ಐಸಿಸ್‌ಗೆ ನಗರ ವೈದ್ಯನ ಸಾಥ್‌


Team Udayavani, Oct 20, 2020, 12:06 PM IST

bng-tdy-2

ಬೆಂಗಳೂರು: ಸಿರಿಯಾದಲ್ಲಿ ಸಕ್ರಿಯವಾಗಿರುವ ಐಸಿಸ್‌ ಉಗ್ರ ಸಂಘಟನೆಗೆ ಬೆಂಗಳೂರಿನ ಯುವಕರನ್ನು ಕಳುಹಿಸಿದ್ದ ಪ್ರಕರಣದಲ್ಲಿ ಮತ್ತೂಬ್ಬ ಬೆಂಗಳೂರು ಮೂಲದ ವೈದ್ಯನ ಕೈವಾಡ ಇರುವುದು ಎನ್‌ಐಎ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಮೂಲಕ ಪ್ರಕರಣದಲ್ಲಿ ಬೆಂಗಳೂರು ಮೂಲದ ಎರಡನೇ ವೈದ್ಯ ಐಸಿಸ್‌ ಸಂಘಟನೆ ಜತೆ ಸಂಪರ್ಕ ದಲ್ಲಿರುವ ಸ್ಫೋಟಕ ವಿಚಾರ ಬಯಲಾಗಿದೆ.

ಬೆಂಗಳೂರಿನ ಆಗ್ನೇಯ ವಿಭಾಗದಲ್ಲಿ ವಾಸವಾಗಿದ್ದ ದಂತವೈದ್ಯ ತೌಕೀರ್‌ ಮತ್ತು ಕಂಪ್ಯೂಟರ್‌ ಅಪ್ಲೀ ಕೇಷನ್‌ಗಳ ತಜ್ಞ ಜುಹೇಬ್‌ಗಾಗಿ ಎನ್‌ಐಎ ಅಧಿಕಾರಿಗಳು ವಿದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಶಂಕಿತ ಉಗ್ರರು ಆರೇಳು ವರ್ಷಗಳ ಹಿಂದೆ ಬೆಂಗಳೂರಿನ ಆರೇಳು ಯುವಕರನ್ನು ಸಿರಿಯಾಗೆ ಕಳುಹಿಸಿದ್ದಾರೆ. ಅನಂತರ ಅವರು ಕೂಡ ವಿದೇಶಕ್ಕೆ ತೆರಳಿ ತಲೆ ಮರೆಸಿಕೊಂಡಿದ್ದಾರೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಬಂಧನಕ್ಕೊಳಗಾದ ತಮಿಳುನಾಡು ಮೂಲದ ಅಹಮದ್‌ ಅಬ್ದುಲ್‌ ಖಾದೆರ್‌ ಮತ್ತು ನಗರದ ಅಕ್ಕಿ ವ್ಯಾಪಾರಿ ಇರ್ಫಾನ್‌ ನಾಸೀರ್‌ನನ್ನು ಎನ್‌ಐಎ ಬಂಧಿಸಿತ್ತು. ಈ ಶಂಕಿತರು ತೌಕೀರ್‌ ಮತ್ತು ಜುಹೇಬ್‌ ಬಗ್ಗೆ ಬಾಯಿಬಿಟ್ಟಿದ್ದರು. ಈ ಹಿಂದೆ ಬಂಧನಕ್ಕೊಳಗಾದ ನಗರದ ಪ್ರತಿಷ್ಟಿತ ಆಸ್ಪತ್ರೆಯಲ್ಲಿ ವೈದ್ಯನಾಗಿದ್ದ ಅಬ್ದರ್‌ ರೆಹಮಾನ್‌, ತಮಿಳುನಾಡಿನ ಅಹಮದ್‌ ಅಬ್ದುಲ್‌ ಖಾದೆರ್‌, ನಗರದ ಅಕ್ಕಿ ವ್ಯಾಪಾರಿ ಇರ್ಫಾನ್‌ ನಾಸೀರ್‌ ಹಾಗೂ ಇತರೆ ಶಂಕಿತರ ಜತೆ ಸೇರಿಕೊಂಡು ವಾಟ್ಸ್‌ಆ್ಯಪ್‌ ಗ್ರೂಪ್‌ವೊಂದನ್ನು ರಚಿಸಿಕೊಂಡಿದ್ದರು. ಬೆಂಗಳೂರಿನ ಯುವಕರಿಗೆ ಧರ್ಮದ ಬಗ್ಗೆ ಬೋಧಿಸಿ, ಸಿರಿಯಾಗೆ ಕಳುಹಿಸಲು ಆರ್ಥಿಕ ನೆರವು ನೀಡುತ್ತಿದ್ದರು.

