ಕಟ್ಟೆರೋಗ ಹತೋಟಿಗೆ ರೈತರಿಗೆ ಮಾಹಿತಿ ನೀಡಿ :ಅಧಿಕಾರಿಗಳಿಗೆ ಕಾಗೇರಿ ಸೂಚನೆ


Team Udayavani, Oct 20, 2020, 9:31 AM IST

ಕಟ್ಟೆರೋಗ ಹತೋಟಿಗೆ ರೈತರಿಗೆ ಮಾಹಿತಿ ನೀಡಿ :ಅಧಿಕಾರಿಗಳಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಿಮೆಣಸು, ಬಾಳೆ, ಯಾಲಕ್ಕಿ, ವೆನಿಲ್ಲಾ ಬೆಳೆಗಳಿಗೆ ಕಟ್ಟೆ ರೋಗ ಹೆಚ್ಚಾಗಿ ಕಾಣಿಸುತ್ತಿದ್ದು, ಇದರ ಹತೋಟಿಗೆ ಸೂಕ್ತ ಕ್ರಮ ವಹಿಸುವಂತಾಗಬೇಕು ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದರು.

ಬೆಂಗಳೂರಿನ ಭಾರತೀಯ ತೋಟಗಾರಿಕೆ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ, ಉತ್ತರ ಕನ್ನಡ ಜಿಲ್ಲೆ ಮಲೆನಾಡು ಪ್ರದೇಶವಾಗಿದ್ದು, ಹೆಚ್ಚಾಗಿ ಮಳೆ ಬೀಳುತ್ತಿರುವುದರಿಂದ ರೈತರ ಬೆಳೆಗಳು ರೋಗ ಹಾಗೂ ಕೀಟಗಳಿಂದ ಬಾಧಿತವಾಗುತ್ತಿದೆ. ಇದರ
ಜೊತೆಯಾಗಿ ಪಾರಂಪರಿಕವಾಗಿ ತೋಟಗಾರಿಕಾ ಬೆಳೆಗಳೂ ಸಹ ನಶಿಸುತ್ತಿರುವುದರಿಂದ ಅವುಗಳ ಸಂರಕ್ಷಣೆ ಮತ್ತು ಹೊಸ ತೋಟಗಾರಿಕೆ ಬೆಳೆಗಳನ್ನು ನಮ್ಮ ರೈತ ಬಾಂಧವರಿಗೆ ಬೆಳೆಸಲು ಪ್ರೋತ್ಸಾಹಿಸುವುದು ಅಗತ್ಯವಿರುವುದರಿಂದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ತೋಟಗಾರಿಕೆ ಇಲಾಖೆ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯದ ಜೊತೆಗೂಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಿದರು.

ಇದನ್ನೂ ಓದಿ:ಪೊಲೀಸ್ ಅಧಿಕಾರಿಯನ್ನು ಕೊಂದ ಉಗ್ರರ ಸದೆಬಡಿದ ಭದ್ರತಾ ಪಡೆ: ಓರ್ವ ಉಗ್ರನ ಹತ್ಯೆ, ಓರ್ವನ ಬಂಧನ

ಸಂಶೋಧನೆಗೆ ಒತ್ತುಕೊಟ್ಟು ರೈತರ ಬಾಳಿನಲ್ಲಿ ಹೊಸ ಹುರುಪು ನೀಡಿದಲ್ಲಿ ನಮ್ಮ ರಾಷ್ಟ್ರದ ಜಿಡಿಪಿ ಬೆಳವಣಿಗೆಗೆ ಉತ್ತರ ಕನ್ನಡ ಜಿಲ್ಲೆಯ ತೋಟಗಾರಿಕಾ ಕ್ಷೇತ್ರದಿಂದ ಹೆಚ್ಚಿನ ಕೊಡುಗೆ ನೀಡುವುದರಲ್ಲಿ ಸಂಶಯವಿಲ್ಲ ಎಂದ ಕಾಗೇರಿ, ಕುಮಟಾ ಈರುಳ್ಳಿಯು ಒಂದು ಪ್ರಮುಖ ತರಕಾರಿ ಬೆಳೆಯಾಗಿದ್ದು, ಇದರ ವಿಶಿಷ್ಟತೆಯನ್ನು ನಮ್ಮ ರಾಜ್ಯ, ದೇಶ ಹಾಗೂ ವಿದೇಶಗಳಿಗೆ ತಿಳಿಸಲು ಅದರ
ವೈಜ್ಞಾನಿಕ ಗುಣಗಳ ಬಗ್ಗೆ ಅಧ್ಯಯನ ಮಾಡಬೇಕು. ಅದರಿಂದ ಈ ಭಾಗದ ರೈತರಿಗೆ ಹಿಚ್ಚಿನ ಪ್ರೋತ್ಸಾಹ
ನೀಡಿದಂತಾಗುತ್ತದೆ.

