ಮೃತ ವಾರಿಯರ್ಸ್ ಕುಟುಂಬಕ್ಕೆ ಸಿಗದ ಪರಿಹಾರ

ಕೋವಿಡ್ ಮಹಾಮಾರಿಗೆ ಕಲ್ಪತರು ನಾಡಿನಲ್ಲಿ ಏಳು ಮಂದಿ ಬಲಿ, ಹಲವು ವಾರಿರ್ಸ್ ಗೆ ಸೋಂಕು

Team Udayavani, Oct 19, 2020, 4:50 PM IST

ಮೃತ ವಾರಿಯರ್ಸ್ ಕುಟುಂಬಕ್ಕೆ ಸಿಗದ ಪರಿಹಾರ

ಕಲ್ಪತರು ನಾಡಿನಲ್ಲಿ ಕೋವಿಡ್ ಅಟ್ಟಹಾಸವನ್ನು ಇನ್ನೂ ನಿಲ್ಲಿಸಿಲ್ಲ, 18 ಸಾವಿರಕ್ಕೂ ಹೆಚ್ಚು ಜನ ಸೋಂಕಿನಿಂದ ನರಳುತ್ತಿದ್ದಾರೆ. ಕೋವಿಡ್‌ನಿಂದ 380ಕ್ಕೂ ಹೆಚ್ಚು ಜನ ಉಸಿರು ಚೆಲ್ಲಿದ್ದಾರೆ. ಇವರಲ್ಲಿ ಸೋಂಕಿತರನ್ನು ನೋಡಿಕೊಳ್ಳುವ ವೈದ್ಯರು,ಪೊಲೀಸರು, ಶಿಕ್ಷಕರು ಇತರೆ ವಾರಿಯರ್ಸ್‌ಗಳು ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಇನ್ನೂ ಪರಿಹಾರ ದೊರೆಕಿಲ

ತುಮಕೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಲೇ ಇದೆ. ಜಿಲ್ಲೆಯಲ್ಲಿ 18 ಸಾವಿರಕ್ಕೂ ಹೆಚ್ಚು ಸೋಂಕಿತರಿದ್ದು ಈ ಮಹಾಮಾರಿಗೆ ಈವರೆಗೆ 380ಕ್ಕೂ ಹೆಚ್ಚು ಮಂದಿ ಮೃತರಾಗಿದ್ದಾರೆ.

ಅದರಲ್ಲಿ ಕೋವಿಡ್ ವಾರಿಯರ್ಸ್‌ ಗಳಾಗಿ ಕೆಲಸ ಮಾಡಿದ್ದ 7ಮಂದಿಯೂ ಹುತಾತ್ಮರಾಗಿದ್ದಾರೆ. ವಿಶ್ವವ್ಯಾಪಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಮಹಾಮಾರಿ ಈಗ ದೇಶದಲ್ಲಿ, ರಾಜ್ಯದಲ್ಲಿ ನಮ್ಮ ಜಿಲ್ಲೆಯಲ್ಲಿಯೂ ತೀವ್ರವಾಗಿ ವ್ಯಾಪಿಸುತ್ತಿದೆ. ಕೊರೊನಾ ದಿಂದ ಜನರನ್ನು ಗುಣ ಮುಖ ಮಾಡಲು ಶ್ರಮಿಸುತ್ತಿರುವ ಕೋವಿಡ್ ವಾರಿಯರ್ಸ್‌ಗಳನ್ನೂ ಬಿಡದೇ ಈ ಮಹಾಮಾರಿ ತನ್ನ ಆರ್ಭಟ ಪ್ರದರ್ಶಿಸಿ ಅವರ ಜೀವವನ್ನೂ ಬಲಿ ತೆಗೆದುಕೊಂಡಿದೆ.

ಜಿಲ್ಲೆಯಲ್ಲಿ ಈವರೆಗೆ ಹತ್ತಕ್ಕೂ ಹೆಚ್ಚು ವೈದ್ಯರಿಗೆ ಕೋವಿಡ್ ಕಾಣಿಸಿ ಕೊಂಡಿದ್ದು ಅವರಲ್ಲಿ ಗುಬ್ಬಿ ಮತ್ತು ಕುಣಿಗಲ್‌ನ ಇಬ್ಬರು ವೈದ್ಯರು ಮೃತಪಟ್ಟಿದ್ದಾರೆ. ಇದಲ್ಲದೇ ಕೋವಿಡ್ ವಾರಿಯರ್ಸ್‌ಗಳಾಗಿ ಕೆಲಸ ಮಾಡುತ್ತಿರುವ ನರ್ಸ್‌ಗಳು, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ಪೊಲೀಸರು, ಪತ್ರಕರ್ತರು, ಚಾಲಕರು, ನಿರ್ವಾಹಕರು, ಶಿಕ್ಷಕರು, ಉಪನ್ಯಾಸಕರು ಕೊರೊನಾ ದಿಂದ ತೊಂದರೆ ಅನುಭವಿಸಿ ಕೆಲವರು ನಿಧನಹೊಂದಿದ್ದಾರೆ.

