ಕಲ್ಲಡ್ಕ: ರಿಕ್ಷಾ- ದ್ವಿಚಕ್ರ ವಾಹನ ಢಿಕ್ಕಿ, ಬೈಕ್ ಸವಾರ ಮೃತ್ಯು
Team Udayavani, Oct 15, 2020, 11:16 AM IST
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದಲ್ಲಿ ನಡೆದ ರಿಕ್ಷಾ ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದೆ.
ಮೆಲ್ಕಾರ್ ನಿವಾಸಿ ತಾರಾನಾಥ (35) ಮೃತ ದುರ್ಧೈವಿ. ಬುಧವಾರ ಸಂಜೆ ವೇಳೆ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿಯಿಂದ ಕಲ್ಲಡ್ಕ ಪೇಟೆಗೆ ತಾರಾನಾಥ ಅವರು ದ್ವಿಚಕ್ರವಾಹನದಲ್ಲಿ ಬರುವ ವೇಳೆ ಅಪಘಾತ ನಡೆದಿತ್ತು.
ಘಟನೆಯಲ್ಲಿ ತಾರಾನಾಥ ಅವರ ಹೊಟ್ಟೆಯ ಭಾಗಕ್ಕೆ ಗಾಯವಾಗಿದ್ದು ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿ ಯಾಗದೆ ಇವರು ರಾತ್ರಿ ವೇಳೆ ಮೃತಪಟ್ಟಿದ್ದಾರೆ. ಗುರುವಾರ ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.