ಸರಳ ದಸರಾ ಆಚರಣೆಗೆ ನಿರ್ಧಾರ


Team Udayavani, Oct 16, 2020, 6:57 PM IST

sm-tdy-1

ಭದ್ರಾವತಿ: ಕೋವಿಡ್ ಕಾರಣ ಈ ಬಾರಿ ಮೆರವಣಿಗೆ ಇಲ್ಲದೆ ಒಂಬತ್ತು ದಿನಗಳ ಕಾಲ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸಲಾಗುವುದು ಎಂದು ಪೌರಾಯುಕ್ತ ಮನೋಹರ್‌ ಹೇಳಿದರು.

ಮಂಗಳವಾರ ನಗರಸಭೆಯ ಸರ್‌.ಎಂ.ವಿ. ಸಭಾಂಗಣದಲ್ಲಿ ನಗರದ ವಿವಿಧ ದೇವಾಲಯಗಳ ಸಮಿತಿ ಮತ್ತು ಅಧಿಕಾರಿಗಳ ಸಭೆಯಲ್ಲಿಮಾತನಾಡಿದ ಅವರು, ಅ. 17 ರಂದುಬೆಳಗ್ಗೆ 10.30 ಕ್ಕೆ ಗ್ರಾಮ ದೇವತೆಹಳದಮ್ಮ ದೇವಾಲಯದಲ್ಲಿ ನಿವೃತ್ತ

ಸೈನಿಕರು, ಕೋವಿಡ್ ವಾರಿಯರ್5 ಮಂದಿ ಸೇರಿದಂತೆ ಶ್ರೀದೇವತೆಗೆ ಮತ್ತು ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್‌ ಚಾಲನೆ ನೀಡಲಿದ್ದಾರೆ.  ಹಳೇನಗರದ ಕನಕ ಮಂಟಪಮೈದಾನದಲ್ಲಿ ಅ. 26 ರಂದು ಸಂಜೆ 6 ಗಂಟೆಗೆ ನಡೆಯುವ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಗ್ರಾಮ ದೇವತೆಗಳಾದ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ, ಹಳದಮ್ಮ, ಕಾಳಿಕಾಂಬ ದೇವರುಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿಜಯ ದಶಮಿಯಂದು ನಡೆಯುತ್ತಿದ್ದ ದೇವಾನುದೇವತೆಗಳ ಮೆರವಣಿಗೆ ಮತ್ತು ಸಾಂಸ್ಕೃತಿಕ ಮೇಳಗಳನ್ನು ಕೋವಿಡ್ ನಿಮಿತ್ತ ಈ ವರ್ಷ ರದ್ದುಪಡಿಸಲಾಗಿದೆ. ಜನರಲ್ಲಿ ಕೋವಿಡ್ ಕುರಿತಂತೆ ಜಾಗೃತಿ ಮೂಡಿಸುವ ಸಲುವಾಗಿ 9ದಿನಗಳ ಕಾಲ ಜಾಥಾನಡಿಗೆ, ಅನುಭವ-ಅನಿಸಿಕೆಗಳ ಜೊತೆಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಬನ್ನಿಮುಡಿಯುವ ಸ್ಥಳಕ್ಕೆ ಕೇವಲ ಪ್ರಮುಖ 100 ಜನರಿಗೆ ಮಾತ್ರ ಪಾಸ್‌ ನೀಡುವ ಮೂಲಕ ಅವಕಾಶ ಕಲ್ಪಿಸಲಾಗುವುದು ಎಂದರು.

ಕಂದಾಯಾಧಿಕಾರಿ ರಾಜಕುಮಾರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಇಇ ಶ್ರೀರಂಗರಾಜಪುರಿ, ಲೆಕ್ಕಾಧಿಕಾರಿ ಮಹಮ್ಮದ್‌ ಅಲಿ ಇದ್ದರು. ಸಭೆಯಲ್ಲಿ ನರಸಿಂಹಾಚಾರ್‌,ಶ್ರೀನಿವಾಸ್‌, ಕೃಷ್ಣಪ್ಪ, ಬಿ.ಕೆ. ಶ್ರೀನಾಥ್‌, ಹಾ. ರಾಮಪ್ಪ, ರಮಾಕಾಂತ್‌, ಸಂತೋಷ್‌ಕುಮಾರ್‌, ಮಂಜು, ಎನ್‌. ಕೃಷ್ಣಮೂರ್ತಿ ಮತ್ತಿತರರು ಇದ್ದರು.