ಇಬ್ಬರು ವೈದ್ಯರ ಸಾವು: ಜನಮಾನಸದಲ್ಲಿ ವೈದ್ಯೋನಾರಾಯಣೋ ಹರಿ ಎಂಬನುಡಿಯಿದೆ, ಅನಾರೋಗ್ಯದಿಂದ ಆಸ್ಪತ್ರೆಗೆ ಸೇರುವ ರೋಗಿಯನ್ನು ತಾವು ನೀಡುವ ಚಿಕಿತ್ಸೆ ಮೂಲಕ ಗುಣಪಡಿಸುತ್ತಾರೆ. ಈಗ ವಿಶ್ವವ್ಯಾಪಿ ಹರಡಿರುವ ಕೋವಿಡ್ ಮಹಾಮಾರಿಯಿಂದ ಜನರನ್ನು ರಕ್ಷಿಸಲು ವೈದ್ಯರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ವೇಳೆಯಲ್ಲಿ ಜಿಲ್ಲೆಯ ಕುಣಿಗಲ್‌ ಮತ್ತು ಗುಬ್ಬಿಯ ವೈದ್ಯರು ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದು ಇನ್ನೂ ಹಲವು ವೈದ್ಯರಿಗೆ ಸೋಂಕು ತಗಲಿದ್ದರೂ ಚಿಕಿತ್ಸೆಯಿಂದ ಗುಣ ಮುಖರಾಗಿದ್ದಾರೆ.

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ: ವೈದ್ಯರ ರೀತಿಯಲ್ಲಿಯೇ ಕೆಲಸ ಮಾಡುತ್ತಾ ಸದಾ ಕೋವಿಡ್ ಸೋಂಕಿತರ ಆರೈಕೆ ಮಾಡುವ ನರ್ಸ್ ಗಳು, ಮನೆ ಮನೆಗೆ ತೆರಳಿ ಜನರಲ್ಲಿ ಅರಿವು ಮೂಡಿಸುವ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಸೇರಿದಂತೆ ಆರೋಗ್ಯಇಲಾಖೆಯಲ್ಲಿ ಕೆಲಸ ಮಾಡುವ ಅನೇಕರು ಕೋವಿಡ್ ಮಹಾಮಾರಿ ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದಾರೆ, ಇಂದಿಗೂ ಆತಂಕದ ನಡುವೆಯೇ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ನೆರವಾಗುತ್ತಿದ್ದಾರೆ.

ಇಬ್ಬರು ಪೊಲೀಸರ ಸಾವು: ಕೋವಿಡ್ ವಾರಿಯರ್ಸ್‌ ಗಳಾಗಿ ಪೊಲೀಸರುಕೆಲಸ ಮಾಡುತ್ತಿದ್ದಾರೆ ಲಾಕ್‌ ಡೌನ್‌ ವೇಳೆಯಲ್ಲಿ ಜನರಲ್ಲಿ ಅರಿವು ಮೂಡಿಸಿ ಕ್ವಾರಂಟೈನ್‌ ಪ್ರದೇಶದಲ್ಲಿ ಕೆಲಸ ಮಾಡಿ ಇಂದಿಗೂ ಕೋವಿಡ್ ವಾರಿಯರ್ಸ್‌ ಗಳಾಗಿ ಕೆಲಸ ಮಾಡುತ್ತಿದ್ದಾರೆ, ಕೆಲಸ ಮಾಡುವ ವೇಳೆಯಲ್ಲಿ ಅನೇಕ ಪೊಲೀಸರಿಗೂ ಕೋವಿಡ್ ಸೋಂಕು ಕಾಣಿಸಿ ಕೊಂಡಿದ್ದು ಇಬ್ಬರು ಮೃತಪಟ್ಟಿದ್ದಾರೆ.

