ಡೋಣಿ ನದಿ ಪ್ರವಾಹ: ನಡುಗಡ್ಡೆಯಲ್ಲಿ ಸಿಲುಕಿದ ಕಾರ್ಮಿಕರು! ರಕ್ಷಣಾ ಕಾರ್ಯ ಚುರುಕು
ರಕ್ಷಣಾ ಕಾರ್ಯಕ್ಕೆ ಮುಂದಾದ ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ
Team Udayavani, Oct 15, 2020, 5:35 PM IST
ವಿಜಯಪುರ : ಮಳೆಯ ಅಬ್ಬರ ಕಡಿಮೆಯಾದರೂ ಜಿಲ್ಲೆಯಲ್ಲಿ ಹರಿಯುವ ನದಿಗಳಲ್ಲಿ ಪ್ರವಾಹ ಮುಂದುವರೆದಿದೆ. ತಾಳಿಕೋಟೆ ಪಟ್ಟಣದ ಹೊರ ಭಾಗದಲ್ಲಿ ಹರಿಯುವ ನದಿಯಲ್ಲಿ ಮಹಾರಾಷ್ಟ್ರ ರಾಜ್ಯದ ಏಳು ಜನ ಕಾರ್ಮಿಕರು ಪ್ರವಾಹದಲ್ಲಿ ಸಿಕ್ಕಿಕೊಂಡಿದ್ದು, ರಕ್ಷಣೆಗೆ ಗೋಗರೆಯುತ್ತಿದ್ದಾರೆ. ಅಧಿಕಾರಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ತಾಳಿಕೋಟೆ ಪಟ್ಟಣದ ಹೊರ ಭಾಗದಲ್ಲಿ ಹರಿಯುವ ಡೋಣಿ ನದಿಯ ನಡುಗಡ್ಡೆಯಲ್ಲಿ ಇಟ್ಟಂಗಿ ನಿರ್ಮಾಣ ಘಟಕದಲ್ಲಿ ಮಹಾರಾಷ್ಟ್ರದ ಒಂದೇ ಕುಟುಂಬದ ಏಳು ಜನ ದುಡಿಯುತ್ತಿದ್ದಾರೆ. ಕಳೆದ ನಾಲ್ಕೈದು ದಿನಗಳಿಂದ ಡೋಣಿ ನದಿಯಲ್ಲಿ ಪ್ರವಾಹ ಮುಂದುವರೆದಿದ್ದು, ನದಿಯ ಮಧ್ಯ ಭಾಗದಲ್ಲಿರುವ ನಡುಗಡ್ಡೆ ನೀರಿನಿಂದ ಆವೃತವಾಗಿದೆ. ಪರಿಣಾಮ ಕುಟುಂಬದ ಎಲ್ಲರೂ ನಡುಗಡ್ಡೆಯಲ್ಲಿರುವ ಮೇವಿನ ಬಣವೆ ಮೇಲೆ ಕುಳಿತು ಬಟ್ಟೆ ಬೀಸಿ, ಕೂಗಿ ರಕ್ಷಣೆಗೆ ಮೊರೆ ಇಡುತ್ತಿದ್ದಾರೆ.
ಪ್ರವಾಹಕ್ಕೆ ಸಿಲುಕಿರುವುದನ್ನು ಕಂಡ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸದ್ಯ ಕಾಮಿಕರು ರಕ್ಷಣೆ ಪಡೆದಿರುವ ಬಣವೆ ಕೂಡ ಜಲಾವೃತವಾಗಿದ್ದು, ನೀರಿನ ಪ್ರಮಾಣ ಹೆಚ್ಚಿದಲ್ಲಿ ಬಣವೆ ಕೊಚ್ಚಿ ಹೋಗುವ ಅಪಾಯ ಎದುರಾಗಿದೆ. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ದೋಣಿಗಳನ್ನು ಬಳಸಿ ತ್ವರಿತವಾಗಿ ಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ:ಭೀಮಾ ನದಿಯಲ್ಲಿ ನೀರಿನ ಪ್ರಮಾಣ ಏರುವ ಭೀತಿ! ಎಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
ಘಟನೆಯ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಆಗಮಿಸಿರುವ ಸಹಾಯಕ ಆಯುಕ್ತ ಬಲರಾಮ ಲಮಾಣಿ, ತಾಳಿಕೋಟೆ ತಹಸೀಲ್ದಾರ ಅನಿಲಕುಮಾರ್ ಢವಳಗಿ ನೇತೃತ್ವದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಇದರಲ್ಲಿ ಇಟ್ಟಂಗಿಬಟ್ಟಿ ಇನ್ನೊಂದು ಗುಂಪಿನ ಕಾರ್ಮಿಕನನ್ನು ರಕ್ಷಿಸಿರುವ ಅಧಿಕಾರಿಗಳು, ನಡುಗಡ್ಡೆಯಲ್ಲಿರುವ ಸಿಲುಕಿರುವ ಇತರೆ ಕಾರ್ಮಿಕರ ಮಾಹಿತಿ ಸಂಗ್ರಹದಲ್ಲಿ ತೊಡದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.