ಎಪಿಎಂಸಿ ಆದಾಯ ಭಾರೀ ಕುಸಿತ

ಎಲ್ಲವೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಹಿಮೆ

Team Udayavani, Oct 18, 2020, 3:55 PM IST

Kopala-tdy-2

ಕೊಪ್ಪಳ: ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಹಲವು ಮಹತ್ವದ ಬದಲಾವಣೆಗಳನ್ನು ತಂದಿದೆ. ಇದರಿಂದ ಎಪಿಎಂಸಿ ಆದಾಯಕ್ಕೆ ದೊಡ್ಡ ಹೊಡೆತ ಬಿದ್ದಿದ್ದು, ಮಾರುಕಟ್ಟೆ ಶುಲ್ಕ ಸಂಗ್ರಹದಲ್ಲೂಭಾರಿ ಇಳಿಮುಖವಾಗಿದೆ. ಹೀಗಾದರೆ ಎಪಿಎಂಸಿ ಆಡಳಿತನಡೆಸೋದೇ ಕಷ್ಟವೆಂದು ತಲೆ ಮೇಲೆ ಕೈ ಹೊತ್ತು ಕುಳಿತಿದೆ ಆಡಳಿತ ವರ್ಗ.

ಹೌದು.. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳುಸುಗ್ರೀವಾಜ್ಞೆ ಮೂಲಕ ಎಪಿಎಂಸಿ ಸೇರಿದಂತೆ ಹಲವುಕಾಯ್ದೆಗಳ ತಿದ್ದುಪಡಿ ಮಾಡಿವೆ. ಇದಾದ ಎರಡೇತಿಂಗಳಲ್ಲಿ ಎಪಿಎಂಸಿಗಳಿಗೆ ಆದಾಯ ಸಂಗ್ರಹದಲ್ಲಿಭಾರಿ ಇಳಿಮುಖವಾಗಿದೆ. ಹಾಗಾಗಿ ಎಪಿಎಂಸಿಗಳುಚಡಪಡಿಸುವಂತಾಗಿದೆ.ರಾಜ್ಯ ಸರ್ಕಾರವು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೊದಲು ರಾಜ್ಯದ ಎಲ್ಲಎಪಿಎಂಸಿಗಳಲ್ಲಿ ಮಾರುಕಟ್ಟೆ ಶುಲ್ಕವನ್ನು 1.50 ರೂ. ಸಂಗ್ರಹ ಮಾಡಲಾಗುತ್ತಿತ್ತು. ಆದರೆ ಸರ್ಕಾರ ಆಗಸ್ಟ್‌ ತಿಂಗಳಲ್ಲಿಯೇ ಕಾಯ್ದೆಗೆ ತಿದ್ದುಪಡಿ ತರಲುಸುಗ್ರೀವಾಜ್ಞೆ ಜಾರಿ ಮಾಡಿದ್ದರಿಂದ ಅಂದಿನಿಂದಲೇ ಮಾರುಕಟ್ಟೆಯ ಶುಲ್ಕ 1.50 ರೂ. ಬದಲು, ಕೇವಲ 35 ಪೈಸೆ ಸಂಗ್ರಹಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಇದರಿಂದಾಗಿ ಎಪಿಎಂಸಿಯಲ್ಲಿ ಆದಾಯ ಕುಸಿತವಾಗಿದೆ.

ಉದಾಹರಣೆಗೆ ಕಾಯ್ದೆ ತಿದ್ದುಪಡಿಗೂ ಮುನ್ನಕೊಪ್ಪಳ ಎಪಿಎಂಸಿಯು ವರ್ತಕರು, ವ್ಯಾಪಾರಸ್ಥರು, ಟ್ರೇಡಿಂಗ್‌ ಕಂಪನಿಗಳಲ್ಲಿನಡೆಸುವ ಉತ್ಪನ್ನಗಳವಹಿವಾಟಿನ ಮೇಲೆ 1.50 ರೂ. ಮಾರುಕಟ್ಟೆ ಶುಲ್ಕ ಸಂಗ್ರಹ ಮಾಡುತ್ತಿದ್ದವು. ಹಾಗಾಗಿ ವಾರ್ಷಿಕವಾಗಿ 3 ರಿಂದ 4 ಕೋಟಿ ರೂ. ಶುಲ್ಕ ಸಂಗ್ರಹವಾಗುತ್ತಿತ್ತು. ಅದೇ ಹಣದಲ್ಲಿಯೇ ಸರ್ಕಾರಕ್ಕೆ ಆವರ್ತ ನಿಧಿ , ಎಪಿಎಂಸಿ ಬೋರ್ಡ್‌, ಕೃಷಿ ವಿವಿ, ನೌಕರರ ವೇತನದ ವೆಚ್ಚವು ಸೇರಿದಂತೆ ಇತರೆ ವಿಭಾಗಕ್ಕೆ ಬಳಕೆ ಮಾಡಿಉಳಿಕೆ ಹಣವನ್ನು ರಾಜ್ಯ ಸರ್ಕಾರಕ್ಕೆ ಕೊಡುತ್ತಿತ್ತು. ಆದರೆ ಕಾಯ್ದೆಗೆ ಸುಗ್ರೀವಾಜ್ಞೆ ಜಾರಿ ಬಳಿಕ 35 ಪೈಸೆ ದರ ನಿಗದಿಯಾಗಿದ್ದರಿಂದ ಎಪಿಎಂಸಿ ಆದಾಯದಲ್ಲಿ ಮೂರುಪಟ್ಟು ಇಳಿಕೆಯಾಗಿದೆ.

