ಮಳೆಗೆ ನೆಲಕಚ್ಚಿದ ಮೆಕ್ಕೆ ಜೋಳದ ಬೆಳೆ


Team Udayavani, Oct 17, 2020, 4:48 PM IST

HASAN-TDY-2

ಆಲೂರು: ತಾಲೂಕಾದ್ಯಂತ ಕೆಲ ದಿನಗಳಿಂದ ಸುರಿದ ಮಳೆಯಿಂದ ಮೆಕ್ಕೆ ಜೋಳ ಸೇರಿಇತರೆ ಬೆಳೆ ಸಂಪೂರ್ಣ ನಾಶವಾಗಿದ್ದು, ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ಕೆ.ಎಸ್‌.ಮಂಜೇ ಗೌಡ ಅಭಿಪ್ರಾಯಪಟ್ಟರು.

ತಾಲೂಕಿನಲ್ಲಿಮಳೆಯಿಂದಹಾನಿಗೊಳಗಾದ ರೈತರ ಜಮೀನಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಸುದ್ದಿಗಾರರೊಂದಿಗೆ ಮಾತನಾಡಿ, ಆಗಸ್ಟ್‌ನಲ್ಲಿ ಸುರಿದ ಗಾಳಿ ಮಳೆಯಿಂದಾಗಿ ಶೇ.60 ಮೆಕ್ಕೆಜೋಳ ಸಂಪೂರ್ಣ ನೆಲಕಚ್ಚಿತ್ತು. ಅಳಿದುಳಿದ ಬೆಳೆಕೈ ಸೇರುವಷ್ಟರಲ್ಲಿಮತ್ತೆ ಮಳೆ ಬಂದು ಸಂಪೂರ್ಣ ನಾಶವಾಗಿದೆ ಎಂದು ಹೇಳಿದರು.

ಬೆಂಬಲ ಬೆಲೆಘೋಷಿಸಿ: ಜೋಳ ಸಂಪೂರ್ಣ ನೆಲಕ್ಕೆ ಉರುಳಿರುವುದರಿಂದ ಹೊಲದಲ್ಲಿಯೇ ಜೋಳ ಮೊಳಕೆ ಆಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಾನಿಗೆ ಒಳಗಾದ ರೈತರು ಬೆಳೆದ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆಘೋಷಿಸಿ, ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಗಾಯದ ಮೇಲೆ ಬರೆ: ತಾಪಂ ಸದಸ್ಯ ನಟರಾಜ್‌ ನಾಕಲಗೋಡು ಮಾತನಾಡಿ, ತಾಲೂಕಿನ‌ಲ್ಲಿ ಸುರಿಯುತ್ತಿರುವ ಮಳೆ ಭಾರೀ ಅವಾಂತರವನ್ನೇಸೃಷ್ಟಿಸಿದೆ. ರೈತರ ಬದುಕಿಗೆ ಕೊಳ್ಳಿ ಇಟ್ಟಿದೆ. ಜುಲೈ, ಆಗಸ್ಟ್ ನಲ್ಲಿ ಸುರಿದ ಮಳೆ ಯಿಂದ ರೈತರು ಬೆಳೆ ಕಳೆದುಕೊಂಡು ಕಂಗಾಲಾಗಿದ್ದರು. ಪುನಃ ಮಳೆ ಬಂದು ಅಳಿದುಳಿದ ಮೆಕ್ಕೆಜೋಳ ನಾಶವಾಗಿ, ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಹೇಳಿದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ತಿಮ್ಮಣ್ಣಗೌಡಗೆ ಜಿಲ್ಲಾಎಪಿಎಂಸಿ ಅಧ್ಯಕ್ಷ ಮಂಜೇಗೌಡ ಹಾಗೂ ನಟರಾಜ್‌ ನಾಕಲ ಗೋಡು ಹಾನಿಗೊಳಗಾದ ಮೆಕ್ಕೆಜೋಳದ ಹೊಲ ಹಾಗೂ ಕಟಾವು ಮಾಡಿದ್ದ ಮೆಕ್ಕೆ ಜೋಳದ ರಾಶಿಯೊಳಗೆ ಫ‌ಂಗಲ್ಸ್‌ ಹಾಗೂ ಮೊಳಕೆಯೊಡೆದ ಜೋಳ ತೋರಿಸಿ ಸರ್ಕಾರಕ್ಕೆ ಪ್ರಾಮಾಣಿಕವಾಗಿ ವರದಿಸಲ್ಲಿಸುವಂತೆ ಮನವಿ ಮಾಡಿದರು. ಎಪಿಎಂಸಿ ಸದಸ್ಯ ರಾಜನಾಯ್ಕ, ಜೆಡಿಎಸ್‌ ಮುಖಂಡ ಜೈಪಾಲ್‌ ಇತರರಿದ್ದರು.

