ಹೆಸ್ಕಾಂ ವಿದ್ಯುತ್ ಗುತ್ತಿಗೆದಾರರಿಂದ ಪ್ರತಿಭಟನೆ
ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತ ವ್ಯಾಪ್ತಿಯ ಎಲ್ಲ ಜಿಲ್ಲೆಗಳ ಗುತ್ತಿಗೆದಾರರು ಭಾಗಿ
Team Udayavani, Oct 18, 2020, 1:42 PM IST
ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ನಡೆಸಿದ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಯಮಿತ ವ್ಯಾಪ್ತಿಯಲ್ಲಿ ಬರುವ ಎಲ್ಲ ಜಿಲ್ಲೆಗಳ ಗುತ್ತಿಗೆದಾರರು ಆಗಮಿಸಿದ್ದರು. ಪ್ರಮುಖ ಬೇಡಿಕೆಗಳಾದ ಗುತ್ತಿಗೆದಾರರಿಗೆ 1 ಲಕ್ಷದಿಂದ 5 ಲಕ್ಷದವರೆಗೆ ವಿದ್ಯುತ್ ಕಾಮಗಾರಿಗಳ ತುಂಡು ಗುತ್ತಿಗೆಯಾಗಿ ನೀಡಬೇಕು, ವಸತಿ, ವಾಣಿಜ್ಯ ಕೈಗಾರಿಕೆ ಇತರೆ ಕಟ್ಟಡಗಳ ವಿದ್ಯುತ್ ಸಂಪರ್ಕಕ್ಕೆ ಓಸಿ ಸಲ್ಲಿಸುವಂತೆ ಕೇಳುತ್ತಿರುವುದರಿಂದ ಗ್ರಾಹಕರಿಗೆ ತೊಂದರೆಯಾಗುತ್ತಿದೆ. ಗಂಗಾ ಕಲ್ಯಾಣ, ಕುಡಿಯುವ ನೀರು, ಸರ್ವಿಸ್ ಮೇನ್ ಕಾಮಗಾರಿಗಳನ್ನು ಒಟ್ಟುಗೂಡಿಸಿ ಬೃಹತ್ ಮೊತ್ತದ ಟೆಂಡರ್ ಕೆಲವು ಬಂಡವಾಳಶಾಹಿ ಗುತ್ತಿಗೆದಾರರಿಗೆ ನೀಡುತ್ತಿರುವುದನ್ನು ಕೂಡಲೇ ಕೈ ಬಿಡಬೇಕು, ಖಾಸಗೀಕರಣ ಆಗದಂತೆ ತಡೆಯಬೇಕು, ಅತಿವೃಷ್ಟಿ-ಅನಾವೃಷ್ಟಿ ಸಂದರ್ಭದಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿದಾಗ ಅಂದಾಜು ಪಟ್ಟಿಪಡೆಯದೇ ಸ್ಥಳೀಯ ಗುತ್ತಿಗೆದಾರರಿಂದ ಕೆಲಸಮಾಡಿಸಿಕೊಂಡು ಕೋಟ್ಯಂತರ ರೂ.ಗಳ ಬಾಕಿಉಳಿಸಿಕೊಂಡಿರುವುದು ಕೂಡಲೇ ಪಾವತಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಕುರಿತು ಮುಂಚಿತ ಮಾಹಿತಿ ನೀಡಿ ಕಚೇರಿಗೆ ಆಗಮಿಸಿದರೂ ವ್ಯವಸ್ಥಾಪಕ ನಿರ್ದೇಶಕರಿಲ್ಲದೇ ಇರುವುದನ್ನು ಖಂಡಿಸಿ ಗುತ್ತಿಗೆದಾರರು ಕೆಲವು ಹೊತ್ತು ಪ್ರತಿಭಟನೆ ನಡೆಸಿದರು.
ನಂತರ ಆಗಮಿಸಿದ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮುನಿರಾಜು ಅವರು, ಗುತ್ತಿಗೆದಾರರ ಸಮಸ್ಯೆ ಆಲಿಸಿ, ಬೃಹತ್ ಟೆಂಡರ್ ಪ್ರಕ್ರಿಯೆಯನ್ನು ತಡೆದು ತುಂಡು ಗುತ್ತಿಗೆ ನೀಡಲಾಗುವುದು. 1 ಲಕ್ಷದಿಂದ 5 ಲಕ್ಷ ರೂ. ಗಳವರೆಗೆ ಗುತ್ತಿಗೆದಾರರಿಗೆ ಸಣ್ಣ ಕಾಮಗಾರಿ ನೀಡಲಾಗುವುದೆಂದು ಭರವಸೆ ನೀಡಿದರು. ನಂತರ ಇನ್ನಿತರೆ ಸಮಸ್ಯೆಗಳ ಕುರಿತು ಪರಿಶೀಲನೆನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಂಘದ ರಾಜ್ಯಾಧ್ಯಕ್ಷ ಎಸ್.ಎಂ.ಕೃಷ್ಣ, ಉಪಾಧ್ಯಕ್ಷ ವಿಜಯಕುಮಾರ, ಗೌರವಾಧ್ಯಕ್ಷ ರಾಮಣ್ಣ ಮುತ್ತಗಿ, ಎನ್.ಎಂ.ರೇಶಮವಾಲೆ, ಪ್ರಸನ್ನ ತಳವಾರ, ತಿಪ್ಪಣ್ಣ ವಾಲಿಕಾರ, ತುಷಾರ ಬದ್ದಿ, ಶರಣಬಸಪ್ಪ ಜಾಡರ, ರಮೇಶ ಚವ್ಹಾಣ,ಗುರುಶಿದ್ದಪ್ಪ ಬುರ್ಲಬಡ್ಡಿ, ಮಂಜುನಾಥಮಣ್ಣೆನವರ, ಆರ್.ಎಂ.ಕುಂಠೆ, ರವಿ ಉಪ್ಪಿನ, ಮೃತ್ಯುಂಜಯ ಹಿರೇಮಠ, ಸಿದ್ದರಾಮ ಹಾಲಹಳ್ಳಿ, ಕಿರಣ ಹಿರೇಮಠ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