ಕಳೆದ ವರ್ಷ ಕೊಪ್ಪಳ ಎಪಿಎಂಸಿಗೆ ಸರ್ಕಾರವು 4,09,00,000 ಆದಾಯ ಸಂಗ್ರಹದ ಗುರಿ ನಿಗದಿಪಡಿಸಿತ್ತು. ಎಪಿಎಂಸಿಯು 3,73,34,954 ರೂ. ಸಂಗ್ರಹಿಸಿತ್ತು. ಪ್ರಸಕ್ತ ವರ್ಷದ ಆಗಸ್ಟ್‌ನಿಂದ ಮಾರುಕಟ್ಟೆ ಶುಲ್ಕ 35 ಪೈಸೆ ಲೆಕ್ಕದಲ್ಲಿ 3,57,306 ರೂ., ಸೆಪ್ಟೆಂಬರ್‌ನಲ್ಲಿ 4,00,412 ಸಂಗ್ರಹಿಸಿದೆ. ಈ 35 ಪೈಸೆಯಲ್ಲಿ ಆವರ್ತ ನಿಧಿ ಗೆ ಶೇ.0.15, ಎಪಿಎಂಸಿ ಬೋರ್ಡ್‌ಗೆ ಶೇ.0.04, ಎಪಿಎಂಸಿ ಆಡಳಿತ ವೆಚ್ಚಕ್ಕೆ ಶೇ.0.14, ರೆಮ್ಸ್‌ ಸಂಸ್ಥೆಗೆ ಶೇ.0.02ಹಣವನ್ನು ಹಂಚಿಕೆ ಮಾಡಬೇಕು. ಅಂದರೆ ಎಪಿಎಂಸಿನಿರ್ವಹಣೆಗೆ ಪಕ್ಕಾ ಶೇ.0.14 ಅಷ್ಟು ಹಣವನ್ನು ಮಾತ್ರ ಬಳಕೆ ಮಾಡಿಕೊಳ್ಳಬೇಕು. ಇಷ್ಟು ಹಣದಲ್ಲಿ ಹೇಗೆತಾನೇ ಎಪಿಎಂಸಿ ಆಡಳಿತ ನಿರ್ವಹಣೆ ಮಾಡಲುಸಾಧ್ಯ ಎನ್ನುತ್ತಿದೆ ಆಡಳಿತ ವರ್ಗ. 35 ಪೈಸೆಯಂತೆ ಶುಲ್ಕ ಸಂಗ್ರಹಿಸಿದರೆ ವಾರ್ಷಿಕ 1 ಕೋಟಿ ರೂ. ಸಂಗ್ರಹವಾಗುವುದು ಅನುಮಾನ. ಒಟ್ಟಿನಲ್ಲಿ ಕಾಯ್ದೆ ತಿದ್ದುಪಡಿ ಬಳಿಕ ಆದಾಯದಲ್ಲಿ ಭಾರಿ ಇಳಿಕೆಯಾಗಿದೆ. ಇದರಿಂದ ಎಪಿಎಂಸಿ ನಿರ್ವಹಣೆ ವೆಚ್ಚಕ್ಕೆ ಎಪಿಎಂಸಿಗಳು ನರಳಾಡುವಂತಾಗಿದೆ. ಇನ್ನು ಎಪಿಎಂಸಿಯಲ್ಲಿ ಕಳೆದ 20 ವರ್ಷಗಳಿಂದ ಹೊರ ಗುತ್ತಿಗೆ ಕೆಲಸ ಮಾಡುತ್ತಿದ್ದ 20 ಜನರ ಪೈಕಿ 10 ಜನರನ್ನು ಕೆಲಸದಿಂದ ತೆಗೆಯಲಾಗಿದೆ ಎಂದೆನ್ನುತ್ತಿದೆ ಎಪಿಎಂಸಿ ಆಡಳಿತ ಮಂಡಳಿ.

ರಾಜ್ಯದಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಬಳಿಕ ಎಲ್ಲ ಎಪಿಎಂಸಿಗಳಿಗೆ ದೊಡ್ಡ ಪೆಟ್ಟು ಬಿದ್ದಿದೆ. ಇದರಿಂದ ನಮ್ಮ ಆದಾಯಕ್ಕೆ ಕುತ್ತು ಬಂದಿದೆ. ಮಾರುಕಟ್ಟೆ ಶುಲ್ಕ 1.50 ರೂ. ಬದಲು, 35 ಪೈಸೆ ಸಂಗ್ರಹಿಸುವಂತೆ ಸರ್ಕಾರ ಆದೇಶ ಮಾಡಿದೆ. ಇದರಿಂದ ನಾವು ಆಡಳಿತ ನಿರ್ವಹಣೆ ಮಾಡುವುದೇ ಕಷ್ಟವಾಗುತ್ತಿದೆ. ಆರ್ಥಿಕ ತೊಂದರೆಯಿಂದ ಕೆಲಸಗಾರರನ್ನು ತೆಗೆದಿದ್ದೇವೆ. -ನಾಗರಾಜ ಚಳ್ಳೂಳ್ಳಿ, ಕೊಪ್ಪಳ ಎಪಿಎಂಸಿ ಅಧ್ಯಕ್ಷ

 

-ದತ್ತು ಕಮ್ಮಾರ

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.