ಮೂವರು ಶಿಕ್ಷಕರ ಸಾವು: ಸರ್ಕಾರವಿದ್ಯಾಗಮದ ಮೂಲಕ ಮಕ್ಕಳಿಗೆ ಸಾಮಾಜಿಕ ಅಂತರದಲ್ಲಿ ಶಿಕ್ಷಣ ಕಲಿಸುವ ವ್ಯವಸ್ಥೆ ಯಲ್ಲಿ ನಡೆ‌ಯುತ್ತಿತ್ತು. ಆದರೆ ಮಹಾಮಾರಿ ಕೋವಿಡ್ ಮಕ್ಕಳಿಗೆ ಶಿಕ್ಷಣ ನೀಡುವ ಶಿಕ್ಷಕರನ್ನೂ ಬಿಡದೇ ಕಾಡುತ್ತಿದೆ, ಜಿಲ್ಲೆಯಲ್ಲಿ 36 ಶಿಕ್ಷಕರಿಗೆ ಕೊರೊನಾ ಕಾಣಿಸಿಕೊಂಡು ಅದರಲ್ಲಿ 30 ಶಿಕ್ಷಕರು ಗುಣಮುಖರಾಗಿದ್ದಾರೆ, ಮೂರು ಜನ ಶಿಕ್ಷಕರು ಮೃತಪಟ್ಟಿದ್ದಾರೆ, ಇದಲ್ಲದೇ ಪ್ರತಿನಿತ್ಯ ನಗರವನ್ನು ಸ್ವಚ್ಛಮಾಡುವ ಪೌರಕಾರ್ಮಿಕರಲ್ಲಿ ಹಲವರಿಗೆ ಕೋವಿಡ್ ಸೋಂಕು ಕಾಣಿಸಿ ಕೊಂಡು ಗುಣಮುಖವಾಗಿದೆ.

ಅದೇ ರೀತಿ ಪದವಿ ಪೂರ್ವ ಕಾಲೇಜುಗಳ 7 ಜನ ಉಪನ್ಯಾಸಕರಿಗೂ ಕೋವಿಡ್ ಸೊಂಕು ತಗುಲಿದೆ. ಪರಿಹಾರ ದೊರೆತಿಲ್ಲ ಕೋವಿಡ್ ಸೋಂಕಿನಿಂದ ಮೃತಪಟ್ಟಿರುವ ವೈದ್ಯರು, ಶಿಕ್ಷಕರು, ಪೊಲೀಸರಿಗೆ ಸರ್ಕಾರ ದಿಂದ ಸಿಗಬೇಕಾಗಿರುವ ಪರಿಹಾರ ಇನ್ನೂ ದೊರೆತ್ತಿಲ್ಲ.ಈ ಬಗ್ಗೆ ಸಂಬಂಧಿಸಿದ ಅಧಿಕಾರಿ ಗಳು ಹೇಳುವಂತೆ ಸರ್ಕಾರಕ್ಕೆಮಾಹಿತಿ ಕಳುಹಿಸ ಲಾಗಿದೆ ಅಲ್ಲಿಂದ ಬರಬೇಕುಎನ್ನುತ್ತಾರೆ. ವೈದ್ಯರು ಮೃತಪಟ್ಟುಎರಡು ತಿಂಗಳು ಕಳೆಯುತ್ತಿದ್ದರೂ ಇನ್ನೂ ಪರಿಹಾರ ದೊರೆತ್ತಿಲ

ಜಿಲ್ಲೆಯಲ್ಲಿ ಕೋವಿಡ್ ವಾರಿಯರ್ಸ್‌ ಗಳಾಗಿ ವೈದ್ಯರು, ನರ್ಸ್ ಗಳು, ಆಶಾಕಾರ್ಯಕರ್ತೆಯರು, ಪೌರಕಾರ್ಮಿಕರು, ಪೊಲೀಸರು, ಪತ್ರಕರ್ತರುಕೆಲಸ ಮಾಡುತ್ತಿದ್ದಾರೆ,ಅದರಲ್ಲಿಕೆಲವರಿಗೆ ಸೋಂಕು ತಗಲಿ ಗುಣಮುಖರಾಗಿದ್ದಾರೆ. ನಮ್ಮ ಇಬ್ಬರು ವೈದ್ಯರು ಮೃತಪಟ್ಟಿದ್ದು ಅವರಿಗೆ ಪರಿಹಾರದ ಬಗ್ಗೆ ಸೂಕ್ತ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಡಾ.ಎಂ.ಬಿ.ನಾಗೇಂದ್ರಪ್ಪ, ಡಿಎಚ್‌ಒ

ಜಿಲ್ಲೆಯಲ್ಲಿ 36 ಶಿಕ್ಷಕರಿಗೆ ಕೋವಿಡ್ ಕಾಣಿಸಿಕೊಂಡು ಅದರಲ್ಲಿ 30 ಶಿಕ್ಷಕರು ಗುಣಮುಖ ರಾಗಿದ್ದಾರೆ. ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಗುಬ್ಬಿ ತಾಲೂಕಿನ ಇಬ್ಬರು ಶಿಕ್ಷಕರು ಮತ್ತು ತುಮಕೂರು ತಾಲೂಕಿನ ಒಬ್ಬರು ಶಿಕ್ಷಕರು ಕೋವಿಡ್ ದಿಂದ ಮೃತಪಟ್ಟಿದ್ದಾರೆ. ಸಿ.ನಂಜಯ್ಯ, ಡಿಡಿಪಿಐ

 

-ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.