ತೌಕೀರ್‌, ತನ್ನ ಕ್ಲಿನಿಕ್‌ಗೆ ಬರುವ ಸಮುದಾಯದ ಯುವಕರಿಗೆ ಧರ್ಮ ಸ್ಥಾಪನೆ ಬಗ್ಗೆ ಸಾಕಷ್ಟು ಬೋಧನೆ ಮಾಡುತ್ತಿದ್ದ. ಅದರಿಂದ ಪ್ರೇರಿತಗೊಂಡ ಯುವಕರಿಗೆ ಸಿರಿಯಾಗೆ ಕಳುಹಿಸಲು ರೆಹಮಾನ್‌, ಜುಹೇಬ್‌ ಜತೆ ಸೇರಿ ಆರ್ಥಿಕ ಸಹಾಯ ಮಾಡುತ್ತಿದ್ದ. ಕಂಪ್ಯೂಟರ್‌ ಅಪ್ಲೀಕೇಷನ್‌ಗಳ ತಜ್ಞನಾಗಿರುವ ಜುಹೇಬ್‌, ವೈದ್ಯ ಅಬ್ದುರ್‌ ರೆಹಮಾನ್‌ಗೆ ಐಸಿಸ್‌ಗಾಗಿ ಭಾರತ ಮೂಲದ ಟೆಲಿಗ್ರಾಂಮತ್ತು ವಿದೇಶಿ ಮೂಲದ ತ್ರೀಮಾ ಎಂಬ ಆ್ಯಪ್‌ ಸಿದ್ದಪಡಿಸುವಲ್ಲಿ ನೆರವು ನೀಡಿದ್ದ. ಈ ಮೂಲಕ ಸಂಘಟನೆಯ ಅತ್ಯಂತ ಗೌಪ್ಯ ವಿಚಾರಗಳು ಹಾಗೂ ವೈದ್ಯಕೀಯ ಸೇವೆ ಒದಗಿಸುವುದು ಮತ್ತು ಶಸ್ತ್ರಾಸ್ತ್ರಪೂರೈಕೆ ಮಾಡುವ ಕುರಿತು ಆ್ಯಪ್‌ ಗಳನ್ನು ಸಿದ್ದಪಡಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ವಿವಿಧೆಡೆ ಕ್ಲಿನಿಕ್‌ ಬದಲು :  ಬೆಂಗಳೂರಿನ ಆಗ್ನೇಯ ವಿಭಾಗದಲ್ಲಿ ಸಣ್ಣದಾದ ಕ್ಲಿನಿಕ್‌ ನಡೆಸುತ್ತಿದ್ದ ತೌಕೀರ್‌, ಪೊಲೀಸರಕಣ್ಣು ತಪ್ಪಿಸಲು ನಾಲ್ಕೈದುಕಡೆಗಳಲ್ಲಿಕ್ಲಿನಿಕ್‌ ಬದಲಿಸಿದ್ದಾನೆ. ಇನ್ನುಕಂಪ್ಯೂಟರ್‌ ಅಪ್ಲೀಕೇಷನ್‌ಗಳ ತಜ್ಞನಾಗಿರುವ ಜುಹೇಬ್‌ಕೂಡ ನಾಲ್ಕೈದುಕಡೆ ಮನೆ ಬದಲಿಸಿದ್ದ. ತಮ್ಮಕಾರ್ಯಚಟುವಟಿಕೆ ಗಳ ಬಗ್ಗೆ ಪೊಲೀಸರು ಹಾಗೂ ತನಿಖಾಧಿಕಾರಿ ಗಳುಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಸಿರಿಯಾಗೆ ಪಲಾಯ ನ ಮಾಡಿದ್ದರು. ಹಲವು ವರ್ಷಗಳ ಹಿಂದೆಯೇ ದೇಶ ಬಿಟ್ಟು ತೆರಳಿದ್ದು, ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದಾರೆ. ಸಿರಿಯಾದಲ್ಲಿಕೆಲ ವರ್ಷಗಳ ತಂಗಿದ್ದ ಶಂಕಿತರು, ಅನಂತರ ಬೇರೆಡೆ ಸ್ಥಳಾಂತ ರಗೊಂಡಿದ್ದಾರೆ. ಅಲ್ಲಿಂದಲೇ ಬೆಂಗಳೂರು ಯುವಕರನ್ನು ಐಸಿಸ್‌ ಸಂಘಟನೆಗೆ ಸೆಳೆಯುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.