ಪರಿಹಾರ ವಿಳಂಬ ಬೇಡ ; ಕೋವಿಡ್ ಹುತಾತ್ಮರಿಗೆ ಶೀಘ್ರ ಪರಿಹಾರಕ್ಕೆ ಹಕ್ಕೊತ್ತಾಯ


Team Udayavani, Oct 19, 2020, 6:33 AM IST

ಪರಿಹಾರ ವಿಳಂಬ ಬೇಡ ; ಕೋವಿಡ್ ಹುತಾತ್ಮರಿಗೆ ಶೀಘ್ರ ಪರಿಹಾರಕ್ಕೆ ಹಕ್ಕೊತ್ತಾಯ

ಸಾಂದರ್ಭಿಕ ಚಿತ್ರ

ಬೆಂಗಳೂರು: ತಮ್ಮ ಪ್ರಾಣವನ್ನೇ ಮುಡಿಪಿಟ್ಟು ಸೋಂಕು ನಿಯಂತ್ರಣಕ್ಕಾಗಿ ಶ್ರಮಿಸುತ್ತಿರುವ ಕೋವಿಡ್ ಯೋಧರ ಬಗ್ಗೆ ಹೆಚ್ಚಿನ ಸರಕಾರ ಕಾಳಜಿ ತೋರಬೇಕು ಎಂದು ಸಮಾಜದ ವಿವಿಧ ವರ್ಗಗಳು ಆಗ್ರಹಿಸಿದ್ದು, “ಹುತಾತ್ಮ’ರಿಗೆ ಪರಿಹಾರ ನೀಡಿಕೆಯಲ್ಲಿ ವಿಳಂಬ ಸಲ್ಲದು ಎಂಬ ಆಗ್ರಹವನ್ನು ಮುಂದಿಟ್ಟಿವೆ.

ಉದಯವಾಣಿ ರವಿವಾರ ಪ್ರಕಟಿಸಿದ ವರದಿಗೆ ಪ್ರತಿಕ್ರಿಯಿಸಿರುವ ರಾಜಕೀಯ ನಾಯಕರು,  ವಿವಿಧ ವೃತ್ತಿಪರ ಸಂಘಟನೆಗಳ ಪದಾಧಿ ಕಾರಿಗಳು ಹುತಾತ್ಮರಿಗೆ ಪರಿಹಾರ ನೀಡುವ ಪ್ರಕ್ರಿಯೆ ಸರಳ ಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ವಿಳಂಬ ನೀತಿಯನ್ನು ವಿಪಕ್ಷಗಳು ಟೀಕಿಸಿವೆ.

ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ರಾಜ್ಯದ ಕೋವಿಡ್ ವಾರಿಯರ್‌ಗಳಿಗೆ ಪರಿಹಾರ ಒದಗಿಸಲಾಗುತ್ತಿದೆ. ಜತೆಗೆ ರಾಜ್ಯ ಸರಕಾರ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಕೆಲವು ಪ್ರಕರಣಗಳಲ್ಲಿ ಪರಿಹಾರ ನೀಡುತ್ತಿದೆ. ಸಾಕಷ್ಟು ನಿಯಮಗಳಿರುವುದರಿಂದ ಮೃತರ ಕುಟುಂಬದವರಿಗೆ ಪರಿಹಾರ ವಿಳಂಬವಾಗುತ್ತಿದೆ ಎಂದು ಕೊರೊನಾ ವಾರಿಯರ್ಸ್‌ ನೌಕರರ ಸಂಘಟನೆಗಳು ಹೇಳಿವೆ.