ಗೋಮಾಳ ಒತ್ತುವರಿ: ಕ್ರಮಕ್ಕೆ  ಆಗ್ರಹ

ಸಾಗರ: ತಾಲೂಕಿನ ಕಸಬಾ ಹೋಬಳಿ ನಾಡಕಲಸಿಗ್ರಾಪಂ ವ್ಯಾಪ್ತಿಯ ಬಾಳಗೋಡು ಗ್ರಾಮದ ಸೊಪ್ಪಿನ ಬೆಟ್ಟ ಅತಿಕ್ರಮಣ ಮಾಡುತ್ತಿರುವುದು ಹಾಗೂ ಸರ್ಕಾರಿ ಗೋಮಾಳ ಒತ್ತುವರಿ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಬಾಳಗೋಡು ಗ್ರಾಮಸ್ಥರು ಉಪ ವಿಭಾಗಾ ಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು.

ಬಾಳಗೋಡು ಗ್ರಾಮದ ಸರ್ವೇ ನಂ. 5ರಲ್ಲಿ 136.17 ಎಕರೆ ಸರ್ಕಾರಿ ಸೊಪ್ಪಿನ ಬೆಟ್ಟ ಪ್ರದೇಶವಿದ್ದು,ಅದನ್ನು ಗ್ರಾಮಸ್ಥರಾದ ನಾವು ಲಾಗಾಯ್ತಿನಿಂದ ಸಂರಕ್ಷಣೆ ಮಾಡಿಕೊಂಡು ಬರುತ್ತಿದ್ದೇವೆ. ಇತ್ತೀಚೆಗೆ ಪಕ್ಕದ ಗ್ರಾಮದ ಕೆಲವರು ಸೊಪ್ಪಿನ ಬೆಟ್ಟವನ್ನು ಒತ್ತುವರಿ ಮಾಡಿ ಅಲ್ಲಿರುವ ಮರಗಿಡಗಳನ್ನು ಕಡಿದು ಕೃಷಿ ಮಾಡುತ್ತಿದ್ದಾರೆ. ನೈಸರ್ಗಿಕವಾದ ಸೊಪ್ಪಿನ ಬೆಟ್ಟವನ್ನು ನಾಶ ಮಾಡುತ್ತಿರುವ ಅತಿಕ್ರಮಣದಾರರು ಭೂಕಬಳಿಕೆ ಮಾಡುತ್ತಿದ್ದಾರೆ.ಸೊಪ್ಪಿನ ಬೆಟ್ಟವು ಸರ್ಕಾರಿ ಜಾಗವಾಗಿದ್ದು ಗ್ರಾಮಸ್ಥರ  ಹಕ್ಕಿನ ಆಸ್ತಿಯಾಗಿದೆ. ಕಂದಾಯ ಇಲಾಖೆ ಸೊಪ್ಪಿನಬೆಟ್ಟ ರಕ್ಷಣೆ ಮಾಡುವ ನಿಟ್ಟಿನಲ್ಲಿ ಅತಿಕ್ರಮಣವನ್ನು ತೆರವುಗೊಳಿಸಿ ಒತ್ತುವರಿದಾರರ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.

ಗ್ರಾಮಸ್ಥರಾದ ಶಿವಕುಮಾರ್‌, ದಾನಶೇಖರ ಗೌಡ, ಮೋಹನ್‌ ಗೌಡ, ದೇವರಾಜ್‌ ಗೌಡ, ಶೇಖರಪ್ಪ ಬಾಳಗೋಡು, ಅಮೃತೇಶ್ವರ, ಶಶಿಧರ ಗೌಡ, ರಾಜಶೇಖರ್‌, ಪುಟ್ಟರಾಜ್‌, ಪ್ರವೀಣ್‌, ರಮೇಶ್‌, ನ್ಯಾಯವಾದಿ ಕೆ.ವಿ. ಪ್ರವೀಣಕುಮಾರ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.