ಕೃಷಿ ಕ್ಷೇತ್ರದಲ್ಲಿ ಪರಿಸರಸ್ನೇಹಿ ಅವಿಷ್ಕಾರಗಳು ನಡೆಯುತ್ತಿರಬೇಕು : ಸಚಿವ ಸದಾನಂದ ಗೌಡ


Team Udayavani, Oct 17, 2020, 9:07 PM IST

ರೈತರು ರಸಗೊಬ್ಬರ ಬಳಕೆ ಕಡಿಮೆ ಮಾಡಿ ಸಾವಯವ ಕೃಷಿಗೆ ಒತ್ತು ನೀಡಬೇಕು: ಸಚಿವ ಸದಾನಂದ ಗೌಡ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ನಿರಂತರವಾಗಿ ಅವಿಷ್ಕಾರಗಳು ನಡೆಯುತ್ತಿರಬೇಕು. ಆದರೆ ಅವು ಪರಿಸರ ಸ್ನೇಹಿಯಾಗಿರಬೇಕು. ಬೇಸಾಯ ಸುಸ್ಥಿರವಾಗಿರಬೇಕು ಎಂದಾದರೆ ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಕರೆ ನೀಡಿದ್ದಾರೆ.

ಭಾರತೀಯ ಕೈಗಾರಿಕೆಗಳ ಒಕ್ಕೂಟವು (ಸಿಐಐ) ಆಶ್ರಯದಲ್ಲಿ ಸಂಘಟಿಸಲಾಗಿರುವ “ಸಿಐಐ ಎಗ್ರೋ ಹಾಗೂ ಫೂಡ್‌ ಟೆಕ್‌ 2020” ವರ್ಚವಲ್‌ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡಿದ ಸಚಿವ ಸದಾನಂದ ಗೌಡ ಅವರು ದೀರ್ಘಕಾಲದವರೆಗೆ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಸಾವಯವ ಕೃಷಿ ಅನಿವಾರ್ಯ ಎಂದರು.

ರೈತರಿಗೆ ಬೇಸಾಯ ಮಾಡುವಲ್ಲಿ ಬೇಕಾದ ಬೀಜ, ಗೊಬ್ಬರ ನೀರು ಮುಂತಾದ ಮೂಲಸಾಮಗ್ರಿಗಳು ಹಾಗೂ ಬೇಸಾಯವನ್ನು ಸುಲಭಗೊಳಿಸುವ ತಂತ್ರಜ್ಞಾನನ್ನು ಒದಗಿಸುವಲ್ಲಿ ಸರ್ಕಾರದೊಂದಿಗೆ ಖಾಸಗಿ ಕಂಪನಿಗಳು ಸಕ್ರೀಯವಾಗಿ ಕೈಜೋಡಿಸುವುದು ಅವಶ್ಯಕವಾಗಿದೆ. ಕೃಷಿಗೆ ಪೂರಕ ವಾತಾವರಣ ಮೂಡಿಸುವ ಹೊಣೆಗಾರಿಕೆ ಸರ್ಕಾರ ಹಾಗೂ ಖಾಸಗಿ ವಲಯಗಳೆರಡರ ಮೇಲೂ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ:ನೆರೆ ಹಾವಳಿಯಿಂದ ಕರ್ನಾಟಕ ನಲುಗಿ ಹೋದರೂ ಸರಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ: ಸಿದ್ದು

ಎಲ್ಲ ಅನಾನುಕೂಲ ವಾತಾವರಣಗಳ ಮಧ್ಯೆಯೂ ಕೃಷಿ ವಲಯಯವು ಉತ್ತಮ ಪ್ರಗತಿ ಸಾಧಿಸುತ್ತಿದೆ. ಈ ಬಾರಿ, ಸಕಾಲದಲ್ಲಿ ಬಂದ ಉತ್ತಮ ಮಳೆಯಿಂದ ಬಿತ್ತನೆ ಪ್ರದೇಶ ಬಹಳಷ್ಟು ಹೆಚ್ಚಾಗಿದೆ. ಹೀಗಾಗಿ ರಸಗೊಬ್ಬರ ಬೇಡಿಕೆಯಲ್ಲೂ ಹೆಚ್ಚಾಗಿದೆ. ಆದರೆ ನಮ್ಮ ಇಲಾಖೆಯು ಉತ್ಪಾದನೆ, ಸಾಗಣೆಗೆ ಸಂಬಂಧಿಸಿದಂತೆ ಸಕಾಲದಲ್ಲಿ ಕೈಗೊಂಡ ಕ್ರಮಗಳಿಂದಾಗಿ ದೇಶಾದ್ಯಂತ ಅತ್ಯಂತ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ನಡೆಯಿತು ಎಂದು ಅವರು ತಿಳಿಸಿದರು.

