ಮಹಾರಾಷ್ಟ್ರ ಮೇಲೂ ವರುಣನ ವಕ್ರದೃಷ್ಟಿ: ಮಳೆಗೆ 27 ಸಾವು; 20 ಸಾವಿರ ಸಂತ್ರಸ್ತರ ಸ್ಥಳಾಂತರ
Team Udayavani, Oct 16, 2020, 1:24 AM IST
ಪುಣೆ/ಹೈದರಾಬಾದ್: ರೌದ್ರಾವತಾರ ಎತ್ತಿರುವ ವರುಣ ಮಹಾ ರಾಷ್ಟ್ರದಲ್ಲೂ ಮರಣ ಮೃದಂಗ ಬಾರಿಸಿದ್ದಾನೆ. ಮಳೆಯ ಧಾರಾಕಾರ ಆರ್ಭಟದಿಂದಾಗಿ 3 ಜಿಲ್ಲೆಗಳಲ್ಲಿ 27 ಮಂದಿ ಸಾವನ್ನಪ್ಪಿದ್ದಾರೆ.
ಪಶ್ಚಿಮ ಮಹಾರಾಷ್ಟ್ರದ ಸೊಲ್ಲಾಪುರ, ಸಾಂಗ್ಲಿ ಮತ್ತು ಪುಣೆ ಜಿಲ್ಲೆಗಳಲ್ಲಿ ಸಾಕಷ್ಟು ಸಾವು-ನೋವು ಸಂಭವಿಸಿದೆ. ಸುಮಾರು 20 ಸಾವಿರ ಮಂ ಯನ್ನು ಗುರುವಾರ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸ ಲಾಗಿದೆ. ಸಾಂಗ್ಲಿಯಲ್ಲಿ 9, ಪುಣೆ ಜಿಲ್ಲೆಯಲ್ಲಿ 4 ಸಾವುಗಳಾಗಿವೆ.
ಸೊಲ್ಲಾಪುರ ತತ್ತರ: ಸೊಲ್ಲಾ ಪುರವೊಂದರಲ್ಲೇ 14 ಮಂದಿ ಪ್ರಾಣಬಿಟ್ಟಿದ್ದಾರೆ. 8 ಸಾವಿರ ಮಂದಿಯ ಸ್ಥಳಾಂತರ ಪ್ರಕ್ರಿಯೆ ಯಶಸ್ವಿಯಾಗಿದೆ. ಉಜಾನಿ ಅಣೆಕಟ್ಟೆಯ ನೀರನ್ನು ನೈರಾ ಮತ್ತು ಭೀಮಾ ನದಿಗಳಿಗೆ ಬಿಟ್ಟ ಪರಿಣಾಮ ನದಿ ಪಾತ್ರದಲ್ಲಿ ಭಾರೀ ಪ್ರವಾಹ ಸೃಷ್ಟಿಯಾಗಿದೆ. ಡ್ಯಾಂನಿಂದ 2.3 ಲಕ್ಷ ಕ್ಯುಸೆಕ್ ನೀರು ಬಿಡಲಾಗಿದ್ದು, ಭೀಮಾ ತೀರದ ಜನತೆಗೆ ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಸೊಲ್ಲಾಪುರದಲ್ಲಿ ಕಳೆದ 24 ಗಂಟೆಗಳಲ್ಲಿ 56 ಸೆಂ.ಮೀ. ಮಳೆ ಬಿದ್ದಿದೆ. ಪ್ರವಾಹದಿಂದ ಮುಳುಗಡೆಯಾದ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣ ಪಡೆ (ಎನ್ಡಿಆರ್ಆಫ್) ರಕ್ಷಣ ಕಾರ್ಯ ತೀವ್ರಗೊಳಿಸಿದೆ.
ಮುಂಬಯಿಯಲ್ಲೂ ಮಳೆ: ಅರಬಿ ಸಮುದ್ರದಲ್ಲೂ ವಾಯುಭಾರ ಕುಸಿತ ಉಂಟಾಗಿದ್ದು ಮುಂದಿನ 48 ಗಂಟೆಗಳಲ್ಲಿ ಮುಂಬಯಿ ಸೇರಿದಂತೆ ದಕ್ಷಿಣ ಕೊಂಕಣ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರ, ಕೊಂಕಣ ತೀರ, ದ. ಗುಜರಾತ್ ತೀರಗಳಿಗೆ ಸೈಕ್ಲೋನ್ ಅಪ್ಪಳಿಸಲಿದೆ.
ತೆಲಂಗಾಣದಲ್ಲಿ 50 ಪ್ರಾಣಹಾನಿ
ವರುಣನ ಅಟ್ಟಹಾಸದಿಂದಾಗಿ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದಾರೆ ಎಂದು ತೆಲಂಗಾಣ ಸರಕಾರ ತಿಳಿಸಿದೆ. “5 ಸಾವಿರ ಕೋಟಿ ರೂ. ಆಸ್ತಿಪಾಸ್ತಿಗೆ ರಣಮಳೆ ಹಾನಿ ಮಾಡಿದೆ. ಕೇಂದ್ರ ಸರಕಾರದಿಂದ ಕೂಡಲೇ 1350 ಕೋಟಿ ತುರ್ತು ಪರಿಹಾರವನ್ನು ಘೋಷಿಸಬೇಕು’ ಎಂದು ಕೋರಿ ಸಿಎಂ ಕೆ. ಚಂದ್ರಶೇಖರ ರಾವ್, ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