ಕೊರೊನಾದಿಂದ ನಿಧನ ಹೊಂದಿದ ವಾರಿಯರ್‌ಗಳಿಗೆ ಪರಿಹಾರ ನೀಡಲು ಕಾಗದ ಪತ್ರ ಪರಿಶೀಲನೆಗೆ ಪ್ರತ್ಯೇಕ ಸಮಿತಿ ರಚನೆ ಮಾಡಿ, ವೇಗವಾಗಿ ಪರಿಹಾರ ತಲುಪುವಂತೆ ಸರಕಾರ ನೋಡಿಕೊಳ್ಳಬೇಕೆಂಬ ಸಲಹೆ ಕೂಡ ವ್ಯಕ್ತವಾಗಿದೆ. ಸರಕಾರಿ ಅಧಿಕಾರಿಗಳು ಸೇವೆ ಸಲ್ಲಿಸುತ್ತಿದ್ದಾಗ ಕೋವಿಡ್ ತಗಲಿ ಜೀವ ಕಳೆದುಕೊಂಡರೆ ಹಾಗೂ ಕೋವಿಡ್ ಕರ್ತವ್ಯದಲ್ಲಿದ್ದಾಗ ಅಪಘಾತಕ್ಕೆ ತುತ್ತಾದರೆ ಮಾತ್ರ ಪರಿಹಾರ ನೀಡಲಾಗುವುದು ಎನ್ನುವ ನಿಯಮಕ್ಕೆ ಕೊರೊನಾ ವಾರಿಯರ್‌ಗಳಿಂದ ಆಕ್ಷೇಪ ವ್ಯಕ್ತವಾಗಿದೆ.

ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ನೇರವಾಗಿ ರೋಗಿಗಳ ಜತೆ ಸಂಪರ್ಕಕ್ಕೆ ಬರುವುದರಿಂದ ಅವರಿಗೆ ಜೀವ ಭಯ ಹೆಚ್ಚಿರುತ್ತದೆ. ರೋಗಿಗಳ ಸ್ಥಿತಿ ನೋಡಿ, ಮಾನಸಿಕ ವಾಗಿ ಆಘಾತಕ್ಕೊಳಗಾಗಿ ಕೆಲಸದ ಒತ್ತಡದಿಂದ ಅನಾರೋಗ್ಯ ಕ್ಕೊಳಗಾಗಿ ಕೋವಿಡ್ ನಿಧನ ಹೊಂದಿರುವ ಪ್ರಕರಣಗಳಿವೆ. ಅವರಿಗೂ ಸಿಎಂ ನಿಧಿಯಿಂದ 30 ಲಕ್ಷ ರೂ. ಕೊಡಬೇಕೆನ್ನುವ ಬೇಡಿಕೆ ಇದೆ.

ಪ್ರೋತ್ಸಾಹ ಧನ ಸಿಕ್ಕಿಲ್ಲ
ಸರಕಾರ ಈಗಾಗಲೇ 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಇದುವರೆಗೂ ಹಲವರ ಕೈಸೇರಿಲ್ಲ. ಗೌರವ ಧನವೂ ಸಕಾಲದಲ್ಲಿ ಕೈಸೇರುತ್ತಿಲ್ಲ ಎಂದು ಸಂಘದ ರಾಜ್ಯಾಧ್ಯಕ್ಷ ಸಿ. ಸೋಮಶೇಖರ್‌ ದೂರಿದ್ದಾರೆ. ಆಶಾ ಕಾರ್ಯಕರ್ತೆಯರ ಗೌರವ ಧನವನ್ನು 12 ಸಾವಿರ ರೂ.ಗೆ ಏರಿಸಬೇಕು ಎಂದು ಹಲವು ಬೇಡಿಕೆಗಳನ್ನು ಸರಕಾರದ ಮುಂದಿಡಲಾಗಿದೆ. ಆದರೆ ಸರಕಾರ ಈ ಕಡೆ ಗಮನ ಹರಿಸುತ್ತಿಲ್ಲ ಎಂದಿದ್ದಾರೆ.