ಜೀರಿಗೆ ಮೆಣಸಿನಕಾಯಿ, ಮುಗಲ ಮೆಣಸಿನಕಾಯಿಗಳನ್ನು ರೈತರ ಆದಾಯ ಹೆಚ್ಚಿಸುವಲ್ಲಿ ಉಪ ಬೆಳೆಯಾಗಿ ಅನುಕೂಲವಾಗಿದೆ
ಮತ್ತು ಇದರ ವೈಜ್ಞಾನಿಕ ಗುಣಗಳಿಂದ ಸಾಕಷ್ಟು ರೋಗಗಳನ್ನು ತಡೆಯುತ್ತದೆ ಎಂದು ಹೇಳುತ್ತಿರುವುದರಿಂದ ಈ ಬಗ್ಗೂ ಮಾಹಿತಿ ನೀಡಬೇಕು. ನಸಗುನಿ ಕಾಯಿ ಔಷಧ  ಬಳ್ಳಿಯನ್ನು ಅಡಕೆ ಮರಗಳ ಮಧ್ಯೆ ಹೆಚ್ಚಾಗಿ ಬೆಳೆದು, ಈ ಬಳ್ಳಿಯ ಔಷ ಧ ಗುಣಗಳನ್ನು ಉಪಯೋಗ ಮಾಡುವ ಖಾಸಗಿ, ಸರ್ಕಾರಿ ಕಂಪನಿಗಳ ಜೊತೆ ಒಪ್ಪಂದದ ಬಗ್ಗೆ ಸೂಕ್ತ ಕ್ರಮ ವಹಿಸುವಂತಾಗಬೇಕು.

ಇದನ್ನೂ ಓದಿ:ಪಾಕ್‌ನ ಮೊಬೈಲ್‌ ಟವರ್‌ ಕುತಂತ್ರ: ಜಮ್ಮು ಕಾಶ್ಮೀರಕ್ಕೂ ಸಿಗ್ನಲ್‌ ಕಳುಹಿಸಲು ಯೋಜನೆ!

ಹಲಸು, ಬಾಳೆ ಬೆಳೆಯನ್ನು ನಮ್ಮ ಭಾಗದ ರೈತರು ಹೆಚ್ಚಾಗಿ ಬೆಳೆಯುತ್ತಾರೆ. ಆದ್ದರಿಂದ ಇವುಗಳಿಂದ ಹಪ್ಪಳ ತಯಾರಿಸುವ ಯಂತ್ರವನ್ನು ಕಂಡು ಹಿಡಿಯುವುದು ಸೂಕ್ತ ಎಂದೂ ಸಲಹೆ ನೀಡಿದ್ದಾರೆ. ಹಲಸು, ಅನಾನಸ್‌, ಬಾಳೆ ಹಣ್ಣುಗಳ
ಕೊಯ್ಲೋತ್ತರ ನಿರ್ವಹಣೆ ತಾಂತ್ರಿಕತೆಗಳ ಬಗ್ಗೆ ಹೆಚ್ಚಿನ ಸಂಶೋಧನೆ ಮಾಡುವುದು ಅಗತ್ಯವಾಗಿದೆ. ನರ್ಸರಿಗಳನ್ನು ಮಾಡಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಕಾಗೇರಿ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.