವಾರ ಅವರು ನನ್ನ ಜತೆ ಖಂಡಿತ ಬರಲಿದ್ದು, ನಾಮಪತ್ರ ಸಲ್ಲಿಸುತ್ತೇನೆ. ಹಿರಿಯ ರಾದ ಅವರಿಗೂ ಒಳ್ಳೆಯದಾಗಬೇಕೆಂಬುದೇ ನನ್ನ ಆಶಯ.

­ಕ್ಷೇತ್ರದಲ್ಲಿ ನಿಮಗೆ ಎದುರಾಳಿ ಯಾರು ? :

ಕ್ಷೇತ್ರದಲ್ಲಿಹಿಂದಿನಿಂದಲೂ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ನಡುವೆ ತ್ರಿಕೋನ ಸ್ಪರ್ಧೆ‌ ಇರುತ್ತಿತ್ತು. ನಾನು ಎರಡು ಬಾರಿ ಶಾಸಕನಾಗಿದ್ದೆ. ಹಿಂದೆ ಸಚಿವ ಆರ್‌. ಅಶೋಕ್‌ ಅವರು ಮೂರು ಬಾರಿ, ಎಂ. ಶ್ರೀನಿವಾಸ್‌ ಅವರು ಒಂದು ಬಾರಿ ಗೆದ್ದಿದ್ದರು. ಕ್ಷೇತ್ರದ ಜನ ಅಭಿವೃದ್ಧಿಗೆ ಮತ ನೀಡುತ್ತಾರೆಯೇ ಹೊರತು ಬೇರೆ ಯಾವುದಕ್ಕೂ ಮರುಳಾಗುವ ಪ್ರಶ್ನೆಯೇ ಇಲ್ಲ.

 ಗೆದ್ದರೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದೀರಾ? :

ಮುಖ್ಯಮಂತ್ರಿಗಳು, ವರಿಷ್ಠರು ಈ ಬಗ್ಗೆ ತೀರ್ಮಾನಿಸಲಿದ್ದು, ನಾನು ಈಗ ಏನೂ ಹೇಳುವುದಿಲ್ಲ. ರಾಜ್ಯದಲ್ಲಿ ನಮ್ಮ ಸರ್ಕಾರವಿದೆ. ಹಿಂದಿನ ಸರ್ಕಾರ, ಮುಖ್ಯಮಂತ್ರಿಗಳಿದ್ದಾಗ ಕ್ಷೇತ್ರದ ಅಭಿವೃದ್ಧಿಗೆ ಯಾವ ಚಿಂತನೆ ನಡೆಸಿದ್ದೆನೋ ಅದನ್ನೇ ಮುಂದುವರಿಸುತ್ತೇನೆ. ಅದನ್ನು ಬಿಟ್ಟು ಬೇರೆ ಏನೂ ವ್ಯತ್ಯಾಸ ಇರುವುದಿಲ್ಲ.

­ಪಕ್ಷ ಬದಲಾವಣೆಯಿಂದ ಹಿಂದೆ ಬೆಂಬಲಿಸಿದ್ದ ಎಲ್ಲ ವರ್ಗದವರು ಮತ್ತೆ ಬೆಂಬಲಿಸುವ ವಿಶ್ವಾಸವಿದೆಯೇ? :  ನಾನು ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇನೆ, ಒಳ್ಳೆಯ ಶಾಸಕ ಎಂಬ ನಂಬಿಕೆಯಿಂದ ಕ್ಷೇತ್ರದ ಜನ ನನ್ನನ್ನು ಎರಡು ಬಾರಿ ಆಯ್ಕೆ ಮಾಡಿದ್ದಾರೆ. ಇಂದಿಗೂ ಅದೇ ಅಭಿಮಾನವಿದ್ದು ಮುಂದೆಯೂ ನನ್ನ ಕೈ ಹಿಡಿಯುವ ವಿಶ್ವಾಸವಿದೆ.

 

ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.