ಪ್ರವಾಹದ ನೀರಿನಿಂದಾಗಿ ಮರವೇರಿ ಕುಳಿತಿದ್ದ ಶತಾಯುಷಿ ವೃದ್ಧೆ, ಮಗನ ರಕ್ಷಣೆ
Team Udayavani, Oct 16, 2020, 2:50 PM IST
ವಿಜಯಪುರ: ಜಿಲ್ಲೆಯ ಗಡಿಯಲ್ಲಿ ಪ್ರವಾಹ ಸೃಷ್ಡಿಸಿರುವ ಭೀಮಾ ನದಿ ನೀರಿನಿಂದ ರಕ್ಷಿಸಿಕೊಳ್ಳಲು ಮರವೇರಿ ಕುಳಿತಿದ್ದ ಶತಾಯುಷಿ ವೃದ್ಧೆ ಹಾಗೂ ಆಕೆಯ ಮಗನನ್ನು ರಕ್ಷಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.
ಭೀಮಾ ನದಿ ತೀರದಲ್ಲಿರುವ ಇಂಡಿ ತಾಲೂಕಿನ ಹಿಂಗಣಿ ಗ್ರಾಮದ 110 ವರ್ಷದ ವೃದ್ಧೆ ನೀಲವ್ಬ ಹಾಗೂ ಆಕೆಯ ಮಗ 60 ವರ್ಷದ ಶಿವಮಲ್ಲಪ್ಪ ಅವರನ್ನು ರಕ್ಷಿಸಲಾಗಿದೆ.
ಪ್ರವಾಹದ ಕಾರಣ ನೀರಿನಿಂದ ರಕ್ಷಿಸಿಕೊಳ್ಳಲು ವೃದ್ಧ ತಾಯಿ-ಮಗ ಇಬ್ಬರೂ ಮರ ಏರಿ ಕುಳಿತಿದ್ದರು.
ಇದನ್ನೂ ಓದಿ:ಕೃಷ್ಣ ನದಿಗೆ ಮತ್ತಷ್ಟು ನೀರು: ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ
ಮಹಾರಾಷ್ಟ್ರ ರಾಜ್ಯದ ಉಜನಿ ಹಾಗೂ ವೀರ ಜಲಾಶಯದಿಂದ ರಾತ್ರಿಯಿಂದ 3.50 ಲಕ್ಷ ಕ್ಯೂಸೆಕ್ ನೀರು ಭೀಮಾ ನದಿಗೆ ಹರಿದು ಬತುತ್ತಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮೆ ವಿಜಯಪುರ ಜಿಲ್ಲೆಯಲ್ಲಿ ಭೀಕರ ಪ್ರವಾಹ ಸೃಷ್ಟಿಸಿದೆ.
ಹೀಗಾಗಿ ಶುಕ್ರವಾರ ಬೆಳಿಗ್ಗೆ ರಕ್ಷಣಾ ಕಾರ್ಯಾಚರಣೆಗೆ ಮುಂದಾದ ರಕ್ಷಣಾ ತಂಡಕ್ಕೆ ಗ್ರಾಮಸ್ತರು ವೃದ್ದ-ತಾಯಿ ಮಗ ಪ್ರವಾಹದಿಂದ ರಕ್ಷಿಸಿಕೊಳ್ಳಲು ಮರ ಏರಿ ಕುಳಿತಿರುವ ಮಾಹಿತಿ ನೀಡಿ, ರಕ್ಷಣೆಗೆ ಸಹಕರಿಸದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