ಆನೆ ದಾಳಿಗೆ ತುತ್ತಾದ ಬೆಳೆ ಪರಿಹಾರಕ್ಕೆಕ್ರಮ :

ಬೇಲೂರು: ತಾಲೂಕಿನ ಮಲೆನಾಡುಭಾಗ ಅರೇಹಳ್ಳಿ, ಬಿಕ್ಕೋಡು ಹೋಬಳಿಯ 10 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕಾಡಾನೆಗಳು ತೋಟ, ಹೊಲ ಗದ್ದೆಗೆ ನುಗ್ಗಿ ಬೆಳೆನಾಶ ಮಾಡಿದ್ದು, ರೈತರಿಗೆ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಶೀಘ್ರ ಪರಿಹಾರಒದಗಿಸುವುದಾಗಿ ಶಾಸಕ ಕೆ.ಎಸ್‌. ಲಿಂಗೇಶ್‌ ಭರವಸೆ ನೀಡಿದರು.

ಕಾಡಾನೆಯಿಂದ ಬೆಳೆ ಹಾನಿಯಾದ ತಾಲೂಕಿನ ಮಲೆನಾಡು ಭಾಗದ ಗ್ರಾಮದ ತೋಟ, ಗದ್ದೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಆನೆಗಳ ದಾಳಿಯಿಂದ ಅಪಾರ ಪ್ರಮಾಣದಲ್ಲಿ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಕಂದಾಯ, ಕೃಷಿ, ತೋಟಗಾರಿಕೆ, ಅರಣ್ಯ ಅಧಿಕಾರಿಗಳು ನಷ್ಟದಅಂದಾಜುಪಟ್ಟಿ ತಯಾರಿಸಬೇಕು ಎಂದು ಸೂಚಿಸಿದರು.

ರೈತರಿಗೆ ಸೂಕ್ತ ಪರಿಹಾರ ನೀಡಲು ಸರ್ಕಾರದಮೇಲೆಒತ್ತಡಹಾಕಲಾಗುವುದು. ಆನೆಗಳು ತಾಲೂಕಾದ್ಯಂತ ಸಂಚರಿ ಸುತ್ತಿದ್ದು, ಕಾಫಿ ತೋಟ, ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿವೆ. ಬೆಳೆ ನಷ್ಟದಿಂದ ರೈತರು ಜೀವನಕ್ಕೆ ತೊಂದರೆ ಉಂಟಾಗಿದೆ. ಈಗಾಗಲೇ ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಕಾಡಿಗೆ ಸ್ಥಳಾಂತರಿಸಲು ಶ್ರಮವಹಿಸಿದ್ದಾರೆ ಎಂದು ಹೇಳಿದರು.

ವಲಯ ಅರಣ್ಯ ಅಧಿಕಾರಿ ಯಶ್ಮಾ ಮಾಚಮ್ಮ ಮಾತನಾಡಿ, ವಾರದಿಂದಬೇಲೂರು ವಲಯ ವ್ಯಾಪ್ತಿಯಲ್ಲಿ 25 ಆನೆಗಳು ಬೀಡುಬಿಟ್ಟಿದ್ದು, ಅದರಲ್ಲಿ ಎರಡು ಭಾಗಗಳಾಗಿ ಸಂಚರಿಸುತ್ತಿವೆ. ಶಿರಗುರ, ನಾರ್ವೆ, ತುಂಬದೇವನಹಳ್ಳಿ ಸುತ್ತಮುತ್ತಲ ಗ್ರಾಮಗಳಲ್ಲಿ ಸಂಚರಿಸಿ ಲಕ್ಷಾಂತರ ರೂ. ನಷ್ಟ ಉಂಟುಮಾಡುತ್ತಿವೆ.ಈಗಾಗಲೇಅರಣ್ಯ ಸಿಬ್ಬಂದಿನಷ್ಟದ ಅಂದಾಜು ಪಟ್ಟಿ ಮಾಡುತ್ತಿದ್ದಾರೆ.

ಆಲೂರು ಮತ್ತು ಬೇಲೂರಿನಿಂದ 20 ಅರಣ್ಯ ಸಿಬ್ಬಂದಿಗಳೊಂದಿಗೆ ಆನೆ ಓಡಿಸುವಕೆಲಸ ಮಾಡುತ್ತಿದ್ದೇವೆ ಎಂದರು.ಈವೇಳೆತಾಪಂಸದಸ್ಯಸೋಮಯ್ಯ,ಜೆಡಿಎಸ್‌ ಮುಖಂಡರಾದ ನಟರಾಜ್‌, ಸವೀನ್‌, ಕೇಶವಮೂರ್ತಿ, ಸುಗನ್‌ ರಾಜ್‌, ಸಂದೇಶ್‌, ಸಂತೋಷ್‌ಇತರರು ಇದ್ದರು.

ಟಾಪ್ ನ್ಯೂಸ್

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.