ಪೊಲೀಸ್‌ ಸಿಬಂದಿಗೆ ಆರೋಗ್ಯ ಕವಚ ಯೋಜನೆ ಅಡಿಯಲ್ಲಿ ಇಲಾಖೆಯಿಂದಲೇ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವಿಗೀಡಾದರೆ ಇಲಾಖೆ ನೀಡುವ ಪರಿಹಾರ ಸಿಗುವ ಪರಿಹಾರದ ಜತೆಗೆ 30 ಲಕ್ಷ ರೂ.ಗಳನ್ನೂ ಕೊಡಲಾಗು ತ್ತಿದೆ. ಈಗಾಗಲೇ ಕೆಲವರ ಕುಟುಂಬಗಳಿಗೆ ಇಲಾಖೆ ವತಿಯಿಂದ ಪರಿಹಾರ ತಲುಪಿಸಲಾಗಿದೆ. ಪೊಲೀಸರ ಆರೋಗ್ಯದ ಹಿತದೃಷ್ಟಿಯಿಂದ 50 ವರ್ಷ ಮೇಲ್ಪಟ್ಟವರನ್ನು ಕಚೇರಿ ಕೆಲಸಕ್ಕೆ ನಿಯೋಜಿಸಿದ್ದು, 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಮಾತ್ರ ಕೊರೊನಾ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಿದೆ.
– ಬಸವರಾಜ್‌ ಬೊಮ್ಮಾಯಿ, ಗೃಹ ಸಚಿವ

ಕೋವಿಡ್ ನಿಯಂತ್ರಣ, ಜಾಗೃತಿ, ಚಿಕಿತ್ಸೆ ಹಂತದಲ್ಲಿ ಹಾಗೂ ಕೋವಿಡ್ ಅಪಾಯದ ನಡುವೆಯೂ ಸಾರ್ವಜನಿಕ ಸೇವೆಯಲ್ಲಿ ತೊಡಗಿ ಜೀವತೆತ್ತ ವಾರಿಯರ್ಸ್‌ ಕುಟುಂಬಗಳು ಕಷ್ಟಕ್ಕೆ ಸಿಲುಕಿವೆ. ನಿಯಮಾನುಸಾರ ಪರಿಹಾರ ಸೇರಿ ಇತರ ಸವಲತ್ತು ತ್ವರಿತವಾಗಿ ಕಲ್ಪಿಸುವುದು ಸರಕಾರದ ಕರ್ತವ್ಯ. ಇದು ಅವರಿಗೆ ನೀಡುವ ಗೌರವವೂ ಹೌದು. ಈ ಬಗ್ಗೆ ಉದಯವಾಣಿ ಬೆಳಕು ಚೆಲ್ಲಿರುವುದು ಒಳ್ಳೆಯ ಕೆಲಸ.
 - ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಕೋವಿಡ್ ಸಂಕಷ್ಟ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಬಿಜೆಪಿ ಸರಕಾರದ ನಿರ್ಲಕ್ಷ ದ ಬಗ್ಗೆ ಕಾಂಗ್ರೆಸ್‌ ಮೊದಲಿನಿಂದಲೂ ಬೆಳಕು ಚೆಲ್ಲುತ್ತ ಬಂದಿದೆ. ಹುತಾತ್ಮರಾದ ಕೊರೊನಾ ವಾರಿಯರ್ಸ್‌ ಕುಟುಂಬಗಳ ಬಗ್ಗೆ ತಿರಸ್ಕಾರ ಧೋರಣೆ ತಾಳಿ ಪರಿಹಾರದಲ್ಲಿ ವಿಳಂಬ ಮಾಡುವುದು ಸರಿಯಲ್ಲ.
– ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ

ಸಲಹೆಗಳು
1ಪರಿಹಾರ ನಿಯಮಗಳನ್ನು ಸರಳಗೊಳಿಸಬೇಕು
2ಗುತ್ತಿಗೆ ನೌಕರರನ್ನೂ ಪರಿಹಾರಕ್ಕೆ ಪರಿಗಣಿಸಬೇಕು
3ಪರಿಶೀಲನೆಗೆ ಪ್ರತ್ಯೇಕ ಸಮಿತಿ ರಚಿಸಬೇಕು
4ಪರಿಹಾರ ವಿತರಣೆ ಪ್ರಕ್ರಿಯೆ ಚುರುಕುಗೊಳಿಸಬೇಕು
5ಸಂತ್ರಸ್ತರಿಗೆ ಕಾಲಮಿತಿಯಲ್ಲಿ ಪರಿಹಾರ ನೀಡಬೇಕು

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.