ಪ್ರಧಾನಿಯವರ ಆಶಯದಂತೆ ರಸಗೊಬ್ಬರ ವಲಯದಲ್ಲಿ ಸಂಪೂರ್ಣ ಸ್ವಾಲಂಬನೆ ಗಳಿಸುವಲ್ಲಿ ನಮ್ಮ ರಸಗೊಬ್ಬರ ಇಲಾಖೆಯು ಅನೇಕ ಕ್ರಮಗಳನ್ನು ಕೈಗೊಂಡಿದೆ. ಪೊಟಾಷ್‌ ಗೊಬ್ಬರಕ್ಕೆ ಸಂಬಂಧಿಸಿದಂತೆ ನಾವು ಬಹುತೇಕ ಆಮದನ್ನೇ ಅವಲಂಬಿಸಿದ್ದೇವೆ. ಆದರೆ ಶೇಕಡಾ ೮೦ರಷ್ಟು ಯೂರಿಯಾ ಸ್ವದೇಶದಲ್ಲಿಯೇ ಉತ್ಪಾದನೆ ಮಾಡುತ್ತಿದ್ದೇವೆ. ಪೊಸ್ಫೆಟಿಕ್‌ ನಮೂನೆಯ ಗೊಬ್ಬರ ಅರ್ಧದಷ್ಟು ನಮ್ಮಲ್ಲಿಯೇ ಉತ್ಪಾದನೆ ಆಗುತ್ತದೆ. ರಸಗೊಬ್ಬರಕ್ಕೆ ಅಗತ್ಯವಾದ ಕಚ್ಚಾವಸ್ತುಗಳನ್ನು ನೇರ ಆವಕಕ್ಕೆ ಪ್ರಯತ್ನಿಸಲಾಗುತ್ತಿದೆ. ವಿದೇಶೀ ಕಂಪನಿಗಳ ಜೊತೆ ಪಾಲುಗಾರಿಕೆ ಹೊಂದಲು ಭಾರತದ ಖಾಸಗಿ ರಸಗೊಬ್ಬರ ಕಂಪನಿಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಸಚಿವ ಸದಾನಂದ ಗೌಡ ವಿವರಿಸಿದರು.

ಇದನ್ನೂ ಓದಿ: ಬಾಲಿವುಡ್ ನಟಿ ಕಂಗನಾ ಹಾಗೂ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ FIR ದಾಖಲು

ರಸಗೊಬ್ಬರ ಇಲಾಖೆಯು ದೇಶಾದ್ಯಂತ ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ಹಾಗೂ ಕರಾರುವಕ್ಕಾಗಿ ಕೈಗೊಳ್ಳಲು ಉನ್ನತ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ. ರೈತರಿಗೆ ದೊರೆಯುವ ರಿಯಾಯತಿ ಸೋರಿಕೆಯಾಗದಂತೆ ತಡೆಯಲು ನೇರ ನೆರವು ವರ್ಗಾವಣೆ ವ್ಯವಸ್ಥೆಯನ್ನು (ಡಿಬಿಟಿ ಸಿಸ್ಟಮ್) ಅಳವಡಿಸಿಕೊಳ್ಳಲಾಗಿದೆ. ಮೇಲಿಂದಮೇಲೆ ಈ ತಂತ್ರಾಂಶ/ದತ್ತಾಂಶಗಳನ್ನು ಉನ್ನತೀಕರಣಗೊಳಿಸಲಾಗುತ್ತಿದ್ದು “ಗವರ್ನನ್ಸ್‌ ಡಿಜಿಟಲ್‌ ಟ್ರಾನ್ಸಫೊರ್ಮೇಶನ್‌ ಅವಾರ್ಡ್‌” ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಇಲಾಖೆ ಭಾಜನವಾಗಿದೆ ಎಂದು ಸದಾನಂದ ಗೌಡ ತಿಳಿಸಿದರು.

ಸಿಐಐ ಟೆಕ್‌ ಮೇಳದ ಅಧ್ಯಕ್ಷ ಶ್ರೀ ಅಜಯ್‌ ಎಸ್‌ ಶ್ರೀರಾಮ್‌, ಸಮ್ಮೇಳನದ ಸಂಚಾಲಕ ಡಾ, ಅರವಿಂದ್ ಕಪೂರ್‌, ಇಲಾಖಾ ಕಾರ್ಯದರ್ಶಿ ಛಬಿಲೇಂದ್ರ ರೌಲ್‌ ಮುಂತಾದವರು ಪಾಲ್ಗೊಂಡರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.