ಕಲಬುರಗಿ: ಭೀಮಾ ನದಿ ಪ್ರವಾಹ ಸಂತ್ರಸ್ತರ ರಕ್ಷಣೆಗೆ ಭಾರತೀಯ ಯೋಧರ ತಂಡ
Team Udayavani, Oct 17, 2020, 9:27 PM IST
ಕಲಬುರಗಿ: ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹದಿಂದ ಜನರನ್ನು ರಕ್ಷಿಸಲು ಭಾರತೀಯ ಸೇನೆ ಶನಿವಾರ ಬಂದಿಳಿದೆ. ಸಿಖಂದರಾಬಾದ್ ನಿಂದ ಮೇಜರ್ ಮಾರ್ಟಿನ್ ಅರವಿಂದ ಅವರ ನೇತೃತ್ವದ 98 ಜನ ಯೋಧರ ತಂಡ ಆಗಮಿಸಿದೆ.
ಮಹಾರಾಷ್ಟ್ರದಿಂದ ದಾಖಲೆ ಪ್ರಮಾಣದಲ್ಲಿ ಭೀಮಾ ನದಿಗೆ ನೀರು ಹರಿಸಲಾಗುತ್ತಿದ್ದು, ಶನಿವಾರ ಬರೋಬ್ಬರಿ ಎಂಟು ಲಕ್ಷ ಕ್ಯೂಸೆಕ್ ಹರಿದು ಬಂದಿದೆ. ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ ಬರುವ ಭಾರಿ ಪ್ರಮಾಣದ ನೀರನ್ನು ಅಷ್ಟೇ ಪ್ರಮಾಣದಲ್ಲಿ ನದಿಗೆ ಹರಿ ಬಿಡಲಾಗುತ್ತಿದ್ದು, ನದಿ ಪಾತ್ರದ 157 ಗ್ರಾಮಗಳಿಗೆ ಜಲ ಕಂಟಕ ಎದುರಾಗಿದೆ.
ಭೀಕರ ಪ್ರವಾಹದಲ್ಲಿ ಸಿಲುಕಿ ಜನರು ಜೀವ ರಕ್ಷಣೆಗಾಗಿ ಪರದಾಡುತ್ತಿದ್ದಾರೆ. ಈಗಾಗಲೇ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ಮತ್ತು ಅಗ್ನಿ ಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಜನರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಈಗ ಭಾರತೀಯ ಸೇನೆ ನೆರವಿಗೆ ಆಗಮಿಸಿದ್ದು, ಜಿಲ್ಲಾಡಳಿತದ ಪರವಾಗಿ ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ ಸೇನಾ ತುಕಡಿಯನ್ನು ಬರಮಾಡಿಕೊಂಡರು.
ಇದನ್ನೂ ಓದಿ:ಕೃಷಿ ಕ್ಷೇತ್ರದಲ್ಲಿ ಪರಿಸರಸ್ನೇಹಿ ಅವಿಷ್ಕಾರಗಳು ನಡೆಯುತ್ತಿರಬೇಕು : ಸಚಿವ ಸದಾನಂದ ಗೌಡ
ಶನಿವಾರ ರಾತ್ರಿಯಿಂದಲೇ ಸೇನಾ ಪಡೆ ರಕ್ಷಣಾ ಕಾರ್ಯಕ್ಕೆ ಧುಮುಕಲಿದೆ. 98 ಜನ ಯೋಧರು ಮೂರು ತಂಡಗಳಾಗಿ ಅಫಜಲಪೂರ, ಜೇವರ್ಗಿ ಹಾಗೂ ಶಹಾಬಾದ ತಾಲೂಕಿನಲ್ಲಿ ಜನರ ರಕ್ಷಣಾ ಕಾರ್ಯಾಚರಣೆಗೆ ಇಳಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